ಬಂಧಿತ ಉದ್ಯಮಿ- ನಟಿ online desk
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನ ಖ್ಯಾತ ನಟಿಗೆ ಲೈಂಗಿಕ ಕಿರುಕುಳ, ದೈಹಿಕ ಹಲ್ಲೆ; ಉದ್ಯಮಿ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ

ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. ಉದ್ಯಮಿ, ನಿರ್ಮಾಪಕ ತನ್ನ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದರು, ಸಾಮಾಜಿಕ ಮಾಧ್ಯಮದಲ್ಲಿ ತನ್ನ ಫೋಟೋಗಳನ್ನು ಮಾರ್ಫ್ ಮಾಡಿದ್ದರು ಎಂದು ನಟಿ ಆರೋಪಿಸಿದ್ದಾರೆ.

2022 ರಲ್ಲಿ ಭೇಟಿಯಾದ ಉದ್ಯಮಿಯೊಬ್ಬರು ಕಿರುಕುಳ, ಕಿರುಕುಳ ನೀಡಿದ್ದಾರೆ ಎಂದು ಕನ್ನಡ ಚಲನಚಿತ್ರ ನಟಿಯೊಬ್ಬರು ಆರೋಪಿಸಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನೀಡಿದ ದೂರಿನ ಆಧಾರದಲ್ಲಿ ಉದ್ಯಮಿ, ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಬಂಧಿಸಲಾಗಿದೆ.

ಆಕೆ ಶ್ರೀಲಂಕಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ಎಂಬ ಉದ್ಯಮಿಯನ್ನು ಭೇಟಿಯಾಗಿದ್ದರು. ಅವರು ಆರಂಭದಲ್ಲಿ ಅವರೊಂದಿಗೆ ಸ್ನೇಹ ಬೆಳೆಸಿ ಪ್ರೀತಿಯಿಂದ ವರ್ತಿಸಿದ್ದರು, ಆದರೆ ಅವರ ನಡವಳಿಕೆಯು ಶೀಘ್ರದಲ್ಲೇ ಗೀಳು ಮತ್ತು ಬೆದರಿಕೆಯೆಡೆಗೆ ತಿರುಗಿತು ಎಂದು ಅವರು ಆರೋಪಿಸಿದ್ದಾರೆ.

ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. ಉದ್ಯಮಿ, ನಿರ್ಮಾಪಕ ತನ್ನ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದರು, ಸಾಮಾಜಿಕ ಮಾಧ್ಯಮದಲ್ಲಿ ತನ್ನ ಫೋಟೋಗಳನ್ನು ಮಾರ್ಫ್ ಮಾಡಿದ್ದರು. ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು ಮತ್ತು ಇಚ್ಛೆಗೆ ವಿರುದ್ಧವಾಗಿ ಅವರ ಜೊತೆ ಸಂಬಂಧವನ್ನು ಉಳಿಸಿಕೊಳ್ಳಲು ಒತ್ತಾಯಿಸಿದರು ಎಂದು ನಟಿ ಆರೋಪಿಸಿದ್ದಾರೆ.

ಏಪ್ರಿಲ್ 2024 ರಲ್ಲಿ, ಒತ್ತಡದಿಂದ ಬಳಲುತ್ತಿದ್ದ ನಟಿ ಬಲವಂತವಾಗಿ ಮದುವೆಯಾಗುವುದಾಗಿ ಅರವಿಂದ್ ನೀಡಿದ ಬೆದರಿಕೆಗೆ ಹೆದರಿ, ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು, ನಂತರ ಅರವಿಂದ್ ಮನೆಗೆ ಬಂದು ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಆಸ್ಪತ್ರೆಯಲ್ಲಿದ್ದಾಗ, ಸಂಬಂಧವನ್ನು ಕೊನೆಗೊಳಿಸಲು ಬಯಸುವುದಾಗಿ ಹೇಳಿದಾಗ ಅರವಿಂದ್ ಮತ್ತು ಅವರ ಸಹಚರರು ಐಸಿಯುನಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದರು. ಈ ವಿಚಾರವನ್ನು ನಟಿಯ ಮನೆಯವರಿಗೆ ಹೇಳಲು ಅವಕಾಶವನ್ನೇ ನೀಡಿರಲಿಲ್ಲ. ಕರೆ ಮಾಡುತ್ತೇನೆ ಮೊಬೈಲ್ ಕೊಡು ಎಂದು ನಟಿ ಹೇಳಿದಾಗ, ಅರವಿಂದ್ ಏಕಾಏಕಿ ನಟಿಯ ಮೇಲೆ ಮೇಲೆ ಹಲ್ಲೆ ಮಾಡಿದ್ದೂ ಅಲ್ಲದೆ. ಬಟ್ಟೆ ಹರಿದು ಅರೆಬೆತ್ತಲೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.

ನಟಿ ದಾರಿ ಕಾಣದೆ ತಾಯಿ ಬಳಿ ನಡೆದ ವಿಚಾರ ಹೇಳಿಕೊಂಡಿದ್ದರು. ಆಗ ಅರವಿಂದ್, ‘ನಟಿ ನನ್ನಿಂದ ಸಾಕಷ್ಟು ಖರ್ಚು ಮಾಡಿಸಿದ್ದಾಳೆ. ಕೋಟಿ ರೂಪಾಯಿ ಕೊಡಬೇಕು’ ಎಂದು ಬೆದರಿಕೆ ಹಾಕಿದ್ದ. ನನ್ನ ಹೆತ್ತವರ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದರು. ರಾಜ್ಯ ಮಹಿಳಾ ಆಯೋಗ ಮತ್ತು ಸೈಬರ್ ಅಪರಾಧ ಪೊಲೀಸರಿಗೆ ದೂರು ನೀಡಿದ ನಂತರವೂ ಕಿರುಕುಳ ನೀಡುತ್ತಲೇ ಇದ್ದರು ಎಂದು ನಟಿ ಪೊಲೀಸರಿಗೆ ತಿಳಿಸಿದ್ದಾರೆ.

ಕಿರುಕುಳ ಸ್ವಲ್ಪ ಸಮಯದವರೆಗೆ ನಿಂತಿತ್ತು. ಆದರೆ ಈ ವರ್ಷದ ಆಗಸ್ಟ್‌ನಲ್ಲಿ, ಅರವಿಂದ್ ನಟಿಯ ಸ್ನೇಹಿತರು ಮತ್ತು ಮನೆ ಮಾಲೀಕರಿಗೆ ಅನಾಮಧೇಯ ಪತ್ರಗಳನ್ನು ಕಳುಹಿಸಲು ಪ್ರಾರಂಭಿಸಿದರು, ನನ್ನ ಮೇಲೆ ಅಕ್ರಮ ಸಂಬಂಧಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ ಸುಳ್ಳು ಆರೋಪ ಹೊರಿಸಿದ್ದರು ಎಂದು ನಟಿ ಆರೋಪಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯಾರೋ ತನ್ನನ್ನು ರಹಸ್ಯವಾಗಿ ಛಾಯಾಚಿತ್ರ ಮಾಡಿ ಮಾನಹಾನಿಕರ ಚಿತ್ರಗಳನ್ನು ಬಳಸಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT