ಶ್ರೀಧರ್ ನಾಯಕ್ 
ಸಿನಿಮಾ ಸುದ್ದಿ

ಆರ್ಥಿಕ ಸಮಸ್ಯೆಯಿಂದ ಕಂಗೆಟ್ಟಿದ್ದ ನಟ: ಪಾರು ಸೀರಿಯಲ್ ಖ್ಯಾತಿಯ ಶ್ರೀಧರ್ ನಾಯಕ್ ಇನ್ನಿಲ್ಲ

ಗುರುತೇ ಸಿಗದಷ್ಟು ಬದಲಾಗಿದ್ದನ್ನು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರೆಳೆದಿದ್ದಾರೆ

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ನಿಧನ ರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಆರ್ಥಿಕ ಸಹಾಯ ಮಾಡುವಂತೆ ಅನೇಕರಲ್ಲಿ ಮನವಿ ಮಾಡಿದ್ದರು. ಗುರುತೇ ಸಿಗದಷ್ಟು ಬದಲಾಗಿದ್ದನ್ನು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಕಳೆಬರಹವನ್ನು ಇಡಲಾಗಿದೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಜೀ ಕನ್ನಡದ 'ಪಾರು'‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಅಂತಹ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ನೆರವನ್ನು ಕೋರಿದ್ದರು. ಕಿರುತೆರೆ ತಾರೆಯರು ಹಾಗೂ ಜನರು ಇವರ ಪರಿಸ್ಥಿತಿಯನ್ನು ನೋಡಿ ನೆರವನ್ನು ನೀಡಿದ್ದರು.

ಕೋವಿಡ್ ಸಂದರ್ಭದಲ್ಲಿ ಶ್ರೀಧರ್ ನಾಯಕ್ ಅವರಿಗೆ ಕೆಲಸವಿಲ್ಲದೆ ಆರ್ಥಿಕ ಸಮಸ್ಯೆ ಎದುರಾಗಿತ್ತು. ಇನ್ನೊಂದು ಕಡೆ ಕೌಟುಂಬಿಕ ಸಮಸ್ಯೆ ಕೂಡ ಇತ್ತು. ಆ ವೇಳೆ ಕೆಲಸ ಗಿಟ್ಟಿಸಿಕೊಳ್ಳುವುದಕ್ಕೆ ಶ್ರೀಧರ್ ನಾಯಕ್ ಪರದಾಡಿದ್ದರು. ಚಿಕ್ಕ ಪುಟ್ಟ ಕೆಲಸ ಸಿಗುತ್ತಿತ್ತು. ಜೊತೆಗೆ ದೊಡ್ಡ ಪಾತ್ರಗಳೇನು ಸಿಗುತ್ತಿರಲಿಲ್ಲ. ಹೀಗಾಗಿ ಮನೆ ಬಾಡಿಗೆ ಕಟ್ಟುವುದಕ್ಕೂ ಕಷ್ಟವಾಗುತ್ತಿತ್ತು ಎಂದು ಹೇಳಿಕೊಂಡಿದ್ದರು. ಊಟ ಸರಿಯಾಗಿ ಮಾಡದೆ ದೇಹದಲ್ಲಿ ವಿಟಮಿನ್ ಹಾಗೂ ಪ್ರೋಟಿನ್ ಕಡಿಮೆಯಾಗಿತ್ತು. ಇದರಿಂದ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಾ ಹೋಯ್ತು ಎಂದು ಸ್ವತ: ಶ್ರೀಧರ್ ನಾಯಕ್ ಹೇಳಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT