ನಟಿ ರಮ್ಯಾ ಹಾಗೂ ಕಮಲ್ ಹಾಸನ್ 
ಸಿನಿಮಾ ಸುದ್ದಿ

'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್‌ ಹಾಸನ್‌ ಪರವಾಗಿ ರಮ್ಯಾ ಹೇಳಿಕೆ; ಸಿನಿಮಾ ನಿಷೇಧ ಸ್ವಲ್ಪ ಅತಿರೇಕ ಅಲ್ಲವೇ? ಎಂದ ನಟಿ

'ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ? ಹಾಗಂದ ಮಾತ್ರಕ್ಕೆ ಅವರ ಸಿನಿಮಾ ನಿಷೇಧಿಸುವುದು ಸ್ವಲ್ಪ ಅತಿರೇಕ ಅನಿಸುವುದಿಲ್ಲವೇ?

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ಅವರು ನೀಡಿರುವ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದ್ದು, ಈ ನಡುವಲ್ಲೇ ಕಮಲ್ ಹಾಸನ್ ಪರ ನಟಿ ರಮ್ಯಾ ಅವರು ಬ್ಯಾಟ್ ಬೀಸಿದ್ದಾರೆ.

ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನ ಹಂಚಿಕೊಂಡಿರುವ ಅವರು, 'ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ? ಹಾಗಂದ ಮಾತ್ರಕ್ಕೆ ಅವರ ಸಿನಿಮಾ ನಿಷೇಧಿಸುವುದು ಸ್ವಲ್ಪ ಅತಿರೇಕ ಅನಿಸುವುದಿಲ್ಲವೇ? ನಾವೆಲ್ಲ ಒಟ್ಟಾಗಿ ಹಿಂದಿ ಹೇರಿಕೆ ವಿರುದ್ಧ ಹೋರಾಡಬೇಕು. ಆದರೆ, ಅದಕ್ಕೂ ಮುನ್ನ ಪರಸ್ಪರರಿಗೆ ಗೌರವ ಕೊಡುವುದನ್ನು ಕಲಿಯಬೇಕು' ಎಂದು ಹೇಳಿದ್ದಾರೆ.

ದ್ರಾವಿಡ ಭಾಷೆಗಳ ಚಾರ್ಟ್'ನ್ನೂ ಪೋಸ್ಟ್ ಮಾಡಿರುವ ಅವರು, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಎಲ್ಲವೂ ದ್ರಾವಿಡ ಭಾಷೆಗಳ ಒಂದೇ ಕೊಂಡಿಯಡಿಯಲ್ಲಿ ಬರುತ್ತವೆ. ಆದರೆ, ನಮ್ಮಲ್ಲಿನ ಕೆಲವು ಸಾಮಾನ್ಯತೆ ಮತ್ತು ಹಂಚಿಕೆಯಾಗಿರುವ ಭಾಷಾ ವಂಶಾವಳಿ ಬೇರೆ ಇರಬಹುದು. ಅವರೆಡೂ ಶ್ರೇಷ್ಠವಲ್ಲ. ಸಂಸ್ಕೃತ ಎಲ್ಲಾ ಭಾಷೆಗಳ ತಾಯಿ ಎಂದು ಭಾವಿಸುವವರಿಗೆ ನೀವು ಕೂಡ ತಪ್ಪಾಗಿ ಕಾಣಿಸುತ್ತಿದ್ದೀರಿ. ಏಕೆಂದರೆ ಸಂಸ್ಕೃತ ಇಂಡೋ – ಆರ್ಯನ್‌ ಭಾಷೆ. ನಾವು ದ್ರಾವೀಡರು, ಎರಡೂ ಪರಸ್ಪರ ಭಿನ್ನ.

ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ? ಆದರೆ, ಚಿತ್ರವನ್ನ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅನಿಸುವುದಿಲ್ಲವೇ? ಹಿಂದಿ ಹೇರಿಕೆಯ ವಿರುದ್ಧ ನಾವು ಒಂದಾಗಬೇಕು. ಅದಕ್ಕಾಗಿ ನಾವು ಮೊದಲು ಪರಸ್ಪರ ಗೌರವಿಸುವುದನ್ನು ಕಲಿಯಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ, VIKAS ಕುರಿತು ಉಪನ್ಯಾಸ; Video

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

SCROLL FOR NEXT