ಶೈನ್ ಶೆಟ್ಟಿ-ರಾಜು ತಾಳಿಕೋಟೆ 
ಸಿನಿಮಾ ಸುದ್ದಿ

ಬೇಗ ಹೋಗು, ನನ್ನ ಉಳಿಸಿಕೊಡು: ರಾಜು ತಾಳಿಕೋಟೆಯ ಕೊನೆಯ 6 ನಿಮಿಷದ ಘಟನೆ ವಿವರಿಸಿದ Biggboss ವಿಜೇತ ಶೈನ್ ಶೆಟ್ಟಿ!

ಉಡುಪಿಯಲ್ಲಿ ಶೈನ್ ಶೆಟ್ಟಿ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ರಂಗಭೂಮಿ ಕಲಾವಿದ, ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದರು. ಉಡುಪಿಯಲ್ಲಿ ಶೈನ್ ಶೆಟ್ಟಿ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ದುರಾದೃಷ್ಟವಶಾತ್ ಬದುಕುಳಿಯಲಿಲ್ಲ. ಇನ್ನು ಅಂದು ಏನಾಯ್ತು ಎಂಬುದನ್ನು ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ವಿವರಿಸಿದ್ದಾರೆ. ರಾಜು ತಾಳಿಕೋಟೆ ನನ್ನನ್ನು ಮಗನಂತೆ ನೋಡುತ್ತಿದ್ದರು. ನಿನಗೋಸ್ಕರ ಈ ಚಿತ್ರ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದರು ಎಂದು ಶೈನ್ ಶೆಟ್ಟಿ ಹೇಳಿದ್ದಾರೆ.

ಬಿಗ್ ಬಾಸ್ ಸೀಸನ್ 7ರಲ್ಲಿ ನಾವು ಜೊತೆಗೆ ಭಾಗವಹಿಸಿದ್ದೇವು. ರಾಜು ತಾಳಿಕೋಟೆ ತುಂಬಾ ಹಸನ್ಮುಖಿ. ಎಲ್ಲರನ್ನು ಬಹಳ ಪ್ರೀತಿಸುವ ವ್ಯಕ್ತಿ. ಸಿನಿಮಾ ಮಾಡುವ ಅವಕಾಶ ಸಿಕ್ಕಾಗ ನಾನು ರಾಜು ಅವರನ್ನು ಸಂಪರ್ಕಿಸಿದೆ. ಅವರೂ ಸಂತೋಷದಿಂದ ಒಪ್ಪಿಕೊಂಡಿದ್ದರು. ರಾಜು ತಾಳಿಕೋಟೆಯವರಿಗೆ ಒಟ್ಟು 40 ದಿನದ ಶೆಡ್ಯೂಲ್ ಫಿಕ್ಸ್ ಆಗಿತ್ತು. ಹೆಬ್ರಿಯಲ್ಲಿ ಮೂರು ದಿನದ ಶೂಟಿಂಗ್ ಮುಗಿಸಿ ಉಡುಪಿಗೆ ಬಂದಿದ್ದೇವು.

ಬೆಳಗ್ಗೆ ಶೂಟಿಂಗ್ ಇದ್ದಿದ್ದರಿಂದ ಎಲ್ಲರೂ ಬೇಗ ಮಲಗಿದೇವು. ಆದರೆ 11:59ಕ್ಕೆ ಉಸಿರಾಟ ಸಮಸ್ಯೆ ಅಂತ ಫೋನ್ ಮಾಡಿದ್ದರು. ಪಕ್ಕದ ರೂಮ್ ನಲ್ಲೇ ಇದ್ದಿದ್ದರಿಂದ ನಾನು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದೆ. ಆದರೆ ಪ್ರಯೋಜನವಾಗಲಿಲ್ಲ ಎಂದು ಶೈನ್ ಶೆಟ್ಟಿ ಹೇಳಿದರು. ಕಾರಲ್ಲಿ ಆಸ್ಪತ್ರೆಗೆ ಹೋಗುವಾಗ ನನ್ನೊಂದಿಗೆ ರಾಜು ಅವರು ಮಾತನಾಡುತ್ತಿದ್ದರು. ಬೇಗ ಆಸ್ಪತ್ರೆಗೆ ಹೋಗು, ನನ್ನನ್ನು ಉಳಿಸಿಕೊಡು ಎನ್ನುತ್ತಿದ್ದರು ಎಂದು ಶೈನ್ ಶೆಟ್ಟಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ಗೆ ಪಾಕಿಸ್ತಾನದ 100 ಕ್ಕೂ ಹೆಚ್ಚು ಸೈನಿಕರು ಬಲಿ, 12 ವಿಮಾನಗಳು ಧ್ವಂಸ: ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್

ಜೈಸಲ್ಮೇರ್‌ನಲ್ಲಿ ಹೊತ್ತಿ ಉರಿದ ಬಸ್: 15 ಮಂದಿ ಸಜೀವದಹನ; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಪ್ರಯಾಣಿಕರು, Video!

ಟೀಕೆ ಬದಲು ಸಾಮೂಹಿಕ ಪ್ರಯತ್ನ ಅಗತ್ಯ: ಕಿರಣ್​ ಮಜುಂದಾರ್​ಗೆ ಡಿ.ಕೆ ಶಿವಕುಮಾರ್ ತಿರುಗೇಟು

ಕದನ ವಿರಾಮಕ್ಕೆ ಕಿಮ್ಮತ್ತಿಲ್ಲ: ಗಾಜಾದಲ್ಲಿ ಮಾರಣ ಹೋಮ ಮುಂದುವರೆಸಿದ ಇಸ್ರೇಲ್; 9 ಪ್ಯಾಲೆಸ್ತೇನಿಯರು ಸಾವು!

ಮಿತಿ ಮೀರುತ್ತಿದ್ದೀರಾ? ಒಕ್ಕೂಟ ವ್ಯವಸ್ಥೆಯ ಕಥೆಯೇನು?: ತಮಿಳುನಾಡು ಕೇಸ್ ನಲ್ಲಿ ED ವಿರುದ್ಧ 'ಸುಪ್ರೀಂ' ಗರಂ; ಕೋರ್ಟ್ ಚಾಟಿಗೆ ತನಿಖಾ ಸಂಸ್ಥೆ ಬೇಸ್ತು!

SCROLL FOR NEXT