ನಟಿ ರಚಿತಾ ರಾಮ್  
ಸಿನಿಮಾ ಸುದ್ದಿ

ಮದುವೆಯಾಗುವ ಯೋಚನೆ ಬಂದಿದೆ, ಹುಡುಗನ ಆಯ್ಕೆ ಅಪ್ಪ-ಅಮ್ಮನಿಗೆ ಬಿಟ್ಟಿದ್ದು: ನಟಿ ರಚಿತಾ ರಾಮ್

ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಗೆ ಇಂದು ಅಕ್ಟೋಬರ್ 3 ಬರ್ತ್ ಡೇ ಸಂಭ್ರಮ.

ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಗೆ ಇಂದು ಅಕ್ಟೋಬರ್ 3 ಬರ್ತ್ ಡೇ ಸಂಭ್ರಮ. ಮಧ್ಯರಾತ್ರಿಯಿಂದಲೇ ಅವರು ತಮ್ಮ ಕುಟುಂಬ ಸದಸ್ಯರು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಸಹ ಅವರ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಎಂದಿನಂತೆ ಸಹಜವಾಗಿ ಅವರ ಮದುವೆ ವಿಚಾರ ಬಂತು.

ಅದಕ್ಕೆ ನಗುತ್ತಾ ಉತ್ತರಿಸಿದ ರಚಿತಾ ರಾಮ್, ನಾನು ಖಂಡಿತವಾಗಿಯೂ ಮದುವೆ ಆಗುತ್ತೇನೆ. ಆ ಯೋಚನೆ ಕೂಡ ಬಂದಿದೆ. ತಂದೆ-ತಾಯಿಗೂ ಹೇಳಿದ್ದೇನೆ. ಹುಡುಗನನ್ನು ನೋಡಲು ಶುರು ಮಾಡಿದ್ದಾರೆ. ಇಂಥದ್ದೇ ಕ್ವಾಲಿಟಿ ಅಂತೇನೂ ಇಲ್ಲ. ಯಾರನ್ನೇ ಕರೆದುಕೊಂಡು ಬಂದು ಮದುವೆಯಾಗು ಎಂದರೆ ಆಗುತ್ತೇನೆ. ದೇವರು ಯಾರನ್ನು ಕಳಿಸುತ್ತಾನೋ ಅವರನ್ನು ನಾನು ಅಕ್ಸೆಪ್ಟ್​ ಮಾಡುತ್ತೇನೆ ಎನ್ನುವ ಮೂಲಕ ಮದುವೆ ಹುಡುಗನ ಆಯ್ಕೆ ಸಂಪೂರ್ಣ ಜವಾಬ್ದಾರಿಯನ್ನು ಪಾಲಕರ ಮೇಲೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಕಿಟ್​ ವಿತರಣೆ

ಇದೇ ಮೊದಲ ಬಾರಿಗೆ ಅಪ್ಪ-ಅಮ್ಮನ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ಅಪ್ಪ-ಅಮ್ಮನನ್ನು ಪರಿಚಯಿಸಿದರು. ಹುಟ್ಟುಹಬ್ಬದ ನಿಮಿತ್ತ ಪೌರ ಕಾರ್ಮಿಕರಿಗೆ ಕಿಟ್​ ವಿತರಣೆ ಮಾಡಿದರು.

ಡಿ ಬಾಸ್ ನೆನೆದ ರಚ್ಚು

ರಚಿತಾ ರಾಮ್ ಅವರು 2011ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟು ‘ಬೆಂಕಿಯಲ್ಲಿ ಅರಳಿದ ಹೂವು’ ಅವರ ನಟನೆಯ ಮೊದಲ ಧಾರಾವಾಹಿ. ಈ ಧಾರಾವಾಹಿ ಸಾಕಷ್ಟು ಗಮನ ಸೆಳೆಯಿತು. ಆ ಬಳಿಕ ‘ಅರಸಿ’ ಹೆಸರಿನ ಧಾರಾವಾಹಿ ಮಾಡಿದರು. ಇದರಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು. 2012ರಲ್ಲಿ ಧಾರಾವಾಹಿಯಲ್ಲಿ ರಶ್ಮಿ ಹೆಸರಿನ ಪಾತ್ರ ಮಾಡಿದ್ದರು. ಆ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ರಚಿತಾ ರಾಮ್ ಅವರು ಮೊದಲು ಆಯ್ಕೆ ಆಗಿದ್ದು, ‘ಬುಲ್ ಬುಲ್’ ಸಿನಿಮಾದಲ್ಲಿ. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ದರ್ಶನ್ ತಾಯಿ ಮೀನಾ ತುಗುದೀಪ್. ದರ್ಶನ್ ಹೋಂ ಬ್ಯಾನರ್​ನಿಂದ ಲಾಂಚ್ ಆಗಿರುವುದರಿಂದ ಅವರಿಗೆ ದರ್ಶನ್ ಮೇಲೆ ವಿಶೇಷ ಗೌರವ.

ರಚಿತಾ ಅವರು ಇತ್ತೀಚೆಗೆ ನಟಿಸಿದ್ದ ‘ಕೂಲಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಇದು ತಮಿಳು ಸಿನಿಮಾ. ಈ ಚಿತ್ರದಲ್ಲಿ ರಜನಿಕಾಂತ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಚಿತಾ ಪಾತ್ರ ಭಿನ್ನವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಅಧಿಕೃತ ಪಟ್ಟಿಗೆ ರಾಜ್ಯಪಾಲರಿಂದ ಸಹಿ; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಖಾಲಿ ನಿವೇಶನಗಳ ಸ್ವಚ್ಛಗೊಳಿಸುವ ಗಡುವು: ಮಾಲಿಕರಿಗೆ ಗುಡ್ ನ್ಯೂಸ್!

ಉಪ ಸಭಾಪತಿ ನೇಮಕದಲ್ಲಿ ಬಿಗ್ ಟ್ವೀಸ್ಟ್: ಅಸಮಾಧಾನ ತಣಿಸಲು ಮಂಕಾಳ ವೈದ್ಯಗೆ ಮಣೆ; ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ

'ಕರ್ನಾಟಕದಿಂದ ಜಾಗ ಖಾಲಿ ಮಾಡಿಸಿಬಿಡ್ತೀವಿ': ‘ಟಾಕ್ಸಿಕ್’ ಟ್ರೇಲರ್ ಕುರಿತು Rishika Singh ಆಕ್ರೋಶ, ಯಶ್ ಅಭಿಮಾನಿಗಳ ಅಸಮಾಧಾನ! Video

ಅಮಿತ್ ಶಾ 'ಉಪನ್ಯಾಸ' ಕೇಳುವ ಆಸಕ್ತಿ ಈಗ ನಮ್ಮಲ್ಲಿ ಉಳಿದಿಲ್ಲ; ಅವರ ವರ್ಚಸ್ಸಿನ 'ಬಲೂನ್' ಟುಸ್ ಆಗಿದೆ: ರಾಹುಲ್ ಗಾಂಧಿ