ಮಕ್ಕಳ ಚಲನಚಿತ್ರೋತ್ಸವ 
ಸಿನಿಮಾ ಸುದ್ದಿ

ಬೆಂಗಳೂರಿನ ದೆಹಲಿ ಪಬ್ಲಿಕ್ ಸ್ಕೂಲ್ ನಲ್ಲಿ ಭಾರತದ ಅತಿದೊಡ್ಡ ಮಕ್ಕಳ ಚಲನಚಿತ್ರೋತ್ಸವ ಆರಂಭ

ನವೆಂಬರ್ 14 ರಿಂದ 30 ರವರೆಗೆ ನಡೆಯುವ ಈ ಚಲನಚಿತ್ರೋತ್ಸವದಲ್ಲಿ 20ಕ್ಕೂ ಹೆಚ್ಚು ಭಾರತೀಯ ಮತ್ತು ವಿದೇಶಿ ಭಾಷೆಗಳ 100ಕ್ಕೂ ಹೆಚ್ಚು ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

ಬೆಂಗಳೂರು: ಬೆಂಗಳೂರು ದಕ್ಷಿಣದ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಭಾರತದ ಅತಿದೊಡ್ಡ ಮಕ್ಕಳ ಚಲನಚಿತ್ರೋತ್ಸವದ ಎಂಟನೇ ಆವೃತ್ತಿ, ಸ್ಕೂಲ್ ಸಿನಿಮಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(SCIFF)-2025 ಆರಂಭವಾಗಿದೆ.

ನವೆಂಬರ್ 14 ರಿಂದ 30 ರವರೆಗೆ ನಡೆಯುವ ಈ ಚಲನಚಿತ್ರೋತ್ಸವದಲ್ಲಿ 20ಕ್ಕೂ ಹೆಚ್ಚು ಭಾರತೀಯ ಮತ್ತು ವಿದೇಶಿ ಭಾಷೆಗಳ 100ಕ್ಕೂ ಹೆಚ್ಚು ಚಲನಚಿತ್ರಗಳನ್ನು ಪ್ರದರ್ಶಿಸಲಿದ್ದು, ದೇಶಾದ್ಯಂತ 40,000 ಸರ್ಕಾರಿ ಶಾಲೆಗಳು ಮತ್ತು 1,000 ಕ್ಕೂ ಹೆಚ್ಚು ಖಾಸಗಿ ಶಾಲೆಗಳನ್ನು ತಲುಪಲಿದೆ.

ಬೆಂಗಳೂರಿನ ಪೂರ್ವವೀಕ್ಷಣೆ ಕಾರ್ಯಕ್ರಮದಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿನಿಮಾ ಪ್ರದರ್ಶನ ಮತ್ತು ಚಲನಚಿತ್ರ ನಿರ್ಮಾಪಕರೊಂದಿಗಿನ ಸಂವಾದಗಳಿಗೆ ಹಾಜರಾಗಿದ್ದರು. ಜೊತೆಗೆ ಭಾಗವಹಿಸುವ ಶಾಲೆಗಳಲ್ಲಿ ಆನ್‌ಲೈನ್ ಚಲನಚಿತ್ರ ನಿರ್ಮಾಣ ಕಾರ್ಯಾಗಾರಗಳನ್ನು ನಡೆಸಲಾಯಿತು.

"ನಾವು ಇಂದು ವೀಕ್ಷಿಸಿದ ಕಿರುಚಿತ್ರಗಳಲ್ಲಿ, ಒಂದು ಕಥೆಯು ಒಂದೇ ಸಮಯದಲ್ಲಿ ಹೇಗೆ ಶಿಕ್ಷಣ ಮತ್ತು ಮನರಂಜನೆಯನ್ನು ನೀಡುತ್ತದೆ ಎಂಬುದನ್ನು ತೋರಿಸಿದೆ" ಎಂದು 10 ನೇ ತರಗತಿಯ ವಿದ್ಯಾರ್ಥಿನಿ ಅನಿಂದಿತಾ ಶ್ರೇಯಸ್ ಅವರು ಹೇಳಿದ್ದಾರೆ.

"ಕೆಲವೇ ನಿಮಿಷಗಳಲ್ಲಿ, ದೊಡ್ಡ ವಿಚಾರಗಳನ್ನು ಅರ್ಥಮಾಡಿಕೊಳ್ಳಲು ಸುಲಭವಾಯಿತು. ಅದಕ್ಕಾಗಿಯೇ ಸಿನಿಮಾ ಮೂಲಕ ಕಲಿಯುವುದು ತುಂಬಾ ಶಕ್ತಿಯುತವಾಗಿದೆ" ಎಂದಿದ್ದಾರೆ.

"ಮಕ್ಕಳು ಅತ್ಯುತ್ತಮ ಚಲನಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಅವಕಾಶ ಸಿಗುತ್ತದೆ. ಏಕೆಂದರೆ ಅವುಗಳನ್ನು ಉತ್ಸವಗಳಲ್ಲಿ ಮಾತ್ರ ಪ್ರದರ್ಶಿಸಲಾಗುತ್ತದೆ. ಆದ್ದರಿಂದ ನಾವು ಚಲನಚಿತ್ರಗಳನ್ನು ನೇರವಾಗಿ ಶಾಲೆಗಳಿಗೆ ತರುವ ಮೂಲಕ ಉತ್ಸವವನ್ನು ಅವರ ಬಳಿಗೆ ಕೊಂಡೊಯ್ಯಲು ನಿರ್ಧರಿಸಿದ್ದೇವೆ. ಆ ರೀತಿಯಲ್ಲಿ, ಪ್ರತಿ ಮಗುವೂ ಉತ್ತಮ ಗುಣಮಟ್ಟದ ಸಿನೆಮಾವನ್ನು ನೋಡಲು ಸಾಧ್ಯ" ಎಂದು ಚಿತ್ರೋತ್ಸವದ ನಿರ್ದೇಶಕ ಸೈಯದ್ ಸುಲ್ತಾನ್ ಅಹ್ಮದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ ನೌಗಮ್ ಪೋಲಿಸ್ ಠಾಣೆ ಸ್ಫೋಟ, ಮೃತರ ಸಂಖ್ಯೆ 9ಕ್ಕೆ ಏರಿಕೆ, 32 ಮಂದಿ ಗಾಯ, ಭಯೋತ್ಪಾದಕ ಕೃತ್ಯವೇ? ಪೊಲೀಸರು ಹೇಳುವುದೇನು-Video

ಬಿಹಾರದಲ್ಲಿ ಹೀನಾಯ ಸೋಲು: ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ, ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಚರ್ಚೆ

ಬಿಹಾರ ಚುನಾವಣೆಯಲ್ಲಿ NDA ಗೆಲುವು ECI ಪ್ರಾಯೋಜಿತ 'ಹಗರಣ': ಸಾಮ್ನಾ ಸಂಪಾದಕೀಯ

ದೆಹಲಿ ಸ್ಫೋಟ ತನಿಖೆ: ಉಗ್ರರೊಂದಿಗೆ ನಂಟು; ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ವೈದ್ಯನ ಬಂಧನ

ಜಾರ್ಖಂಡ್: ಡ್ಯಾಮ್ ಗೆ ಕಾರು ಉರುಳಿಬಿದ್ದು, ನ್ಯಾಯಾಧೀಶರ ಇಬ್ಬರು ಬಾಡಿಗಾರ್ಡ್ ಸೇರಿ ಮೂವರು ಸಾವು

SCROLL FOR NEXT