ಅಮಿತಾಬ್ ಬಚ್ಚನ್ ಜೊತೆ ಕೌನ್ ಬನೇಗಾ ಕರೋಡ್ ಪತಿ ಸೆಟ್‌ನಲ್ಲಿ ರಿಷಬ್ ಶೆಟ್ಟಿ. 
ಸಿನಿಮಾ ಸುದ್ದಿ

KBC ವಿಶೇಷ ಸಂಚಿಕೆ: ಅಮಿತಾಬ್ ಬಚ್ಚನ್‌ರ ಕೌನ್ ಬನೇಗಾ ಕರೋಡ್‌ಪತಿಯಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ

ಅಭಿಮಾನಿಗಳು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದು, 'ರಿಷಭ್ ಕೆಬಿಸಿಯಲ್ಲಿ ಎಷ್ಟು ಗೆಲ್ಲುತ್ತಾರೆ?' ಎಂಬುದು ಆನ್‌ಲೈನ್‌ನಲ್ಲಿ ಟ್ರೆಂಡಿಂಗ್ ಪ್ರಶ್ನೆಯಾಗಿದೆ.

ಅಕ್ಟೋಬರ್ 11 ರಂದು ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೌನ್ ಬನೇಗಾ ಕರೋಡ್‌ಪತಿ (ಕೆಬಿಸಿ) ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೂಲಕ ಬಿಗ್ ಬಿ ಜೊತೆ ಪರದೆಯನ್ನು ಹಂಚಿಕೊಂಡರು.

25 ವರ್ಷಗಳಿಗೂ ಹೆಚ್ಚು ಕಾಲದಿಂದ ಮನೆಮನೆಗಳಲ್ಲಿ ಜನಪ್ರಿಯವಾಗಿರುವ ಈ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಭಾಗಿಯಾಗಿದ್ದಾರೆ. ಕಾಂತಾರ: ಚಾಪ್ಟರ್ 1 ಚಿತ್ರದ ಅದ್ಭುತ ಯಶಸ್ಸಿನ ನಂತರ ಅವರ ಜನಪ್ರಿಯತೆಯೂ ದೇಶಾದ್ಯಂತ ಗಗನಕ್ಕೇರಿದೆ. ಈ ಸುದ್ದಿಯನ್ನು ಕಾಂತಾರ ಚಿತ್ರದ ಬ್ಯಾನರ್ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ದೃಢಪಡಿಸಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದೆ.

'ಕಾಂತಾರ: ಚಾಪ್ಟರ್ 1' ತಂಡವು ಭಾರತೀಯ ಚಿತ್ರರಂಗದ ಶಹೆನ್‌ಶಾ, ದಂತಕಥೆ ಅಮಿತಾಬ್ ಬಚ್ಚನ್ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತದೆ' ಎಂದು ಹೊಂಬಾಳೆ ಫಿಲ್ಮ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ. ಕೆಬಿಸಿ ಸೆಟ್‌ನಲ್ಲಿ ಅಮಿತಾಬ್ ಬಚ್ಚನ್ ಅವರೊಂದಿಗೆ ರಿಷಬ್ ಶೆಟ್ಟಿ ಇರುವ ಫೋಟೊವನ್ನು ಹಂಚಿಕೊಂಡಿದೆ.

'ಕೌನ್ ಬನೇಗಾ ಕರೋಡ್‌ಪತಿಯ ಮುಂಬರುವ ಸಂಚಿಕೆಯ ಬಗ್ಗೆ ನಾವು ರೋಮಾಂಚನಗೊಂಡಿದ್ದೇವೆ. ನಿಮ್ಮೊಂದಿಗೆ ಸೇರಲು ತುಂಬಾ ಸಂತೋಷವಾಯಿತು ಸರ್' ಎಂದು ತಿಳಿಸಿದೆ.

ಕಾರ್ಯಕ್ರಮದ ಮುಂಬರುವ ಸಂಚಿಕೆಗಳಲ್ಲಿ ಒಂದರಲ್ಲಿ ಅಮಿತಾಬ್ ಬಚ್ಚನ್ ಎದುರು ರಿಷಬ್ ಶೆಟ್ಟಿ ವಿಶೇಷ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಇದು ದೃಢಪಡಿಸುತ್ತದೆ.

ಅಭಿಮಾನಿಗಳು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದು, 'ರಿಷಭ್ ಕೆಬಿಸಿಯಲ್ಲಿ ಎಷ್ಟು ಗೆಲ್ಲುತ್ತಾರೆ?' ಎಂಬುದು ಆನ್‌ಲೈನ್‌ನಲ್ಲಿ ಟ್ರೆಂಡಿಂಗ್ ಪ್ರಶ್ನೆಯಾಗಿದೆ.

ಈ ಸಂಚಿಕೆಯ ಪ್ರಸಾರ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲವಾದರೂ, ನಿರೀಕ್ಷೆ ಈಗಾಗಲೇ ಗಗನಕ್ಕೇರಿದೆ. ರಿಷಭ್ ಶೆಟ್ಟಿ ಸದ್ಯ ಕಾಂತಾರ: ಚಾಪ್ಟರ್ 1 ರ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವುದು ಮತ್ತು ಅಮಿತಾಬ್ ಬಚ್ಚನ್ ಅವರ ಹುಟ್ಟುಹಬ್ಬ ಆಚರಿಸುತ್ತಿರುವುದರಿಂದ, ಈ ಮುಂಬರುವ ಕೌನ್ ಬನೇಗಾ ಕರೋಡ್ ಪತಿ ಸಂಚಿಕೆಯು ಮಹತ್ವ ಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ಮುಗಿದಿದೆ: 2 ವರ್ಷಗಳ ಬಳಿಕ ಎಲ್ಲಾ ಜೀವಂತ 20 ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್; ಇಸ್ರೇಲ್ ಸೆನೆಟ್‌ನಲ್ಲಿ ಟ್ರಂಪ್ ಭಾಷಣ

RSS ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಸಾವಿಗೆ ಶರಣಾದ ಕೇರಳದ ಸಾಫ್ಟ್‌ವೇರ್ ಎಂಜಿನಿಯರ್; ಪ್ರಿಯಾಂಕಾ ಆಕ್ರೋಶ!

ಮನೆ ಬಾಡಿಗೆ 1.25 ಲಕ್ಷ, ಮನೆ ಕೆಲಸದಾಕೆ ಸಂಬಳವೇ 45 ಸಾವಿರ ರೂ: ರಷ್ಯಾ ಮಹಿಳೆಯ ಬೆಂಗಳೂರು ಲೈಫ್, ವೈರಲ್ ಲೆಕ್ಕಾಚಾರ!

'Toxic' ದೃಶ್ಯಗಳು ಸೋರಿಕೆ: ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ Yash ಶರ್ಟ್‌ಲೆಸ್ ಲುಕ್; Video Viral

ನಾನು ಸಿಎಂ ಆಗಿದ್ರೆ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿರಲಿಲ್ಲ ಎಂದ ಆರ್‌ವಿ ದೇಶಪಾಂಡೆ; ಸ್ಪಷ್ಟನೆ ಕೋರಿದ ಸಿದ್ದರಾಮಯ್ಯ

SCROLL FOR NEXT