ಕಾಂತಾರ: ಚಾಪ್ಟರ್ 1 ಪೋಸ್ಟರ್ 
ಸಿನಿಮಾ ಸುದ್ದಿ

Box Office Collection: ಕೆಜಿಎಫ್ 2 ಗಿಂತ ಸ್ವಲ್ಪ ಹಿಂದುಳಿದ Kantara Chapter 1; ರಿಷಭ್ ಶೆಟ್ಟಿ ನಟನೆಯ ಚಿತ್ರ ಗಳಿಸಿದ್ದೆಷ್ಟು?

ರಿಷಬ್ ಶೆಟ್ಟಿ ಅಭಿನಯದ ಈ ಚಿತ್ರವು ಹಿಂದಿ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಗಳಿಕೆ ಕಂಡ ಕನ್ನಡದ ಎರಡನೇ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಭ್ ಶೆಟ್ಟಿ ಅವರ ಹಿಟ್ ಚಿತ್ರ 'ಕಾಂತಾರ'ದ ಪೂರ್ವಭಾಗವಾದ 'ಕಾಂತಾರ: ಚಾಪ್ಟರ್ 1' ಅದ್ಭುತ ಆರಂಭವನ್ನು ಕಂಡಿದೆ. ಬಿಡುಗಡೆಗೂ ಮುನ್ನವೇ ತೀವ್ರ ನಿರೀಕ್ಷೆ ಹುಟ್ಟುಹಾಕಿದ್ದ ಚಿತ್ರವು ಅಕ್ಟೋಬರ್ 2ರಂದು ದೇಶದಾದ್ಯಂತ ಬಿಡುಗಡೆ ಕಂಡಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಂಡಿದೆ.

ಫಿಲ್ಮ್ ಟ್ರೇಡ್ ಪೋರ್ಟಲ್ Sacnilk ಪ್ರಕಾರ, ಈ ಚಿತ್ರವು ಎಲ್ಲ ಭಾಷೆಗಳಲ್ಲಿ ಬಿಡುಗಡೆಯಾದ ಮೊದಲನೇ ದಿನ 60 ಕೋಟಿ ರೂ. ಗಳಿಸಿದೆ. ಈ ಚಿತ್ರವು ಹಿಂದಿಯಲ್ಲಿ ಸುಮಾರು 19–21 ಕೋಟಿ ರೂ. ಗಳಿಸಿದೆ. ಇದು ಈ ವರ್ಷದ ಇದುವರೆಗಿನ ಅತಿದೊಡ್ಡ ಬಿಡುಗಡೆ ಎಂದು ಹೇಳಲಾಗುತ್ತಿದೆ.

ಈ ಕನ್ನಡ ಚಿತ್ರವು ಧರ್ಮ ಪ್ರೊಡಕ್ಷನ್ಸ್‌ನ ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ ಜೊತೆ ಬಾಕ್ಸ್ ಆಫೀಸ್‌ನಲ್ಲಿ ಪೈಪೋಟಿ ನೀಡಿದೆ. ವರುಣ್ ಧವನ್, ಜಾನ್ವಿ ಕಪೂರ್, ರೋಹಿತ್ ಸರಾಫ್ ಮತ್ತು ಸಾನ್ಯಾ ಮಲ್ಹೋತ್ರಾ ನಟಿಸಿದ ಈ ಚಿತ್ರವು ಮೊದಲ ದಿನ 9.25 ಕೋಟಿ ರೂ.ಗಳನ್ನು ಗಳಿಸಿದೆ.

ರಿಷಬ್ ಶೆಟ್ಟಿ ಅಭಿನಯದ ಈ ಚಿತ್ರವು ಹಿಂದಿ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಗಳಿಕೆ ಕಂಡ ಕನ್ನಡದ ಎರಡನೇ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ. ಈ ಮೂಲಕ 54 ಕೋಟಿ ರೂ. ನಿವ್ವಳ ಗಳಿಕೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್: ಚಾಪ್ಟರ್ 2 ನಂತರದ ಸ್ಥಾನ ಪಡೆದಿದೆ.

125 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಆರಂಭಿಕ ಗಳಿಕೆಯಲ್ಲಿ ಹೆಚ್ಚಿನ ಏರಿಕೆ ಕಂಡಿದೆ.

ಕಾಂತಾರ: ಚಾಪ್ಟರ್ 1 ಅನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದಾರೆ. ರಿಷಭ್ ಅವರೊಂದಿಗೆ ಅನಿರುದ್ಧ್ ಮಹೇಶ್ ಮತ್ತು ಶನಿಲ್ ಗೌತಮ್ ಬರಹಗಾರರಾಗಿ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ ಜಯರಾಮ್, ರುಕ್ಮಿಣಿ ವಸಂತ್ ಮತ್ತು ಗುಲ್ಶನ್ ದೇವಯ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT