ಫುಲ್ ಮೀಲ್ಸ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಲಿಖಿತ್ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮಾ ನಟನೆಯ 'ಫುಲ್ ಮೀಲ್ಸ್' ಬಿಡುಗಡೆ ದಿನಾಂಕ ಫಿಕ್ಸ್

ಸಂಕಷ್ಟಹರ ಗಣಪತಿ ಮತ್ತು ಫ್ಯಾಮಿಲಿ ಪ್ಯಾಕ್ ಚಿತ್ರಗಳಿಗೆ ಹೆಸರುವಾಸಿಯಾದ ಲಿಖಿತ್ ಶೆಟ್ಟಿ ಛಾಯಾಗ್ರಾಹಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿಯಾ ಚಿತ್ರದ ಖ್ಯಾತಿಯ ಖುಷಿ ರವಿ, ವಧುವಿನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ದೇಶಕ ಎನ್ ವಿನಾಯಕ್ ಅವರ ಮುಂಬರುವ ರೊಮ್ಯಾಂಟಿಕ್ ಕಾಮಿಡಿ ಚಿತ್ರ 'ಫುಲ್ ಮೀಲ್ಸ್' ಬಿಡುಗಡೆಗೆ ಸಜ್ಜಾಗಿದ್ದು, ನವೆಂಬರ್ 21 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ. ಚಿತ್ರದಲ್ಲಿ ಲಿಖಿತ್ ಶೆಟ್ಟಿ, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮಾ ನಟಿಸಿದ್ದು, ಮದುವೆ ಛಾಯಾಗ್ರಾಹಕರೊಬ್ಬರ ಜೀವನದ ಕುರಿತಾದ ಕಥೆಯನ್ನು ಹೇಳಲಿದೆ. ಬರಹಗಾರರಾಗಿಯೂ ಕೆಲಸ ಮಾಡಿರುವ ವಿನಾಯಕ್, ಈ ವೃತ್ತಿಯನ್ನು ಸುತ್ತುವರೆದಿರುವ ಹಾಸ್ಯಮಯ ಮತ್ತು ಭಾವನಾತ್ಮಕ ಸನ್ನಿವೇಶಗಳನ್ನು ತೆರೆ ಮೇಲೆ ತರುವ ಗುರಿಯನ್ನು ಹೊಂದಿದ್ದಾರೆ.

ಈ ಕಥೆಯು ಪ್ರೀ-ವೆಡ್ಡಿಂಗ್‌ ಶೂಟ್‌ಗಾಗಿ ಪ್ರಯಾಣಿಸುವ ಫೋಟೊಗ್ರಾಫರ್ ಸುತ್ತ ಸುತ್ತುತ್ತದೆ. ಈ ಸಮಯದಲ್ಲಿ ವಧು ಅವನ ಬಗ್ಗೆ ಭಾವನೆಗಳನ್ನು ಬೆಳೆಸಿಕೊಳ್ಳುತ್ತಾಳೆ. ಈ ಪ್ರಮೇಯದಿಂದ ಉದ್ಭವಿಸುವ ಸನ್ನಿವೇಶಗಳನ್ನು ಹಾಸ್ಯ ಮತ್ತು ಭಾವನೆಗಳ ಸಮತೋಲನದೊಂದಿಗೆ ತೆರೆ ಮೇಲೆ ತರಲಾಗಿದೆ.

ಸಂಕಷ್ಟಹರ ಗಣಪತಿ ಮತ್ತು ಫ್ಯಾಮಿಲಿ ಪ್ಯಾಕ್ ಚಿತ್ರಗಳಿಗೆ ಹೆಸರುವಾಸಿಯಾದ ಲಿಖಿತ್ ಶೆಟ್ಟಿ ಛಾಯಾಗ್ರಾಹಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿಯಾ ಚಿತ್ರದ ಖ್ಯಾತಿಯ ಖುಷಿ ರವಿ, ವಧುವಿನ ಪಾತ್ರದಲ್ಲಿ ನಟಿಸಿದ್ದಾರೆ. ತೇಜಸ್ವಿನಿ ಶರ್ಮಾ ಮೇಕಪ್ ಕಲಾವಿದೆಯಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ತ್ರಿಕೋನ ಪ್ರೇಮಕಥೆಯಾಗಿದೆ.

ಲಿಖಿತ್ ಶೆಟ್ಟಿ ನಿರ್ಮಾಪಕರಾಗಿಯೂ ಈ ಚಿತ್ರಕ್ಕೆ ಪದಾರ್ಪಣೆ ಮಾಡಿದ್ದಾರೆ. ಚಿತ್ರಕ್ಕೆ ಗುರು ಕಿರಣ್ ಅವರು ಸಂಗೀತ ನಿರ್ದೇಶಕರಾಗಿ, ಮನೋಹರ್ ಜೋಶಿ ಛಾಯಾಗ್ರಾಹಕರಾಗಿ, ದೀಪು ಎಸ್ ಕುಮಾರ್ ಸಂಕಲನಕಾರರಾಗಿ ಮತ್ತು ಹರೀಶ್ ಗೌಡ ಸಂಭಾಷಣೆ ಬರಹಗಾರರಾಗಿ ಕೆಲಸ ಮಾಡಿದ್ದಾರೆ. ವಿಶ್ವಾಸ್ ಕಶ್ಯಪ್ ಅವರ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ದೃಶ್ಯಗಳ ಸಂಯೋಜನೆ, ಕವಿರಾಜ್ ಮತ್ತು ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.

ಇನ್ನುಳಿದಂತೆ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚೆಂಡೂರ್, ರವಿಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಗಣೇಶ್ ರಾವ್, ಕೋಟೆ ಪ್ರಭಾಕರ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT