ಶ್ರೀರಾಜ್ ಮತ್ತು ಪುಷ್ಪಾ ಅರುಣ್ ಕುಮಾರ್ 
ಸಿನಿಮಾ ಸುದ್ದಿ

ಕೊತ್ತಲವಾಡಿ ನಿರ್ಮಾಪಕಿ ಪುಷ್ಪಾ ಅರುಣ್ ಕುಮಾರ್ ಹೊಸ ಚಿತ್ರ ಘೋಷಣೆ; ಮತ್ತೊಮ್ಮೆ ಶ್ರೀರಾಜ್ ಆ್ಯಕ್ಷನ್ ಕಟ್!

ಗಲ್ಲಾಪೆಟ್ಟಿಗೆಯಲ್ಲಿ ಸರಾಸರಿ ಗಳಿಕೆ ಕಂಡಿದ್ದ ಪೃಥ್ವಿ ಅಂಬಾರ್ ಮತ್ತು ಕಾವ್ಯಾ ಶೈವ ಅಭಿನಯದ ಕೊತ್ತಲವಾಡಿ ಇದೀಗ ಡಿಜಿಟಲ್ ವೇದಿಕೆಗಳಲ್ಲಿ ಸ್ಟ್ರೀಮ್ ಆಗುತ್ತಿದೆ.

ಪಿಎ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಕೊತ್ತಲವಾಡಿ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್, ವಿಜಯದಶಮಿಯ ಶುಭ ಸಂದರ್ಭದಲ್ಲಿ ತಮ್ಮ ಮುಂದಿನ ಯೋಜನೆಯನ್ನು ಘೋಷಿಸಿದ್ದಾರೆ.

ಕೊತ್ತಲವಾಡಿ ನಿರ್ದೇಶಕ ಶ್ರೀರಾಜ್ ಅವರೊಂದಿಗೆ ಮತ್ತೆ ಹೊಸ ಚಿತ್ರದಲ್ಲಿ ಸಹಯೋಗ ಮಾಡಲಿದ್ದಾರೆ. ಕೊತ್ತಲವಾಡಿ ಚಿತ್ರದ ಹೆಚ್ಚಿನ ತಾಂತ್ರಿಕ ತಂಡವೇ ಹೊಸ ಚಿತ್ರದಲ್ಲಿಯೂ ಕೆಲಸ ಮಾಡಲಿದೆ. ಶೀಘ್ರದಲ್ಲೇ ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಚಿತ್ರತಂಡ ಯೋಜಿಸಿದೆ.

ಈ ಹಿಂದೆ, ನಿರ್ಮಾಪಕರು 'ಗುರು ಶಿಷ್ಯರು' ಖ್ಯಾತಿಯ ನಟ ಶರಣ್ ಅವರೊಂದಿಗೆ ಚಿತ್ರ ಮಾಡುವುದಾಗಿ ಹೇಳಿದ್ದರು. ಇದೀಗ ಹೊಸ ಚಿತ್ರವು ಅವರೊಂದಿಗೆ ಇರುತ್ತದೆಯೇ ಅಥವಾ ಬೇರೆ ಚಿತ್ರವೇ ಎಂಬುದು ಸ್ಪಷ್ಟವಾಗಿಲ್ಲ.

ಈಮಧ್ಯೆ, ಗಲ್ಲಾಪೆಟ್ಟಿಗೆಯಲ್ಲಿ ಸರಾಸರಿ ಗಳಿಕೆ ಕಂಡಿದ್ದ ಪೃಥ್ವಿ ಅಂಬಾರ್ ಮತ್ತು ಕಾವ್ಯಾ ಶೈವ ಅಭಿನಯದ ಕೊತ್ತಲವಾಡಿ ಇದೀಗ ಡಿಜಿಟಲ್ ವೇದಿಕೆಗಳಲ್ಲಿ ಸ್ಟ್ರೀಮ್ ಆಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ವಿಬಿ ಜಿ ರಾಮ್ ಜಿಯಿಂದ 16.12 ಕೋಟಿ ಜನ ನಿರುದ್ಯೋಗಿಗಳು; ಮನರೇಗಾ ಮರುಜಾರಿಗೊಳಿಸುವವರೆಗೆ ಹೋರಾಟ

ಉಗ್ರರ ವಿರುದ್ಧ ಪಾಕ್ ಕಾರ್ಯಾಚರಣೆ: ಆತ್ಮಾಹುತಿ ಬಾಂಬರ್ ಸೇರಿ ಐವರು ಭಯೋತ್ಪಾದಕರ ಹತ್ಯೆ

ಸಾಕು ಬಿಟ್ಟುಕೊಡಿ... INDIA ಕೂಟದ ಮುಖ್ಯಸ್ಥರನ್ನಾಗಿ ಮಮತಾ ಬ್ಯಾನರ್ಜಿ ಆಯ್ಕೆ ಮಾಡಿ: ರಾಹುಲ್ ಗಾಂಧಿಗೆ ಮಣಿಶಂಕರ್ ಅಯ್ಯರ್ ಸಲಹೆ

Video; ಮಹಾತ್ಮ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ: ಯತ್ನಾಳ್​ ವಿವಾದಾತ್ಮಕ ಹೇಳಿಕೆ

SCROLL FOR NEXT