ಪುನೀತ್ ರಾಜ್ ಕುಮಾರ್  
ಸಿನಿಮಾ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗತಿಸಿ ಇಂದಿಗೆ ನಾಲ್ಕು ವರ್ಷ: ಕುಟುಂಬಸ್ಥರು, ಅಭಿಮಾನಿಗಳು, ಗಣ್ಯರಿಂದ ಸ್ಮರಣೆ

ಅಕ್ಟೋಬರ್ 29, 2021ರಂದು ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ನಿಧನ ಹೊಂದಿದರು.

Puneeth Rajkumar Death Anniversary: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಿಧನರಾಗಿ ಇಂದಿಗೆ ನಾಲ್ಕು ವರ್ಷವಾಗಿದೆ. ತಮ್ಮ 47ನೇ ವಯಸ್ಸಿನಲ್ಲಿ ಅಕಾಲಿಕವಾಗಿ ಹಠಾತ್ ನಿಧನರಾದಾಗ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿತ್ತು.

ಅಕ್ಟೋಬರ್ 29, 2021ರಂದು ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ನಿಧನ ಹೊಂದಿದರು.

ಬರ್ತ್​ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಪುನೀತ್

ಪುನೀತ್ ಆಪ್ತ ಹಾಗೂ ಸಂಗೀತ ಸಂಯೋಜಕ ಗುರುಕಿರಣ್ ಅವರಿಗೆ ಅಕ್ಟೋಬರ್ 28 ಬರ್ತ್​ಡೇ. ಈ ಕಾರಣಕ್ಕೆ ಪುನೀತ್ ಅವರನ್ನು ಪಾರ್ಟಿಗೆ ಆಹ್ವಾನ ಮಾಡಿದ್ದರು. ಪುನೀತ್ ಅವರು ಈ ಪಾರ್ಟಿಗೆ ಬಂದ ಸೆಲೆಬ್ರಟಿಗಳು ಹಾಗೂ ಆಪ್ತರ ಜೊತೆ ಮಾತನಾಡಿ ಅಲ್ಲಿಂದ ಮನೆಗೆ ಬಂದಿದ್ದರು.

ಅಂದು ಏನಾಗಿತ್ತು?

2021ರ ಅಕ್ಟೋಬರ್ 29ರಂದು ಶಿವರಾಜ್​ಕುಮಾರ್ ನಟನೆಯ, ಹರ್ಷ ನಿರ್ದೇಶನದ ‘ಭಜರಂಗಿ 2’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾಗೆ ಮುಂಜಾನೆ 5 ಗಂಟೆಯಿಂದಲೇ ಶೋಗಳನ್ನು ಆಯೋಜನೆ ಮಾಡಲಾಯಿತು. ಈ ಚಿತ್ರಕ್ಕೆ ಪುನೀತ್ ರಾಜ್​ಕುಮಾರ್ ಅವರು ಟ್ವಿಟರ್ ಮೂಲಕ ವಿಶ್ ಮಾಡಿದರು.

10 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಅವರು ನಿಧನ ಹೊಂದಿಯಾಗಿತ್ತು. 12 ಗಂಟೆ ವೇಳೆಗೆ ಅವರು ನಿಧನ ಹೊಂದಿದ್ದು ಖಚಿತವಾಗಿತ್ತು. ಆದರೆ, ಸರ್ಕಾರದವರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡ ಬಳಿಕವೇ ಈ ಸುದ್ದಿಯನ್ನು ಪ್ರಕಟಿಸಿದರು. ಅವರ ನಿಧನ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿತ್ತು.

ಪಿಆರ್​ಕೆ ಜವಾಬ್ದಾರಿ

ಪುನೀತ್ ನಿಧನದ ಬಳಿಕ ಪಿಆರ್​ಕೆ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ. ಇದನ್ನು ಅವರು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಪುನೀತ್ ನಿಧನದ ಬಳಿಕ ಪಿಆರ್​ಕೆಯಿಂದ ‘ಒನ್ ಕಟ್ ಟೂ ಕಟ್’, ‘ಫ್ಯಾಮಿಲಿ ಪ್ಯಾಕ್’, ‘ಮ್ಯಾನ್ ಆಫ್ ದಿ ಮ್ಯಾಚ್’, ‘ಗಂಧದಗುಡಿ’, ‘ಆಚಾರ್ ಆ್ಯಂಡ್ ಕೋ’, ‘ಒ2’ ಹಾಗೂ ‘ಎಕ್ಕ’ ಸಿನಿಮಾಗಳು ಬಂದಿವೆ. ಈ ಪೈಕಿ ಕೆಲವು ಕಥೆಗಳನ್ನು ಪುನೀತ್ ಅವರೇ ಫೈನಲ್ ಮಾಡಿದ್ದರೆ, ಇನ್ನೂ ಕೆಲವು ಅಶ್ವಿನಿ ಅವರು ಮಾಡಿದ್ದಾರೆ.

ಇಂದು ಕುಟುಂಬಸ್ಥರಿಂದ ಪೂಜೆ, ಸ್ಮರಣೆ

ಪುನೀತ್ ಅವರ ಸಮಾಧಿ ಕಂಠೀರವ ಸ್ಟುಡಿಯೊ ಬಳಿ ಇಂದು ಅವರ ಕುಟುಂಬಸ್ಥರು, ಸಮೀಪದ ಬಂಧುಗಳು, ಅಭಿಮಾನಿಗಳು ಪೂಜೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವ್ಯಾಪಾರ ಉದ್ವಿಗ್ನತೆ ನಂತರ ಅಮೆರಿಕ-ಚೀನಾ ಸಂಬಂಧ ಸ್ಥಿರಗೊಳಿಸುವ ಪ್ರಯತ್ನ: ಇಂದು ದ.ಕೊರಿಯಾದಲ್ಲಿ ಟ್ರಂಪ್-ಜಿನ್ ಪಿಂಗ್ ಭೇಟಿ, ಮಾತುಕತೆ

ಮ್ಯಾನ್ಮಾರ್ ನಿಂದ ಪಲಾಯನ, ಥಾಯ್ಲೆಂಡ್ ನಲ್ಲಿ 500 ಭಾರತೀಯರ ಬಂಧನ: ವಾಪಾಸ್ ಕರೆತರಲು ಪ್ರಯತ್ನ ಎಂದ ಕೇಂದ್ರ

ಕಲಿಯುಗದಲ್ಲಿ ಪಾಪ ನಿವಾರಣೆಗೆ ಮಂತ್ರ ಜಪವೇ ಯೋಗ್ಯ: 'ಪಠಣ ದೋಷ'ದಿಂದ ಮುಕ್ತಿ ಹೇಗೆ? 'ಕುಂಡಲಿನಿ ಶಕ್ತಿ' ಜಾಗೃತಗೊಳಿಸುವ ಉಪಾಯ ತಿಳಿದುಕೊಳ್ಳಿ!

'ಭಾರತದಲ್ಲಿ ಸ್ವತಂತ್ರವಾಗಿ ಧೈರ್ಯದಿಂದ ಬದುಕುತ್ತಿದ್ದೇನೆ., ಬಾಂಗ್ಲಾದೇಶಕ್ಕೆ ಬರಲ್ಲ.. ಆದರೆ': ಶೇಖ್ ಹಸೀನಾ

South Africa vs England, ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದ 2ನೇ ಅತೀ ದೊಡ್ಡ ಸೋಲು, ಇಂಗ್ಲೆಂಡ್ ಗೆ ತೀವ್ರ ಮುಖಭಂಗ

SCROLL FOR NEXT