ಅಂಜಲಿ ಅನೀಶ್ - ನಟ ರಿಷಿ 
ಸಿನಿಮಾ ಸುದ್ದಿ

ಪ್ರಶಾಂತ್ ರಾಜಪ್ಪ ನಿರ್ದೇಶನದ ಚಿತ್ರದಲ್ಲಿ ರಿಷಿಗೆ 'ಪದವಿ ಪೂರ್ವ' ಖ್ಯಾತಿಯ ಅಂಜಲಿ ಅನೀಶ್ ಜೋಡಿ

ಅಂಜಲಿ ಮೊದಲ ಬಾರಿಗೆ ನಟ ರಿಷಿ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ. ಅವರು ಕೊನೆಯ ಬಾರಿಗೆ ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಪ್ರಶಾಂತ್ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ನಟ ರಿಷಿ ನಾಯಕನಾಗಿ ನಟಿಸುತ್ತಿದ್ದು, ಚಿತ್ರ ಇದೀಗ ವೇಗ ಪಡೆಯುತ್ತಿದೆ. ತಮ್ಮ ತೀಕ್ಷ್ಣ ಮತ್ತು ಹಾಸ್ಯಮಯ ಸಂಭಾಷಣೆಗಳಿಗೆ ಹೆಸರುವಾಸಿಯಾದ ಪ್ರಶಾಂತ್, ಇನ್ನೂ ಹೆಸರಿಡದ ಈ ಕಾಮಿಡಿ-ಡ್ರಾಮಾ ಮೂಲಕ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ.

ಸದ್ಯ ಚಿತ್ರದ ಪಾತ್ರವರ್ಗವನ್ನು ಗೌಪ್ಯವಾಗಿಟ್ಟಿದ್ದರೂ, ಸಿನಿಮಾ ಎಕ್ಸ್‌ಪ್ರೆಸ್‌ಗೆ ಲಭ್ಯವಾಗಿರವ ಮಾಹಿತಿ ಪ್ರಕಾರ, ಚಿತ್ರಕ್ಕೆ ಅಂಜಲಿ ಅನೀಶ್ ನಾಯಕಿಯಾಗಿ ನಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಪದವಿ ಪೂರ್ವ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ಅಂಜಲಿ, ಇದೀಗ ಆಸಕ್ತಿದಾಯಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂಜಲಿ ಮೊದಲ ಬಾರಿಗೆ ನಟ ರಿಷಿ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ. ಅವರು ಕೊನೆಯ ಬಾರಿಗೆ ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರು ಸೆಟ್‌ಗೆ ಸೇರಿದ ನಂತರ ಚಿತ್ರತಂಡ ಅವರ ಪಾತ್ರದ ವಿವರಗಳನ್ನು ಬಹಿರಂಗಪಡಿಸಲಿದೆ.

ಚಿತ್ರದ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಪ್ರಶಾಂತ್ ರಾಜಪ್ಪ ಬರೆದಿದ್ದಾರೆ. ಚಿತ್ರಕ್ಕೆ ಅಶೋಕ್ ಅವರ ಛಾಯಾಗ್ರಹಣವಿದೆ. ಚಿತ್ರೀಕರಣವು ಪ್ರಾಥಮಿಕವಾಗಿ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಕೆಲವು ಸನ್ನಿವೇಶಗಳನ್ನು ಬೇರೆಡೆ ಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT