ರಜನೀಕಾಂತ್-ಧನುಷ್ 
ಸಿನಿಮಾ ಸುದ್ದಿ

ರಜನಿಕಾಂತ್, ಧನುಷ್ ಮನೆಗೆ ಬಾಂಬ್ ಬೆದರಿಕೆ; ಆದ್ರೆ ನಟರು ಶೋಧ ನಿರಾಕರಿಸಿದ್ದೇಕೆ?

ತೇನಾಂಪೇಟೆ ಪೊಲೀಸರ ಪ್ರಕಾರ, ಅಕ್ಟೋಬರ್ 27 ರಂದು ಬೆಳಗ್ಗೆ 8.30 ರ ಸುಮಾರಿಗೆ ರಜನಿಕಾಂತ್ ಅವರ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಪತ್ರ ಪೊಲೀಸರಿಗೆ ಬಂದಿದೆ.

ಚೆನ್ನೈ: ಖ್ಯಾತ ತಮಿಳು ನಟರಾದ ರಜನಿಕಾಂತ್ ಮತ್ತು ಧನುಷ್ ಅವರ ನಿವಾಸಗಳಲ್ಲಿ ಬಾಂಬ್‌ ಇಡಲಾಗಿದೆ ಎಂಬ ಬೆದರಿಕೆ ಇಮೇಲ್‌ಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವೀಕರಿಸಿದ್ದಾರೆ ಎಂದು ತಮಿಳುನಾಡು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ತೇನಾಂಪೇಟೆ ಪೊಲೀಸರ ಪ್ರಕಾರ, ಅಕ್ಟೋಬರ್ 27 ರಂದು ಬೆಳಗ್ಗೆ 8.30 ರ ಸುಮಾರಿಗೆ ರಜನಿಕಾಂತ್ ಅವರ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಪತ್ರ ಪೊಲೀಸರಿಗೆ ಬಂದಿದೆ.

"ಪೊಲೀಸರು ಬಾಂಬ್ ನಿಷ್ಕ್ರಿಯ ತಂಡದೊಂದಿಗೆ ರಜನಿಕಾಂತ್ ಅವರ ಮನೆಗೆ ತೆರಳಿದಾಗ, ಅವರು ಬಾಂಬ್ ಸ್ಕ್ವಾಡ್‌ನ ಸಹಾಯದಿಂದ ಶೋಧ ಕಾರ್ಯಾಚರಣೆಯ ಅಗತ್ಯವಿಲ್ಲ ಎಂದು ನಮಗೆ ತಿಳಿಸಿದರು" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅದೇ ದಿನ ಸಂಜೆ 6.30 ಕ್ಕೆ ಎರಡನೇ ಬೆದರಿಕೆ ಪತ್ರ ಬಂದಿದ್ದು, ರಜನಿಕಾಂತ್ ಅವರ ತಂಡ ಮತ್ತೆ ಭದ್ರತಾ ತಪಾಸಣೆಯನ್ನು ನಿರಾಕರಿಸಿತು.

ಅದೇ ದಿನ ನಟ ಧನುಷ್ ಅವರ ಮನೆಯಲ್ಲೂ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಪತ್ರವೂ ಬಂದಿದೆ. "ಅವರು ಕೂಡ ನಮ್ಮ ಸಹಾಯವನ್ನು ನಿರಾಕರಿಸಿದರು" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಹಲವಾರು ಪ್ರಮುಖ ವ್ಯಕ್ತಿಗಳಿಗೆ ಈ ರೀತಿಯ ಬೆದರಿಕೆ ಪತ್ರಗಳು ಬರುತ್ತಿದ್ದು, ಸೈಬರ್ ಅಪರಾಧ ಪೊಲೀಸರು ಆ ಇಮೇಲ್‌ಗಳನ್ನು ಪತ್ತೆಹಚ್ಚುತ್ತಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವ್ಯಾಪಾರ ಉದ್ವಿಗ್ನತೆ ನಂತರ ಅಮೆರಿಕ-ಚೀನಾ ಸಂಬಂಧ ಸ್ಥಿರಗೊಳಿಸುವ ಪ್ರಯತ್ನ: ಇಂದು ದ.ಕೊರಿಯಾದಲ್ಲಿ ಟ್ರಂಪ್-ಜಿನ್ ಪಿಂಗ್ ಭೇಟಿ, ಮಾತುಕತೆ

ಮ್ಯಾನ್ಮಾರ್ ನಿಂದ ಪಲಾಯನ, ಥಾಯ್ಲೆಂಡ್ ನಲ್ಲಿ 500 ಭಾರತೀಯರ ಬಂಧನ: ವಾಪಾಸ್ ಕರೆತರಲು ಪ್ರಯತ್ನ ಎಂದ ಕೇಂದ್ರ

ಕಲಿಯುಗದಲ್ಲಿ ಪಾಪ ನಿವಾರಣೆಗೆ ಮಂತ್ರ ಜಪವೇ ಯೋಗ್ಯ: 'ಪಠಣ ದೋಷ'ದಿಂದ ಮುಕ್ತಿ ಹೇಗೆ? 'ಕುಂಡಲಿನಿ ಶಕ್ತಿ' ಜಾಗೃತಗೊಳಿಸುವ ಉಪಾಯ ತಿಳಿದುಕೊಳ್ಳಿ!

'ಭಾರತದಲ್ಲಿ ಸ್ವತಂತ್ರವಾಗಿ ಧೈರ್ಯದಿಂದ ಬದುಕುತ್ತಿದ್ದೇನೆ., ಬಾಂಗ್ಲಾದೇಶಕ್ಕೆ ಬರಲ್ಲ.. ಆದರೆ': ಶೇಖ್ ಹಸೀನಾ

South Africa vs England, ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದ 2ನೇ ಅತೀ ದೊಡ್ಡ ಸೋಲು, ಇಂಗ್ಲೆಂಡ್ ಗೆ ತೀವ್ರ ಮುಖಭಂಗ

SCROLL FOR NEXT