ನಟಿ ರಮ್ಯಾ ಹಾಗೂ ಕಮಲ್ ಹಾಸನ್ 
ಸಿನಿಮಾ ಸುದ್ದಿ

'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್‌ ಹಾಸನ್‌ ಪರವಾಗಿ ರಮ್ಯಾ ಹೇಳಿಕೆ; ಸಿನಿಮಾ ನಿಷೇಧ ಸ್ವಲ್ಪ ಅತಿರೇಕ ಅಲ್ಲವೇ? ಎಂದ ನಟಿ

'ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ? ಹಾಗಂದ ಮಾತ್ರಕ್ಕೆ ಅವರ ಸಿನಿಮಾ ನಿಷೇಧಿಸುವುದು ಸ್ವಲ್ಪ ಅತಿರೇಕ ಅನಿಸುವುದಿಲ್ಲವೇ?

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ಅವರು ನೀಡಿರುವ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದ್ದು, ಈ ನಡುವಲ್ಲೇ ಕಮಲ್ ಹಾಸನ್ ಪರ ನಟಿ ರಮ್ಯಾ ಅವರು ಬ್ಯಾಟ್ ಬೀಸಿದ್ದಾರೆ.

ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನ ಹಂಚಿಕೊಂಡಿರುವ ಅವರು, 'ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ? ಹಾಗಂದ ಮಾತ್ರಕ್ಕೆ ಅವರ ಸಿನಿಮಾ ನಿಷೇಧಿಸುವುದು ಸ್ವಲ್ಪ ಅತಿರೇಕ ಅನಿಸುವುದಿಲ್ಲವೇ? ನಾವೆಲ್ಲ ಒಟ್ಟಾಗಿ ಹಿಂದಿ ಹೇರಿಕೆ ವಿರುದ್ಧ ಹೋರಾಡಬೇಕು. ಆದರೆ, ಅದಕ್ಕೂ ಮುನ್ನ ಪರಸ್ಪರರಿಗೆ ಗೌರವ ಕೊಡುವುದನ್ನು ಕಲಿಯಬೇಕು' ಎಂದು ಹೇಳಿದ್ದಾರೆ.

ದ್ರಾವಿಡ ಭಾಷೆಗಳ ಚಾರ್ಟ್'ನ್ನೂ ಪೋಸ್ಟ್ ಮಾಡಿರುವ ಅವರು, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಎಲ್ಲವೂ ದ್ರಾವಿಡ ಭಾಷೆಗಳ ಒಂದೇ ಕೊಂಡಿಯಡಿಯಲ್ಲಿ ಬರುತ್ತವೆ. ಆದರೆ, ನಮ್ಮಲ್ಲಿನ ಕೆಲವು ಸಾಮಾನ್ಯತೆ ಮತ್ತು ಹಂಚಿಕೆಯಾಗಿರುವ ಭಾಷಾ ವಂಶಾವಳಿ ಬೇರೆ ಇರಬಹುದು. ಅವರೆಡೂ ಶ್ರೇಷ್ಠವಲ್ಲ. ಸಂಸ್ಕೃತ ಎಲ್ಲಾ ಭಾಷೆಗಳ ತಾಯಿ ಎಂದು ಭಾವಿಸುವವರಿಗೆ ನೀವು ಕೂಡ ತಪ್ಪಾಗಿ ಕಾಣಿಸುತ್ತಿದ್ದೀರಿ. ಏಕೆಂದರೆ ಸಂಸ್ಕೃತ ಇಂಡೋ – ಆರ್ಯನ್‌ ಭಾಷೆ. ನಾವು ದ್ರಾವೀಡರು, ಎರಡೂ ಪರಸ್ಪರ ಭಿನ್ನ.

ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ? ಆದರೆ, ಚಿತ್ರವನ್ನ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅನಿಸುವುದಿಲ್ಲವೇ? ಹಿಂದಿ ಹೇರಿಕೆಯ ವಿರುದ್ಧ ನಾವು ಒಂದಾಗಬೇಕು. ಅದಕ್ಕಾಗಿ ನಾವು ಮೊದಲು ಪರಸ್ಪರ ಗೌರವಿಸುವುದನ್ನು ಕಲಿಯಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ: RSS ಕಾರ್ಯಕ್ರಮಕ್ಕೆ ಹೋಗಲ್ಲ- CJI ಗವಾಯಿ ತಾಯಿ

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

HAL ಗೇ ಠಕ್ಕರ್, ಟಾಟಾ-Airbus ನಿಂದ ಕರ್ನಾಟಕದಲ್ಲಿ H125 ಹೆಲಿಕಾಪ್ಟರ್ ನಿರ್ಮಾಣ!

RSS @100: ಪ್ರಚಾರಕರಾಗಿ ಸಂಘ ಸೇರಿದ ಕೇರಳದ ಮಾಜಿ ಪೊಲೀಸ್ ಮುಖ್ಯಸ್ಥ Jacob Thomas

SCROLL FOR NEXT