ಶೈನ್ ಶೆಟ್ಟಿ-ರಾಜು ತಾಳಿಕೋಟೆ 
ಸಿನಿಮಾ ಸುದ್ದಿ

ಬೇಗ ಹೋಗು, ನನ್ನ ಉಳಿಸಿಕೊಡು: ರಾಜು ತಾಳಿಕೋಟೆಯ ಕೊನೆಯ 6 ನಿಮಿಷದ ಘಟನೆ ವಿವರಿಸಿದ Biggboss ವಿಜೇತ ಶೈನ್ ಶೆಟ್ಟಿ!

ಉಡುಪಿಯಲ್ಲಿ ಶೈನ್ ಶೆಟ್ಟಿ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ರಂಗಭೂಮಿ ಕಲಾವಿದ, ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದರು. ಉಡುಪಿಯಲ್ಲಿ ಶೈನ್ ಶೆಟ್ಟಿ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ದುರಾದೃಷ್ಟವಶಾತ್ ಬದುಕುಳಿಯಲಿಲ್ಲ. ಇನ್ನು ಅಂದು ಏನಾಯ್ತು ಎಂಬುದನ್ನು ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ವಿವರಿಸಿದ್ದಾರೆ. ರಾಜು ತಾಳಿಕೋಟೆ ನನ್ನನ್ನು ಮಗನಂತೆ ನೋಡುತ್ತಿದ್ದರು. ನಿನಗೋಸ್ಕರ ಈ ಚಿತ್ರ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದರು ಎಂದು ಶೈನ್ ಶೆಟ್ಟಿ ಹೇಳಿದ್ದಾರೆ.

ಬಿಗ್ ಬಾಸ್ ಸೀಸನ್ 7ರಲ್ಲಿ ನಾವು ಜೊತೆಗೆ ಭಾಗವಹಿಸಿದ್ದೇವು. ರಾಜು ತಾಳಿಕೋಟೆ ತುಂಬಾ ಹಸನ್ಮುಖಿ. ಎಲ್ಲರನ್ನು ಬಹಳ ಪ್ರೀತಿಸುವ ವ್ಯಕ್ತಿ. ಸಿನಿಮಾ ಮಾಡುವ ಅವಕಾಶ ಸಿಕ್ಕಾಗ ನಾನು ರಾಜು ಅವರನ್ನು ಸಂಪರ್ಕಿಸಿದೆ. ಅವರೂ ಸಂತೋಷದಿಂದ ಒಪ್ಪಿಕೊಂಡಿದ್ದರು. ರಾಜು ತಾಳಿಕೋಟೆಯವರಿಗೆ ಒಟ್ಟು 40 ದಿನದ ಶೆಡ್ಯೂಲ್ ಫಿಕ್ಸ್ ಆಗಿತ್ತು. ಹೆಬ್ರಿಯಲ್ಲಿ ಮೂರು ದಿನದ ಶೂಟಿಂಗ್ ಮುಗಿಸಿ ಉಡುಪಿಗೆ ಬಂದಿದ್ದೇವು.

ಬೆಳಗ್ಗೆ ಶೂಟಿಂಗ್ ಇದ್ದಿದ್ದರಿಂದ ಎಲ್ಲರೂ ಬೇಗ ಮಲಗಿದೇವು. ಆದರೆ 11:59ಕ್ಕೆ ಉಸಿರಾಟ ಸಮಸ್ಯೆ ಅಂತ ಫೋನ್ ಮಾಡಿದ್ದರು. ಪಕ್ಕದ ರೂಮ್ ನಲ್ಲೇ ಇದ್ದಿದ್ದರಿಂದ ನಾನು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದೆ. ಆದರೆ ಪ್ರಯೋಜನವಾಗಲಿಲ್ಲ ಎಂದು ಶೈನ್ ಶೆಟ್ಟಿ ಹೇಳಿದರು. ಕಾರಲ್ಲಿ ಆಸ್ಪತ್ರೆಗೆ ಹೋಗುವಾಗ ನನ್ನೊಂದಿಗೆ ರಾಜು ಅವರು ಮಾತನಾಡುತ್ತಿದ್ದರು. ಬೇಗ ಆಸ್ಪತ್ರೆಗೆ ಹೋಗು, ನನ್ನನ್ನು ಉಳಿಸಿಕೊಡು ಎನ್ನುತ್ತಿದ್ದರು ಎಂದು ಶೈನ್ ಶೆಟ್ಟಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ಸಂವಿಧಾನದ ಸ್ಪಷ್ಟ ಉಲ್ಲಂಘನೆ, ಸುಪ್ರೀಂ ಕೋರ್ಟ್ ಮೊರೆ ಹೋಗಲು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಮಣಿಪುರ: ಶಾಂತಿಗೆ ಮತ್ತೆ ಭಂಗ, ಮೆಯ್ಟೀ ವ್ಯಕ್ತಿಯ ಅಪಹರಣ, ಗುಂಡಿಕ್ಕಿ ಹತ್ಯೆ!

2026 ತಮಿಳುನಾಡು ವಿಧಾನಸಭಾ ಚುನಾವಣೆ: ಆಯೋಗದಿಂದ ಚಿಹ್ನೆ ಪಡೆದ TVK!

ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಗೆಹ್ಲೋಟ್; Video

ಧಾರ್‌- ಭೋಜ್‌ಶಾಲಾ ವಿವಾದ: ವಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ 'ಸುಪ್ರೀಂ' ಅವಕಾಶ

SCROLL FOR NEXT