ಸಾಯಿ ಧನ್ಸಿಕಾ, ವಿಶಾಲ್ 
ಸಿನಿಮಾ ಸುದ್ದಿ

ಶೀಘ್ರದಲ್ಲೇ 'ಕಬಾಲಿ' ನಟಿ ಸಾಯಿ ಧನ್ಸಿಕಾ ಜೊತೆ 47 ವರ್ಷದ ನಟ ವಿಶಾಲ್ ಮದುವೆ!

ತಮಿಳು ನಟ ವಿಶಾಲ್ ಕೃಷ್ಣ ರೆಡ್ಡಿ ಇತ್ತೀಚೆಗೆ ವಿಲ್ಲುಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೂರ್ಛೆ ಹೋಗಿ ಬಿದ್ದ ನಂತರ ಅವರು ಸುದ್ದಿಯಲ್ಲಿದ್ದರು.

ತಮಿಳು ನಟ ವಿಶಾಲ್ ಕೃಷ್ಣ ರೆಡ್ಡಿ ಇತ್ತೀಚೆಗೆ ವಿಲ್ಲುಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೂರ್ಛೆ ಹೋಗಿ ಬಿದ್ದ ನಂತರ ಅವರು ಸುದ್ದಿಯಲ್ಲಿದ್ದರು. 47 ವರ್ಷದ ನಟ ವಿಶಾಲ್ ಅವರು ಸುಂದರ್ ಸಿ ಅವರ 'ಮಧ ಗಜ ರಾಜ' ಚಿತ್ರದೊಂದಿಗೆ ಮತ್ತೆ ಚಿತ್ರರಂಗಕ್ಕೆ ಮರಳಿದ್ದರು. ನಟನಾ ಸಾಹಸ ಮತ್ತು ಆರೋಗ್ಯದ ಬಗ್ಗೆ ಮಾಹಿತಿಯ ಹೊರತಾಗಿ ವಿಶಾಲ್ ಮತ್ತೊಂದು ವೈಯಕ್ತಿಕ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚಿನ ಸುದ್ದಿಗಳ ಪ್ರಕಾರ, ನಟ ಕಬಾಲಿ ಖ್ಯಾತಿಯ ಸಾಯಿ ಧನ್ಸಿಕಾ ಅವರನ್ನು ಮದುವೆಯಾಗಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡಿನಲ್ಲಿ ದೂರದರ್ಶನ, ಚಲನಚಿತ್ರ ಮತ್ತು ರಂಗಭೂಮಿ ನಟರ ಸಂಘವಾದ ದಕ್ಷಿಣ ಭಾರತೀಯ ಕಲಾವಿದರ ಸಂಘ ಎಂದೂ ಕರೆಯಲ್ಪಡುವ ನಡಿಗರ್ ಸಂಗಮದ ಸದಸ್ಯರಾಗಿರುವ ನಟ ವಿಶಾಲ್ ಗೆ ಮಾಧ್ಯಮ ಸಂವಾದದ ಸಮಯದಲ್ಲಿ ನಟನನ್ನು ಅವರ ಮದುವೆ ಯೋಜನೆಗಳ ಬಗ್ಗೆ ಕೇಳಿದಾಗ ಅವರು ನಾವು ಮದುವೆಯ ಬಗ್ಗೆ ಚರ್ಚಿಸಿದ್ದೇವೆ ಮತ್ತು ಅದು ಪ್ರೇಮ ವಿವಾಹವಾಗಿರುತ್ತದೆ. ವಧು ಮತ್ತು ಮದುವೆಯ ದಿನಾಂಕದ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುತ್ತೇನೆ ಎಂದು ಉತ್ತರಿಸಿದರು.

ಸಾಯಿ ಧನ್ಶಿಕಾ ಜೊತೆ ವಿಶಾಲ್ ಅವರ ವಿವಾಹದ ವರದಿಗಳು ನಿಜ ಎಂದು ಅವರ ಆಪ್ತ ಮೂಲಗಳು ದೃಢಪಡಿಸಿವೆ. ಸಾಯಿ ಧನ್ಶಿಕಾ ನಾಯಕಿಯಾಗಿ ನಟಿಸಲಿರುವ ಮುಂಬರುವ ತಮಿಳು ಚಿತ್ರ ಯೋಗಿಡಾದಲ್ಲಿ ನಟ ಮುಖ್ಯ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮ ಇಂದು ಸಂಜೆ ನಿಗದಿಯಾಗಿದ್ದು, ಅಲ್ಲಿ ಅವರ ವಿವಾಹದ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಬಹುದು ಎಂಬ ಊಹಾಪೋಹಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT