ನಟಿ ರಮ್ಯಾ  
ಸಿನಿಮಾ ಸುದ್ದಿ

'ಮೈಸೂರು ಸ್ಯಾಂಡಲ್'ಗೆ ಬ್ರ್ಯಾಂಡ್ ಅಂಬಾಸಿಡರ್ ಅಗತ್ಯವಿಲ್ಲ, ಜನ್ರ ಟ್ಯಾಕ್ಸ್ ಹಣ ವೇಸ್ಟ್ ಅಷ್ಟೆ: ನಟಿ ರಮ್ಯಾ

ರಾಯಭಾರಿ ನೇಮಕ ಮಾಡಿ ಪ್ರಚಾರ ಮಾಡುವ ಅಗತ್ಯವಿಲ್ಲ, ಇದು ತೆರಿಗೆ ಪಾವತಿದಾರರ ಹಣ ದುರುಪಯೋಗವಷ್ಟೆ ಹೊರತು ಏನೂ ಪ್ರಯೋಜನವಿಲ್ಲ ಎಂದಿದ್ದಾರೆ.

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ನ ರಾಯಭಾರಿಯಾಗಿ 2 ವರ್ಷಗಳ ಅವಧಿಗೆ 6 ಕೋಟಿ ರೂಪಾಯಿ ನೀಡಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪರ ವಿರೋಧ ಚರ್ಚೆ ಸಾಕಷ್ಟು ನಡೆಯುತ್ತಿದೆ.

ಈ ಬಗ್ಗೆ ಇಂದು ಇನ್ಸ್ಟಾಗ್ರಾಮ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ಇಂದು ಒಂದು ವಸ್ತುವನ್ನು ಮಾರುಕಟ್ಟೆಯಲ್ಲಿ ಪ್ರಚಾರ ಮಾಡಲು ಹತ್ತಾರು ದಾರಿಗಳಿರುತ್ತವೆ. ರಾಯಭಾರಿ ನೇಮಕ ಮಾಡಿ ಪ್ರಚಾರ ಮಾಡುವ ಅಗತ್ಯವಿಲ್ಲ, ಇದು ತೆರಿಗೆ ಪಾವತಿದಾರರ ಹಣ ದುರುಪಯೋಗವಷ್ಟೆ ಹೊರತು ಏನೂ ಪ್ರಯೋಜನವಿಲ್ಲ ಎಂದಿದ್ದಾರೆ.

ಇಂದು ಸೆಲೆಬ್ರಿಟಿಗಳು ಬಳಸುತ್ತಾರೆ ಎಂಬ ಮಾತ್ರಕ್ಕೆ ಜನರು ವಸ್ತುಗಳನ್ನು ಖರೀದಿಸುವುದಿಲ್ಲ. ನಾವು ಸೋಪ್ ಬಳಸಿದರೆ ನಟಿಯ ರೀತಿ ಆಗುವುದಿಲ್ಲ ಎಂಬುದು ಜನತೆಗೆ ಚೆನ್ನಾಗಿ ಗೊತ್ತಿದೆ. ಜನರು ಅದನ್ನು ಮೆಚ್ಚಿ ಖರೀದಿಸಿ ಬಳಸಬೇಕೆಂದರೆ ವಸ್ತುವಿನ ಗುಣಮಟ್ಟವಿರಬೇಕು.

ಮೈಸೂರು ಸ್ಯಾಂಡಲ್ ಗೆ ಪ್ರತಿ ಕನ್ನಡಿಗರು ರಾಯಭಾರಿಗಳು

ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಗೆ ದೀರ್ಘ ಇತಿಹಾಸವಿದೆ, ಪರಂಪರೆಯಿದೆ, ಪ್ರತಿ ಕನ್ನಡಿಗರು ಅದರ ರಾಯಭಾರಿಗಳು. ಮೈಸೂರು ಸ್ಯಾಂಡಲ್ ಸೋಪ್ ನ್ನು ಜಗತ್ತಿಗೆ ಪರಿಚಯಿಸಲು ಪ್ರತಿಯೊಬ್ಬರನ್ನೂ ಒಗ್ಗೂಡಿಸಿ.ಅದನ್ನು ಕನ್ನಡಿಗರು ಪ್ರೀತಿಯಿಂದ ಖುಷಿಯಿಂದ ಮಾಡುತ್ತಾರೆ. ಸಂಘಟಿತವಾಗಿ, ಸೃಜನಶೀಲವಾಗಿ ಗ್ರಾಹಕರೊಂದಿಗೆ ಸಂಬಂಧ ಹೊಂದುವುದು ಮುಖ್ಯವಾಗುತ್ತದೆ ಎಂದರು.

ಆಪಲ್ ಬಹಳ ಯಶಸ್ವಿ ಉದ್ಯಮವಾಗಿ ಬೆಳೆದಿದೆ, ಆದರೆ ಅದಕ್ಕೆ ಸಂಭಾವನೆ ನೀಡಿ ನೇಮಿಸಿದ ಬ್ರಾಂಡ್ ಅಂಬಾಸಿಡರ್ ಇರಲಿಲ್ಲ ಎಂದು ಕೂಡ ನಟಿ ರಮ್ಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT