ಶಾನ್ವಿ ಶ್ರೀವಾತ್ಸವ- ರಿಚಿ ರಿಚ್ ಚಿತ್ರದ ಪೋಸ್ಟರ್ - ಅಮೃತಾ ಅಯ್ಯಂಗಾರ್ 
ಸಿನಿಮಾ ಸುದ್ದಿ

ಸಿಂಪಲ್ ಸುನಿ ನಿರ್ದೇಶನದ, ಕಾರ್ತಿಕ್ ಮಹೇಶ್ ನಟನೆಯ 'ರಿಚಿ ರಿಚ್' ಚಿತ್ರಕ್ಕೆ ನಾಯಕಿಗಾಗಿ ಹುಡುಕಾಟ

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲು ನಟಿಯರಾದ ಶಾನ್ವಿ ಶ್ರೀವಾಸ್ತವ ಮತ್ತು ಅಮೃತಾ ಅಯ್ಯಂಗಾರ್ ಅವರನ್ನು ಸಂಪರ್ಕಿಸಲಾಗಿದೆ. ಚಿತ್ರದಲ್ಲಿ ಅವರು ನಟಿಸುವ ಕುರಿತು ಅಧಿಕೃತವಾಗಿ ದೃಢೀಕರಿಸಲಾಗಿಲ್ಲವಾದರೂ, ಚರ್ಚೆಗಳು ನಡೆಯುತ್ತಿವೆ.

ಬಿಗ್ ಬಾಸ್ ಕನ್ನಡ ವಿಜೇತ ಕಾರ್ತಿಕ್ ಮಹೇಶ್ ಸದ್ಯ ಸಿಂಪಲ್ ಸುನಿ ನಿರ್ದೇಶನದ ಮತ್ತು ಎವಿಆರ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ನಿರ್ಮಿಸುತ್ತಿರುವ 'ರಿಚಿ ರಿಚ್' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಒಂದು ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಮುಂದಿನ ಚಿತ್ರೀಕರಣ ಈ ವಾರ ಪುನರಾರಂಭವಾಗಲಿದೆ. ಚಿತ್ರದ ಉಳಿದ ತಾರಾಗಣದ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡದಿದ್ದರೂ, ನಾಯಕಿಯರ ಸುತ್ತ ಹಲವು ಮಾತುಗಳು ಕೇಳಿಬರುತ್ತಿವೆ.

ಮೂಲಗಳ ಪ್ರಕಾರ, ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲು ನಟಿಯರಾದ ಶಾನ್ವಿ ಶ್ರೀವಾಸ್ತವ ಮತ್ತು ಅಮೃತಾ ಅಯ್ಯಂಗಾರ್ ಅವರನ್ನು ಸಂಪರ್ಕಿಸಲಾಗಿದೆ. ಚಿತ್ರದಲ್ಲಿ ಅವರು ನಟಿಸುವ ಕುರಿತು ಅಧಿಕೃತವಾಗಿ ದೃಢೀಕರಿಸಲಾಗಿಲ್ಲವಾದರೂ, ಚರ್ಚೆಗಳು ನಡೆಯುತ್ತಿವೆ. ಅವರು ಸೆಟ್‌ಗೆ ಸೇರಿದ ನಂತರವೇ ಈ ಬಗ್ಗೆ ಮಾಹಿತಿ ಬಹಿರಂಗಪಡಿಸಬಹುದು ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ತಿಳಿದುಬಂದಿದೆ.

'ರಿಚಿ ರಿಚ್' ಚಿತ್ರವು ಮಧ್ಯಮ ವರ್ಗದ ನಾಯಕನೊಬ್ಬನ ಸಂಪತ್ತಿನ ಅನ್ವೇಷಣೆಯ ಸುತ್ತ ಸುತ್ತುತ್ತದೆ. ಕಾರ್ತಿಕ್ ಮಹೇಶ್ ಅವರು ರಿದ್ದೇಶ್ ಚಿನ್ನಯ್ಯ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಾನ್ವಿ ಅಥವಾ ಅಮೃತಾ ನಾಯಕಿಯಾಗಲಿದ್ದಾರೆ ಎನ್ನಲಾಗಿದೆ.

ಸ್ವಲ್ಪ ಸಮಯದವರೆಗೆ ಸಿನಿಮಾ ರಂಗದಿಂದ ದೂರವಿದ್ದ ಶಾನ್ವಿ, ಇತ್ತೀಚೆಗೆ ನಾಗತಿಹಳ್ಳಿ ಚಂದ್ರಶೇಖರ್ ಅವರ 'ಅಮೆರಿಕಾ ಅಮೆರಿಕಾ 2' ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ. ಮತ್ತೊಂದೆಡೆ, ಅಮೃತಾ ಅಯ್ಯಂಗಾರ್, ಕೃಷ್ಣ ಜೊತೆ ನಟಿಸಿರುವ ಫಾದರ್ ಚಿತ್ರದ ಚಿತ್ರೀಕರಣವನ್ನು ಇದೀಗ ಪೂರ್ಣಗೊಳಿಸಿದ್ದಾರೆ.

ರಿಚಿ ರಿಚ್ ಚಿತ್ರದಲ್ಲಿ ಸೂಪರ್ ಮಾಡೆಲ್ ಆಯೇಷಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ರ‍್ಯಾಂಪ್‌ಗಳಲ್ಲಿ ಹೆಸರುವಾಸಿಯಾಗಿರುವ ಆಯೇಷಾ ಇದೀಗ ನಟನಾ ಅವಕಾಶಗಳನ್ನು ಅನ್ವೇಷಿಸುತ್ತಿದ್ದಾರೆ ಮತ್ತು ವಿಭಿನ್ನ ಪಾತ್ರಗಳನ್ನು ನಿರ್ವಹಿಸುವತ್ತ ಕೆಲಸ ಮಾಡುತ್ತಿದ್ದಾರೆ.

ರಿಚಿ ರಿಚ್‌ಗೆ ವೀರ್ ಸಮರ್ಥ್ ಸಂಗೀತ ನೀಡಲಿದ್ದಾರೆ ಮತ್ತು ಅಭಿಲಾಷ್ ಕಲಾಟ್ಟಿ ಛಾಯಾಗ್ರಹಣ ಮಾಡಲಿದ್ದಾರೆ. ಈಮಧ್ಯೆ, ಬಾಲಿವುಡ್ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ನಟಿಸಿ ಸುಜಯ್ ಶಾಸ್ತ್ರಿ ನಿರ್ದೇಶಿಸುತ್ತಿರುವ 8 ಚಿತ್ರಕ್ಕೂ ಎವಿಆರ್ ಎಂಟರ್‌ಟೈನ್‌ಮೆಂಟ್ಸ್ ಬೆಂಬಲ ನೀಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT