ರೋಹಿತ್ - ಸಹ್ಯಾದ್ರಿ ಚಿತ್ರ 
ಸಿನಿಮಾ ಸುದ್ದಿ

'ಆರ' ಖ್ಯಾತಿಯ ರೋಹಿತ್ ಮುಂದಿನ ಚಿತ್ರ ಘೋಷಣೆ; ಆಧ್ಯಾತ್ಮಿಕ ಥ್ರಿಲ್ಲರ್ 'ಸಹ್ಯಾದ್ರಿ'

ಚಿತ್ರವನ್ನು ಮೊದಲಿಗೆ ಕನ್ನಡದಲ್ಲಿ ಚಿತ್ರೀಕರಿಸಲಾಗುವುದು. ನಂತರ ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‌ಗೆ ಡಬ್ ಮಾಡುವ ಯೋಜನೆ ಇದೆ.

2023ರಲ್ಲಿ‌ ತೆರೆಕಂಡ 'ಆರ' ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ, ನಿರ್ದೇಶಕ ರೋಹಿತ್ ಇದೀಗ ತಮ್ಮ ಮುಂದಿನ ಚಿತ್ರಕ್ಕೆ ಸಿದ್ಧರಾಗುತ್ತಿದ್ದಾರೆ. ತಮ್ಮ ಎರಡನೇ ಚಿತ್ರವನ್ನು ಘೋಷಿಸಿರುವ ರೋಹಿತ್, ಚಿತ್ರಕ್ಕೆ 'ಸಹ್ಯಾದ್ರಿ' ಎಂದು ಹೆಸರಿಟ್ಟಿದ್ದಾರೆ. ಚಿತ್ರದ ಶೀರ್ಷಿಕೆಯ ಟೀಸರ್ ರಿಲೀಸ್ ಮೂಲಕ ಮಾಹಿತಿ ನೀಡಲಾಗಿದೆ. ಚಿತ್ರವು ಆಧ್ಯಾತ್ಮಿಕ ಥ್ರಿಲ್ಲರ್ ಎನ್ನಲಾಗಿದೆ.

'ಸಹ್ಯಾದ್ರಿ ಚಿತ್ರವು ಅಸಾಧಾರಣವಾಗಿ ಮೆದುಳಿನಲ್ಲಿ ಹೆಚ್ಚಿನ ಸಂಖ್ಯೆಯ ನರಕೋಶಗಳನ್ನು ಹೊಂದುತ್ತಾ ಅಕಾಲಿಕವಾಗಿ ಜನಿಸಿದ ಮಗುವಿನ ಕಥೆಯನ್ನು ಹೇಳುತ್ತದೆ. ಆ ಮಗು ಬೆಳೆದಂತೆ, ಅಪಾರ ಶಕ್ತಿಗಳನ್ನು ತಡೆದುಕೊಳ್ಳುವ ಮತ್ತು ನಿಯಂತ್ರಿಸುವ ಸಾಮರ್ಥ್ಯವಿರುವ ಪ್ರಬಲ ಶಕ್ತಿಯಾಗಿ ಹೊರಹೊಮ್ಮುತ್ತದೆ. ಈ ನಿರೂಪಣೆಯೊಂದಿಗೆ ನಾನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೊಸ ಆಧ್ಯಾತ್ಮಿಕ ಥ್ರಿಲ್ಲರ್ ಚಿತ್ರ ನಿರ್ಮಿಸುವ ಗುರಿಯನ್ನು ಹೊಂದಿದ್ದೇನೆ' ಎನ್ನುತ್ತಾರೆ ರೋಹಿತ್.

'ಇದು ಭಾರತೀಯ ಚಿತ್ರರಂಗದಲ್ಲಿ ಸಂಪೂರ್ಣವಾಗಿ ಅನ್ವೇಷಿಸದ ಆಧ್ಯಾತ್ಮಿಕತೆ ಮತ್ತು ಥ್ರಿಲ್ಲರ್ ಸಂಯೋಜನೆಯಾಗಿದೆ. ಚಿತ್ರವು ತೀವ್ರವಾದ ಮತ್ತು ಭಾವನಾತ್ಮಕವಾಗಿ ಬೇರೂರಿದ ಅಂಶವನ್ನು ಒಳಗೊಂಡಿದೆ' ಎಂದು ಅವರು ಹೇಳುತ್ತಾರೆ.

ಚಿತ್ರವನ್ನು ಮೊದಲಿಗೆ ಕನ್ನಡದಲ್ಲಿ ಚಿತ್ರೀಕರಿಸಲಾಗುವುದು. ನಂತರ ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‌ಗೆ ಡಬ್ ಮಾಡುವ ಯೋಜನೆ ಇದೆ. ಪಶ್ಚಿಮ ಘಟ್ಟಗಳ ರಮಣೀಯ ಪ್ರದೇಶಗಳಲ್ಲಿ, ವಿಶೇಷವಾಗಿ ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದ್ದು, ಶೀಘ್ರದಲ್ಲೇ ನಿರ್ಮಾಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಚಿತ್ರತಂಡ 2026ರ ಜುಲೈನಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದಾರೆ.

ಎಆರ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ರೇಣುಕಾ ಪಿಎನ್ ಅವರ ಬೆಂಬಲದೊಂದಿಗೆ ಸಹ್ಯಾದ್ರಿ ಚಿತ್ರಕ್ಕೆ ಛಾಯಾಗ್ರಾಹಕ ವಿಲಿಯಂ ಡೇವಿಡ್ (ವಿಕ್ರಾಂತ್ ರೋಣ) ಅವರ ಅಡಿಯಲ್ಲಿ ಕೆಲಸ ಮಾಡಿರುವ ವಿನೋದ್ ಲೋಕಣ್ಣನವರ್ ಅವರು ಛಾಯಾಗ್ರಹಣವನ್ನು ನಿರ್ವಹಿಸುತ್ತಾರೆ. ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಅವರ ಸಹಾಯಕ ನವನಾಥ್ ವಾಸುದೇವ್ ಅವರ ಸಂಗೀತ ಸಂಯೋಜನೆ, ಮಾದೇಶ್ ರಾಜ್ ಅವರು ಸಂಕಲನ ಮತ್ತು ವಿಎಫ್‌ಎಕ್ಸ್ ಅನ್ನು ನೋಡಿಕೊಳ್ಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT