ಕಾಂತಾರ ಚಾಪ್ಟರ್ 1 ಪೋಸ್ಟರ್  
ಸಿನಿಮಾ ಸುದ್ದಿ

ಕಾಂತಾರ: ಚಾಪ್ಟರ್ 1 ಬಿಡುಗಡೆ: ಮೊದಲ ದಿನವೇ ಜನ ಬಹುಪರಾಕ್; ಎಲ್ಲೆಡೆ ಭರ್ಜರಿ ಪ್ರದರ್ಶನ

'ಕಾಂತಾರ: ಚಾಪ್ಟರ್ 1' ಸಿನಿಮಾದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ, ಕ್ರಿ.ಶ.4-5 ಶತಮಾನದ ಕದಂಬರ ಆಳ್ವಿಕೆಯ ಸಮಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಒಂದು ಮಾಯಾವಿ ಲೋಕವನ್ನು ನೋಡುಗನ ಮುಂದಿರಿಸಿದ್ದಾರೆ.

ಕಾಂತಾರ-ಚಾಪ್ಟರ್ 1 ಚಿತ್ರ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. 2022ರ ಅಕ್ಟೋಬರ್ ತಿಂಗಳಲ್ಲಿ ಕಾಂತಾರ ಚಿತ್ರ ಬಿಡುಗಡೆಯಾಗಿದ್ದಾಗ ಬಹುತೇಕರು ಮೆಚ್ಚಿಕೊಂಡು ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿತ್ತು.

ಇದೇ ಉತ್ಸಾಹದಲ್ಲಿ ರಿಷಬ್ ಶೆಟ್ಟಿ ‘ಕಾಂತಾರ: ಚಾಪ್ಟರ್ 1’ ಮಾಡುವ ಘೋಷಣೆ ಮಾಡಿದಾಗ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಕೂಡ ಕೈಜೋಡಿಸಿತು. ‘ಕಾಂತಾರ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಬಗ್ಗೆ ರಿಷಬ್ ಹೇಳಿದ್ದರು. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ದೈವದ ವಿಚಾರವೇ ಉಲ್ಲೇಖ. ಇಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ.

'ಕಾಂತಾರ: ಚಾಪ್ಟರ್ 1' ಸಿನಿಮಾದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ, ಕ್ರಿ.ಶ.4-5 ಶತಮಾನದ ಕದಂಬರ ಆಳ್ವಿಕೆಯ ಸಮಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಒಂದು ಮಾಯಾವಿ ಲೋಕವನ್ನು ನೋಡುಗನ ಮುಂದಿರಿಸಿದ್ದಾರೆ.

ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ

'ಕಾಂತಾರ: ಚಾಪ್ಟರ್ 1' ಸಿನಿಮಾ ಇಂದು ಅಕ್ಟೋಬರ್ 2ರಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ. ದುಬಾರಿ ಟಿಕೆಟ್ ಬೆಲೆ ಮತ್ತು ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದುಬಂದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ಭಾರಿ ಕಲೆಕ್ಷನ್ ಮಾಡುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಇಂದು ಪ್ರೇಕ್ಷಕರ ಅಭಿಪ್ರಾಯ, ವಿಮರ್ಶೆಗಳೇ ತುಂಬಿಹೋಗಿವೆ.

ಕಳೆದ ರಾತ್ರಿ ಬೆಂಗಳೂರು ಸೇರಿದಂತೆ ಹಲವೆಡೆ ಪ್ರೀಮಿಯರ್ ಶೋ ಇಡಲಾಗಿದ್ದು, ಅದರಿಂದಲೇ ಕೋಟಿ ರೂಪಾಯಿ ಬಾಚಲಾಗಿದೆ. ‘ಕಾಂತಾರ: ಚಾಪ್ಟರ್ ’ ಸಿನಿಮಾಗೆ ರಿಷಬ್ ಶೆಟ್ಟಿ ನಾಯಕ. ನಿರ್ದೇಶನ ಕೂಡ ಅವರದ್ದೇ. ನಾಯಕಿ ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್, ಇತರ ಪ್ರಮುಖ ಪಾತ್ರವರ್ಗದಲ್ಲಿ ಜಯರಾಂ, ಕುಲ್ಶನ್ ದೇವಯ್ಯ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!