ಶಿವರಾಜ್ ಕುಮಾರ್ ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ಶಿವಣ್ಣನ ಮನೆಯಲ್ಲಿ ಸೀಕ್ರೆಟ್ ಮೀಟಿಂಗ್, ಸಭೆಯಲ್ಲಿ ಯಾರ್ಯಾರು ಇದ್ರು, ಚರ್ಚಿಸಿದ್ದೇನು?

ಸಭೆಯಲ್ಲಿ ಗಣೇಶ್, ದುನಿಯಾ ವಿಜಯ್, ಧ್ರುವಾ ಸರ್ಜಾ ಸೇರಿದಂತೆ ಹಲವು ನಟರು ಭಾಗಿಯಾಗಿದ್ದರು. ಸಿನಿಮಾ ಪ್ರದರ್ಶಕರು ಮತ್ತು ವಿತರಕರು ಕೂಡ ಮೀಟಿಂಗ್​ನಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರ ನಾಗವಾರದ ನಿವಾಸದಲ್ಲಿ ಇಂದು ಇದಕ್ಕಿದ್ದಂತೆ ಸೀಕ್ರೆಟ್ ಮೀಟಿಂಗ್ ನಡೆದಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸಭೆಯಲ್ಲಿ ಗಣೇಶ್, ದುನಿಯಾ ವಿಜಯ್, ಧ್ರುವಾ ಸರ್ಜಾ ಸೇರಿದಂತೆ ಹಲವು ನಟರು ಭಾಗಿಯಾಗಿದ್ದರು. ಸಿನಿಮಾ ಪ್ರದರ್ಶಕರು ಮತ್ತು ವಿತರಕರು ಕೂಡ ಮೀಟಿಂಗ್​ನಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಕನ್ನಡ ಚಿತ್ರರಂಗ ಸದ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಥೀಯೇಟರ್​ಗೆ ಜನ ಬರುತ್ತಿಲ್ಲ. ಕನ್ನಡ ಸಿನಿಮಾಗಳಿಗೆ ಥೀಯೇಟರ್ ಕೊರತೆ, ಟಿಕೆಟ್ ಬೆಲೆ ವಿಚಾರ, ದಿನೇ ದಿನೇ ಕಡಿಮೆ ಆಗುತ್ತಿರೋ ಕನ್ನಡ ಸಿನಿಮಾಗಳು, ಪ್ರೊಡ್ಯೂಸರ್​ಗಳ ಸಂಕಷ್ಟ, ವಿತರಕರು-ಪ್ರದರ್ಶಕರ ಸಂಕಷ್ಟ ಹೀಗೇ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆದಿದೆ.

ಸಭೆ ಬಳಿಕ ಮಾಹಿತಿ ನೀಡಿರುವ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಥಿಯೇಟರ್ ಸಮಸ್ಯೆ ದೂರ ಮಾಡಲು, ಶಿವಣ್ಣ ಮನೇಲಿ ಸಭೆ ಆಯೋಜಿಸಲಾಗಿತ್ತು. ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧಾರ ಮಾಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆದಿದೆ. ಹೀರೋಗಳು ಐದು ವರ್ಷಕ್ಕೆ ಒಂದು ಸಿನಿಮಾ ಮಾಡುವ ಬದಲು, ವರ್ಷಕ್ಕೆ ಎರಡು ಸಿನಿಮಾಗಳು ಮಾಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಥಿಯೇಟರ್ ಮುಚ್ಚುತ್ತಿರೋದರ ಕುರಿತು ಬಹುಮುಖ್ಯವಾಗಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಸ್ಟಾರ್ ಸಿನಿಮಾಗಳಿಂದ ಥಿಯೇಟರ್​ಗಳು ಉಳಿಯುತ್ತವೆ. ಹೀಗಾಗಿ ಸ್ಟಾರ್​ಗಳು ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಬೇಕು. ಥಿಯೇಟರ್​ಗಳಿಗೆ ಜನ ಬರುತ್ತಿಲ್ಲ, ಇದು ದೊಡ್ಡ ಸಮಸ್ಯೆ ಆಗಿದೆ. ಥಿಯೇಟರ್​ಗಳಿಗೆ ಲ್ಯಾಂಡ್ ಟ್ಯಾಕ್ಸ್, ಸಬ್ಸಿಡಿ, ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವಂತೆ ಮುಖ್ಯಮಂತ್ರಿ ಬಳಿ ಬೇಡಿಕೆ ಇಡಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT