ಪಂಜುರ್ಲಿ ದೈವದಂತೆ ವೇಷ ಧರಿಸಿದ ಅಭಿಮಾನಿ 
ಸಿನಿಮಾ ಸುದ್ದಿ

ತಮಿಳುನಾಡು: ಪಂಜುರ್ಲಿ ದೈವದ ವೇಷ ಧರಿಸಿ ಕಾಂತಾರ: ಚಾಪ್ಟರ್ 1 ವೀಕ್ಷಿಸಲು ಬಂದ ಅಭಿಮಾನಿ!

ಕಾಂತಾರ: ಚಾಪ್ಟರ್ 1 2022ರ ಬ್ಲಾಕ್‌ಬಸ್ಟರ್ ಕಾಂತಾರದ ಪೂರ್ವಭಾವಿ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು, ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ.

ರಿಷಬ್ ಶೆಟ್ಟಿ ನಟಿಸಿರುವ ಕಾಂತಾರ: ಚಾಪ್ಟರ್ 1 ಅಕ್ಟೋಬರ್ 2 ರಂದು ವಾರಾಂತ್ಯದಲ್ಲಿ ಬಿಡುಗಡೆಯಾದಾಗಿನಿಂದ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ. ಬಹು ಭಾಷೆಗಳಲ್ಲಿ ಬಿಡುಗಡೆಯಾದ ಚಿತ್ರವು ಮೊದಲ ದಿನವೇ ₹90 ಕೋಟಿ ಗಳಿಸಿತು ಮತ್ತು ಭಾರತದಲ್ಲಿ ಈವರೆಗೂ ₹170 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಬಿಡುಗಡೆಯಾದ ಕೇವಲ ಮೂರು ದಿನಗಳಲ್ಲಿ ವಿಶ್ವದಾದ್ಯಂತ ಒಟ್ಟು ₹225 ಕೋಟಿ ಗಳಿಸಿದೆ.

ಇತ್ತೀಚೆಗೆ ದಿಂಡಿಗಲ್‌ನಲ್ಲಿ ನಡೆದ ಪ್ರದರ್ಶನವೊಂದರಲ್ಲಿ, ಅಭಿಮಾನಿಯೊಬ್ಬರು ಪಂಜುರ್ಲಿ ದೈವವನ್ನು ಹೋಲುವ ವೇಷಭೂಷಣದಲ್ಲಿ ಕಾಣಿಸಿಕೊಂಡು ಪ್ರೇಕ್ಷಕರನ್ನು ಅಚ್ಚರಿಗೊಳಿಸಿದರು. ಇದು ಎಲ್ಲರನ್ನೂ ಬೆರಗುಗೊಳಿಸಿತು. ಇಂತಹ ಆಧ್ಯಾತ್ಮಿಕ ಚಿತ್ರವನ್ನು ನೀಡಿದ್ದಕ್ಕಾಗಿ ಪ್ರೇಕ್ಷಕರು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಇದಕ್ಕೂ ಮೊದಲು, ಬೆಂಗಳೂರಿನ ಅಭಿಮಾನಿಯೊಬ್ಬರು ಇದೇ ರೀತಿ ಕಾಣಿಸಿಕೊಂಡಿದ್ದರು.

ರಿಷಬ್ ಜೊತೆಗೆ, ಚಿತ್ರದಲ್ಲಿ ರುಕ್ಮಿಣಿ ವಸಂತ್, ಜಯರಾಮ್ ಮತ್ತು ಗುಲ್ಶನ್ ದೇವಯ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಜನೇಶ್ ಲೋಕನಾಥ್ ಅವರ ಸಂಗೀತವು ಭಕ್ತಿ ಮತ್ತು ಹಳ್ಳಿಗಾಡಿನ ವಾತಾವರಣಕ್ಕೆ ಪೂರಕವಾಗಿದ್ದರೆ, ಅರವಿಂದ್ ಎಸ್. ಕಶ್ಯಪ್ ಅವರ ಛಾಯಾಗ್ರಹಣ ಮತ್ತು ಸುರೇಶ್ ಮಲ್ಲಯ್ಯ ಅವರ ಸಂಕಲನವು ಚಿತ್ರದ ದೃಶ್ಯ ಕಥಾಹಂದರವನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಕಾಂತಾರ: ಚಾಪ್ಟರ್ 1 2022ರ ಬ್ಲಾಕ್‌ಬಸ್ಟರ್ ಕಾಂತಾರದ ಪೂರ್ವಭಾವಿ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು, ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT