ದಿನಿಲ್ ಬಾಬು ವಿರುದ್ಧದ ಕಾಸ್ಟಿಂಗ್ ಕೌಚ್ ಆರೋಪಗಳಿಗೆ ದುಲ್ಕರ್ ಸಲ್ಮಾನ್ ಅವರ ನಿರ್ಮಾಣ ಸಂಸ್ಥೆ ಪ್ರತಿಕ್ರಿಯೆ 
ಸಿನಿಮಾ ಸುದ್ದಿ

Dulquer Salmaan ನಿರ್ಮಾಣ ಸಂಸ್ಥೆ ಮೇಲೆ ಮಹಿಳೆಯಿಂದ ಕಾಸ್ಟಿಂಗ್ ಕೌಚ್ ದೂರು: ಆರೋಪ ನಿರಾಕರಿಸಿದ ವೇಫೇರರ್ ಫಿಲ್ಮ್ಸ್ ಹೇಳಿದ್ದೇನು?

ವೇಫೇರರ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಸಿನಿಮಾದಲ್ಲಿ ಪಾತ್ರವನ್ನು ನೀಡುವ ನೆಪದಲ್ಲಿ ಧಿನಿಲ್ ಬಾಬು ತನ್ನನ್ನು ಸಂಪರ್ಕಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅವರ ನಿರ್ಮಾಣ ಸಂಸ್ಥೆ 'ಲೋಕಾ' ಚಿತ್ರದ ಯಶಸ್ಸಿನಲ್ಲಿ ಮುಳುಗಿದ್ದರೂ, ಇತ್ತೀಚೆಗೆ ವಿವಾದಕ್ಕೆ ಸಿಲುಕಿದೆ. ಕಂಪನಿಯೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಯೊಬ್ಬರು ತಮ್ಮನ್ನು ಕಾಸ್ಟಿಂಗ್ ಕೌಚ್ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.

ದುಲ್ಕರ್ ಸಲ್ಮಾನ್ ನಿರ್ಮಾಣ ಸಂಸ್ಥೆ ಕಾಸ್ಟಿಂಗ್ ಕೌಚ್ ವಿವಾದದಲ್ಲಿ

ಮಹಿಳೆ ನೀಡಿದ ದೂರಿನಲ್ಲಿ ಸಹಾಯಕ ನಿರ್ದೇಶಕ ಧಿನಿಲ್ ಬಾಬು ಅವರ ಮೇಲೆ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ದುಲ್ಕರ್ ಸಲ್ಮಾನ್ ಅವರ ನಿರ್ಮಾಣ ಸಂಸ್ಥೆ ಥೇವರ ಪೊಲೀಸ್ ಠಾಣೆ ಮತ್ತು ಫೆಫ್ಕಾಗೆ ಅಧಿಕೃತ ವರದಿಗಳನ್ನು ಸಲ್ಲಿಸಿದ್ದು, ಧಿನಿಲ್ ಬಾಬು ಜೊತೆ ಕಂಪನಿ ಯಾವುದೇ ಸಂಬಂಧ ಹೊಂದಿಲ್ಲ. ಅವರ ಯಾವುದೇ ಯೋಜನೆಗಳಲ್ಲಿ ಕೆಲಸ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಆರೋಪ ವಿವರಗಳು

ವೇಫೇರರ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಸಿನಿಮಾದಲ್ಲಿ ಪಾತ್ರವನ್ನು ನೀಡುವ ನೆಪದಲ್ಲಿ ಧಿನಿಲ್ ಬಾಬು ತನ್ನನ್ನು ಸಂಪರ್ಕಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಕಂಪನಿಯ ಪಣಂಪಿಲ್ಲಿ ನಗರ ಕಚೇರಿಯ ಬಳಿಯ ಕಟ್ಟಡದಲ್ಲಿ ಭೇಟಿಯಾಗಲು ಆಹ್ವಾನಿಸಿ ಧಿನಿಲ್ ತನ್ನನ್ನು ಒಂದು ಕೋಣೆಗೆ ಕರೆದೊಯ್ದು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದನ್ನು ವಿರೋಧಿಸಿದರೆ ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಭವಿಷ್ಯದ ಅವಕಾಶಗಳು ಕೈತಪ್ಪಿ ಹೋಗುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ದೂರುದಾರರು ಪೊಲೀಸರಿಗೆ ಸಾಕ್ಷ್ಯವಾಗಿ ಧ್ವನಿ ಸಂದೇಶಗಳನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಆರೋಪ ನಿರಾಕರಣೆ

ವೇಫೇರರ್ ಫಿಲ್ಮ್ಸ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದಕ್ಕೂ ಕಂಪೆನಿಗೂ ಯಾವುದೇ ಸಂಬಂಧವಿಲ್ಲ ಎಂದಿದೆ. ಕಾಸ್ಟಿಂಗ್ ಕೌಚ್ ಆರೋಪಗಳಿಗೆ ಸಂಬಂಧಿಸಿದ ಮಾನನಷ್ಟದಿಂದ ವೇಫೇರರ್ ಫಿಲ್ಮ್ಸ್ ನ್ನು ರಕ್ಷಿಸಲು ಧಿನಿಲ್ ಬಾಬು ವಿರುದ್ಧ ದೂರು ದಾಖಲಿಸಲಾಗಿದೆ ಎಂದು ನಿರ್ಮಾಣ ಸಂಸ್ಥೆ ಹೇಳಿದೆ. ಧಿನಿಲ್ ಬಾಬು ತಮ್ಮ ಯಾವುದೇ ಯೋಜನೆಗಳೊಂದಿಗೆ ಸಂಬಂಧ ಹೊಂದಿಲ್ಲ ಮತ್ತು ಕಂಪನಿಯೊಂದಿಗಿನ ಅವರ ಸಂಬಂಧದ ಯಾವುದೇ ಹೇಳಿಕೆಗಳು ಸುಳ್ಳು ಎಂದು ವೇಫೇರರ್ ಫಿಲ್ಮ್ಸ್ ಹೇಳಿದ್ದು, ವೇಫೇರರ್ ಫಿಲ್ಮ್ಸ್ ಹೆಸರಿನಲ್ಲಿ ಯಾರಾದರೂ ಕರೆ ಮಾಡಿದರೆ ಎಚ್ಚರಿಕೆಯಿಂದಿರುವಂತೆ ಕರೆ ನೀಡಿದೆ.

ದೂರಿನ ಹಿನ್ನೆಲೆಯಲ್ಲಿ, ಎರ್ನಾಕುಲಂ ದಕ್ಷಿಣ ಪೊಲೀಸರು ಔಪಚಾರಿಕ ಪ್ರಕರಣ ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಮಲಯಾಳಂ ಚಲನಚಿತ್ರ ಮಂಡಳಿ ಫೆಫ್ಕಾಗೆ ಪರಿಸ್ಥಿತಿಯ ಬಗ್ಗೆಯೂ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸನಾತನಿಗಳ ಸಹವಾಸದಿಂದ ದೂರ ಇರಿ; RSS, ಸಂಘ ಪರಿವಾರದ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ

ಕಲಬುರಗಿ: ಚಿತ್ತಾಪುರದಲ್ಲಿ RSS ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್, ಭಗವಾಧ್ವಜ ತೆರವು; BJP ಕಿಡಿ

ಬೆಂಗಳೂರು: 8 ದಿನಗಳಿಂದ ಪ್ರೇಯಸಿ ಜತೆ ಖಾಸಗಿ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ನಿಗೂಢ ಸಾವು, Girlfriend ಎಸ್ಕೇಪ್!

ಜಾರ್ಖಂಡ್: ಮಿತಿ ಮೀರಬೇಡಿ; ನ್ಯಾಯಾಂಗದ ಬಗ್ಗೆ ದೇಶ ಹೊತ್ತಿ ಉರೀತಿದೆ: ಹೈಕೋರ್ಟ್ ಜಡ್ಜ್ ಗೇ ಝಾಡಿಸಿದ ವಕೀಲ!

ಶಾಂತಿಯೋ? ಪ್ರಕ್ಷುಬ್ಧತೆಯೋ?: ತಾಲಿಬಾನ್ ಗೆ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಕೊಟ್ಟ ವಾರ್ನಿಂಗ್ ಏನು?

SCROLL FOR NEXT