ರಾಕೇಶ್ ಪೂಜಾರಿ 
ಸಿನಿಮಾ ಸುದ್ದಿ

Comedy Khiladigalu season-3 ಖ್ಯಾತಿಯ ರಾಕೇಶ್‌ ಪೂಜಾರಿ ವಿಧಿವಶ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಉಡುಪಿ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ವಿಧಿವಶರಾಗಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಅವರ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ.

ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

ರಾಕೇಶ್ ಅವರು 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆಯಾದರು. ರನ್ನರ್ ಅಪ್ ತಂಡದಲ್ಲಿ ಇದ್ದರು. ನಂತರದ ಸೀಸನ್ 3​ನಲ್ಲಿ ವಿನ್ನರ್ ಆದರು.

ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್