ಸಾಯಿ ಧನ್ಸಿಕಾ, ವಿಶಾಲ್ 
ಸಿನಿಮಾ ಸುದ್ದಿ

ಶೀಘ್ರದಲ್ಲೇ 'ಕಬಾಲಿ' ನಟಿ ಸಾಯಿ ಧನ್ಸಿಕಾ ಜೊತೆ 47 ವರ್ಷದ ನಟ ವಿಶಾಲ್ ಮದುವೆ!

ತಮಿಳು ನಟ ವಿಶಾಲ್ ಕೃಷ್ಣ ರೆಡ್ಡಿ ಇತ್ತೀಚೆಗೆ ವಿಲ್ಲುಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೂರ್ಛೆ ಹೋಗಿ ಬಿದ್ದ ನಂತರ ಅವರು ಸುದ್ದಿಯಲ್ಲಿದ್ದರು.

ತಮಿಳು ನಟ ವಿಶಾಲ್ ಕೃಷ್ಣ ರೆಡ್ಡಿ ಇತ್ತೀಚೆಗೆ ವಿಲ್ಲುಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೂರ್ಛೆ ಹೋಗಿ ಬಿದ್ದ ನಂತರ ಅವರು ಸುದ್ದಿಯಲ್ಲಿದ್ದರು. 47 ವರ್ಷದ ನಟ ವಿಶಾಲ್ ಅವರು ಸುಂದರ್ ಸಿ ಅವರ 'ಮಧ ಗಜ ರಾಜ' ಚಿತ್ರದೊಂದಿಗೆ ಮತ್ತೆ ಚಿತ್ರರಂಗಕ್ಕೆ ಮರಳಿದ್ದರು. ನಟನಾ ಸಾಹಸ ಮತ್ತು ಆರೋಗ್ಯದ ಬಗ್ಗೆ ಮಾಹಿತಿಯ ಹೊರತಾಗಿ ವಿಶಾಲ್ ಮತ್ತೊಂದು ವೈಯಕ್ತಿಕ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚಿನ ಸುದ್ದಿಗಳ ಪ್ರಕಾರ, ನಟ ಕಬಾಲಿ ಖ್ಯಾತಿಯ ಸಾಯಿ ಧನ್ಸಿಕಾ ಅವರನ್ನು ಮದುವೆಯಾಗಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡಿನಲ್ಲಿ ದೂರದರ್ಶನ, ಚಲನಚಿತ್ರ ಮತ್ತು ರಂಗಭೂಮಿ ನಟರ ಸಂಘವಾದ ದಕ್ಷಿಣ ಭಾರತೀಯ ಕಲಾವಿದರ ಸಂಘ ಎಂದೂ ಕರೆಯಲ್ಪಡುವ ನಡಿಗರ್ ಸಂಗಮದ ಸದಸ್ಯರಾಗಿರುವ ನಟ ವಿಶಾಲ್ ಗೆ ಮಾಧ್ಯಮ ಸಂವಾದದ ಸಮಯದಲ್ಲಿ ನಟನನ್ನು ಅವರ ಮದುವೆ ಯೋಜನೆಗಳ ಬಗ್ಗೆ ಕೇಳಿದಾಗ ಅವರು ನಾವು ಮದುವೆಯ ಬಗ್ಗೆ ಚರ್ಚಿಸಿದ್ದೇವೆ ಮತ್ತು ಅದು ಪ್ರೇಮ ವಿವಾಹವಾಗಿರುತ್ತದೆ. ವಧು ಮತ್ತು ಮದುವೆಯ ದಿನಾಂಕದ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುತ್ತೇನೆ ಎಂದು ಉತ್ತರಿಸಿದರು.

ಸಾಯಿ ಧನ್ಶಿಕಾ ಜೊತೆ ವಿಶಾಲ್ ಅವರ ವಿವಾಹದ ವರದಿಗಳು ನಿಜ ಎಂದು ಅವರ ಆಪ್ತ ಮೂಲಗಳು ದೃಢಪಡಿಸಿವೆ. ಸಾಯಿ ಧನ್ಶಿಕಾ ನಾಯಕಿಯಾಗಿ ನಟಿಸಲಿರುವ ಮುಂಬರುವ ತಮಿಳು ಚಿತ್ರ ಯೋಗಿಡಾದಲ್ಲಿ ನಟ ಮುಖ್ಯ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮ ಇಂದು ಸಂಜೆ ನಿಗದಿಯಾಗಿದ್ದು, ಅಲ್ಲಿ ಅವರ ವಿವಾಹದ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಬಹುದು ಎಂಬ ಊಹಾಪೋಹಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT