ನಟ ಪ್ರಮೋದ್, ಅಮೃತಾ ಅಯ್ಯಂಗಾರ್, ಸಾಯಿ ಕುಮಾರ್ ಮತ್ತು ಕೆಪಿ ಶ್ರೀಕಾಂತ್ 
ಸಿನಿಮಾ ಸುದ್ದಿ

'ಟಗರು' ಖ್ಯಾತಿಯ ಕೆಪಿ ಶ್ರೀಕಾಂತ್ ನಿರ್ಮಾಣದ ಮಾಸ್ ಎಂಟರ್‌ಟೈನರ್‌ನಲ್ಲಿ ಪ್ರಮೋದ್‌; ಅಮೃತಾ ಅಯ್ಯಂಗಾರ್ ನಾಯಕಿ

ಈ ಚಿತ್ರವನ್ನು ಚೊಚ್ಚಲ ನಿರ್ದೇಶಕ ಚಾಲಾ ನಿರ್ದೇಶಿಸಲಿದ್ದು, ಚಿತ್ರಕ್ಕೆ ಹರಿ ಕೃಷ್ಣ ಸಂಗೀತ ಸಂಯೋಜಿಸಲಿದ್ದರೆ, ಸತ್ಯ ಹೆಗ್ಡೆ ಛಾಯಾಗ್ರಾಹಕರಾಗಿರುತ್ತಾರೆ.

ಗೀತಾ ಬ್ಯಾಂಗಲ್ ಸ್ಟೋರ್ಸ್‌, ಪ್ರೀಮಿಯರ್ ಪದ್ಮಿನಿ ಮತ್ತು ರತ್ನನ್ ಪ್ರಪಂಚದಂತಹ ಚಿತ್ರಗಳಲ್ಲಿನ ತಮ್ಮ ನಟನೆಗೆ ಹೆಸರುವಾಸಿಯಾದ ನಟ ಪ್ರಮೋದ್ ಅವರಿಗೆ ಪ್ರಭಾಸ್-ಪ್ರಶಾಂತ್ ನೀಲ್ ಅವರ ಸಲಾರ್ ಚಿತ್ರದ ಮೂಲಕ ತೆಲುಗಿನಲ್ಲಿಯೂ ಬ್ರೇಕ್ ಸಿಕ್ಕಿತು. ಸದ್ಯ ಅವರು ಅಖಿಲ್ ಅಕ್ಕಿನೇನಿ ಅವರೊಂದಿಗೆ ಮತ್ತೊಂದು ಕುತೂಹಲಕಾರಿ ತೆಲುಗು ಯೋಜನೆಯಾದ 'ಲೆನಿನ್‌'ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿಯ ಪ್ರಕಾರ ಪ್ರಮೋದ್ ಇದೀಗ ಸಂಪೂರ್ಣ ಮಾಸ್ ಎಂಟರ್‌ಟೈನರ್‌ನಲ್ಲಿ ಕಾಣಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಟಗರು ಮತ್ತು ಸಲಗದಂತಹ ಹಿಟ್‌ ಚಿತ್ರಗಳಿಗೆ ಹೆಸರುವಾಸಿಯಾದ ಕೆಪಿ ಶ್ರೀಕಾಂತ್ ಅವರು ವೀನಸ್ ಎಂಟರ್‌ಟೈನರ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಈ ಚಿತ್ರವನ್ನು ಚೊಚ್ಚಲ ನಿರ್ದೇಶಕ ಚಾಲಾ ನಿರ್ದೇಶಿಸಲಿದ್ದು, ಚಿತ್ರಕ್ಕೆ ಹರಿ ಕೃಷ್ಣ ಸಂಗೀತ ಸಂಯೋಜಿಸಲಿದ್ದರೆ, ಸತ್ಯ ಹೆಗ್ಡೆ ಛಾಯಾಗ್ರಾಹಕರಾಗಿರುತ್ತಾರೆ. ನಿರ್ಮಾಣ ವಿನ್ಯಾಸವನ್ನು ಕೆಜಿಎಫ್ ಖ್ಯಾತಿಯ ಶಿವಕುಮಾರ್ ಮತ್ತು ಅಮರ್ ನಿರ್ವಹಿಸುತ್ತಾರೆ. ನಿರ್ಮಲ್ ವಿಎಫ್‌ಎಕ್ಸ್ ಅನ್ನು ನೋಡಿಕೊಳ್ಳಲಿದ್ದಾರೆ.

ಅಮೃತಾ ಅಯ್ಯಂಗಾರ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಅಲ್ಲದೆ, ಹಿರಿಯ ನಟ ಸಾಯಿ ಕುಮಾರ್ ಕೂಡ ನಟಿಸಿದ್ದಾರೆ. ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿರುವ ನಟನಾ ವೃತ್ತಿಜೀವನವನ್ನು ಗೌರವಿಸಲು ನಿರ್ಮಾಪಕರು ಯೋಜಿಸಿದ್ದಾರೆ.

ಅಕ್ಟೋಬರ್ 24 ರಂದು ನಡೆಯಲಿರುವ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಶಿವರಾಜ್‌ಕುಮಾರ್ ಮತ್ತು ಅವರ ಪತ್ನಿ ಗೀತಾ, ಸುದೀಪ್ ಮತ್ತು ಡಾಲಿ ಧನಂಜಯ ಸೇರಿದಂತೆ ಕನ್ನಡ ಚಿತ್ರರಂಗದ ಇತರರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ, ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಯೋಜಿಸಿದೆ. ಈ ಯೋಜನೆಯು ಈ ನವೆಂಬರ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

SCROLL FOR NEXT