ರಾಜು ತಾಳಿಕೋಟೆ 
ಸಿನಿಮಾ ಸುದ್ದಿ

ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ನಿಧನ

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದರು.

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ (Raju Talikote) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದ ರಾಜು ತಾಳಿಕೋಟೆ ಅವರು, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು. ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣದ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ರಾಜು ತಾಳಿಕೋಟೆ ಎಂಟ್ರಿ ಕೊಟ್ಟಿದ್ದರು. ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ 'ಖಾಸ್ಗತೇಶ್ವರ' ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು. ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಸ್ರೇಲ್ ಸಂಸತ್ ನಲ್ಲಿ ಹೈಡ್ರಾಮಾ: ಟ್ರಂಪ್ ಭಾಷಣ ವೇಳೆ Palestine ಪರ ಸಂಸದರ ಘೋಷಣೆ! ಹೊರದಬ್ಬಿದ ಭದ್ರತಾ ಸಿಬ್ಬಂದಿ

'ಲಿವ್-ಇನ್ ಸಂಬಂಧ'ಗಳು ಭಾರತೀಯ ಸಂಸ್ಕೃತಿಗೆ ಬೆದರಿಕೆ: ಉತ್ತರ ಪ್ರದೇಶ ರಾಜ್ಯಪಾಲರ ಅಚ್ಚರಿ ಹೇಳಿಕೆ!

ವಡೋದರಾ ವಿಶ್ವವಿದ್ಯಾಲಯ: ಪರೀಕ್ಷಾ ಕೊಠಡಿಯಲ್ಲೇ ಪರಸ್ಪರ ಚುಂಬನ, ತನಿಖೆಗೆ ಆದೇಶ! Video viral

ದೀಪಾವಳಿ ಕ್ಲೀನಿಂಗ್: ಹಳೆ ಸೆಟಪ್ ಬಾಕ್ಸ್ ನಲ್ಲಿದ್ದ 2 ಲಕ್ಷ ರೂ ಹಣ ಪತ್ತೆ, ಆದ್ರೆ RBI ಶಾಕ್...!

2ನೇ ಟೆಸ್ಟ್: ವಿಂಡೀಸ್ ವೇಗಿಯ ಪೆಟ್ಟಿಗೆ ಮೈದಾನದಲ್ಲೇ ಒದ್ದಾಡಿದ ಕೆಎಲ್ ರಾಹುಲ್, ಕೂದಲೆಳೆ ಅಂತರದಲ್ಲಿ ಅಪಾಯ ಮಿಸ್! Video

SCROLL FOR NEXT