ರಜನಿಕಾಂತ್ 
ಸಿನಿಮಾ ಸುದ್ದಿ

ರಜನಿ ಆಧ್ಯಾತ್ಮಿಕ ಪ್ರಯಾಣ: ಗಂಗಾ ನದಿ ದಡದಲ್ಲಿ ಧ್ಯಾನ, ಬೀದಿ ಬದಿಯಲ್ಲೇ ಊಟ; ಸೂಪರ್ ಸ್ಟಾರ್ ಸರಳತೆಗೆ ಭಾರೀ ಮೆಚ್ಚುಗೆ!

ರಜನಿಕಾಂತ್ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ದಯಾನಂದರಿಗೆ ಗೌರವ ಸಲ್ಲಿಸಿದರು. ಅಲ್ಲಿದ್ದ ಸಮಯದಲ್ಲಿ, ತಲೈವಾ ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿದ್ದರು.

ಇಳಿ ವಯಸ್ಸಲ್ಲೂ ಸೂಪರ್ ಹಿಟ್ ಸಿನಿಮಾಗಳನ್ನ ಕೊಡ್ತಿರೋ ಸೂಪರ್ ಸ್ಟಾರ್ ಈಗ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದಾರೆ. ಸ್ವಲ್ಪ ಸಮಯದವರೆಗೆ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿರುವ ರಜನಿಕಾಂತ್, ಪ್ರಸ್ತುತ ಆಧ್ಯಾತ್ಮಿಕ ಪ್ರಯಾಣ ಪ್ರಾರಂಭಿಸಿದ್ದಾರೆ.

ರಜನಿಕಾಂತ್ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ದಯಾನಂದರಿಗೆ ಗೌರವ ಸಲ್ಲಿಸಿದರು. ಅಲ್ಲಿದ್ದ ಸಮಯದಲ್ಲಿ, ತಲೈವಾ ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿದ್ದರು ಮತ್ತು ಗಂಗಾ ಆರತಿಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಅವರ ಆಧ್ಯಾತ್ಮಿಕ ಪ್ರವಾಸದ ಅನೇಕ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ. ಒಂದು ಫೋಟೋದಲ್ಲಿ ರಜನಿಕಾಂತ್ ಬಿಳಿ ಬಟ್ಟೆಗಳನ್ನು ಧರಿಸಿ, ರಸ್ತೆಬದಿಯ ಕಲ್ಲಿನ(ತಡೆಗೋಡೆ) ಮೇಲ್ಮೈಯಲ್ಲಿ ಇರಿಸಲಾದ ಎಲೆ ತಟ್ಟೆಯಲ್ಲಿ ಬಡಿಸಿದ ಆಹಾರವನ್ನು ಊಟ ಮಾಡುತ್ತಿದ್ದಾರೆ. ಅಲ್ಲದೆ, ಬೆಟ್ಟದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಕಾರು ಕಂಡುಬಂದಿದೆ.

ಇನ್ನೊಂದು ಫೋಟೋದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್​, ಆಶ್ರಮವೊಂದರಲ್ಲಿ ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಿರುವುದನ್ನು ತೋರಿಸಲಾಗಿದೆ. ನಂತರ ರಜನಿಕಾಂತ್ ಒಬ್ಬ ಪುರೋಹಿತರ ಪಕ್ಕದಲ್ಲಿ ನಿಂತು ಗೌರವ ಸಲ್ಲಿಸುತ್ತಿರುವ ಚಿತ್ರ ಕೂಡ ಇದೆ. ರಜನಿಕಾಂತ್ ಅವರ ಸರಳತೆಗೆ ಅವರ ಅಭಿಮಾನಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಅವರಿಗೆ ಇನ್ನೂ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT