ಗೌತಮಿ ಜಾದವ್ - ರಿಷಿ 
ಸಿನಿಮಾ ಸುದ್ದಿ

'ಮಂಗಳಾಪುರಂ'ನಲ್ಲಿ ರಿಷಿಗೆ ಬಿಗ್ ಬಾಸ್ ಕನ್ನಡ ಖ್ಯಾತಿಯ ನಟಿ ಗೌತಮಿ ಜಾದವ್ ಜೋಡಿ!

ವಾರಾಹಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿದ್ವಾನ್ ಪ್ರಸನ್ನ ತಂತ್ರಿ ಮತ್ತು ರಾಮ್ ಪ್ರಸಾದ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿ ಮುಂತಾದ ಚಿತ್ರಗಳ ಮೂಲಕ ಹೆಸರು ಮಾಡಿದ ನಟ ರಿಷಿ, ತಮ್ಮ ಪಾತ್ರಗಳ ಆಯ್ಕೆಯಿಂದಲೇ ಪ್ರೇಕ್ಷಕರನ್ನು ಅಚ್ಚರಿಗೊಳಿಸಿದ್ದಾರೆ. ಈಗ ಅವರು ಮಂಗಳಾಪುರಂನ ಕುತೂಹಲಕಾರಿ ಜಗತ್ತಿಗೆ ಕಾಲಿಡುತ್ತಿದ್ದಾರೆ. ಇದೊಂದು ನಿಗೂಢ ಕರಾವಳಿ-ಪಟ್ಟಣದ ಕಥೆಯಾಗಿದ್ದು, ಇದರಲ್ಲಿ ದಿವಂಗತ ಕಾಶಿನಾಥ್ ಅವರ ಪುತ್ರ ಅಭಿಮನ್ಯು ಪ್ರಮುಖ ಪಾತ್ರದಲ್ಲಿದ್ದಾರೆ.

ಈ ಹಿಂದೆ ತುಳು ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ರಂಜಿತ್ ರಾಜ್ ಸುವರ್ಣ ಅವರು ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ವಾರಾಹಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿದ್ವಾನ್ ಪ್ರಸನ್ನ ತಂತ್ರಿ ಮತ್ತು ರಾಮ್ ಪ್ರಸಾದ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇತ್ತೀಚೆಗೆ ಮೂಡುಬಿದಿರೆಯಲ್ಲಿ ಅದ್ಧೂರಿ ಮುಹೂರ್ತ ಸಮಾರಂಭ ನಡೆದಿದ್ದು, ಇಡೀ ಚಿತ್ರತಂಡವೇ ಭಾಗವಹಿಸಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಚಿತ್ರೀಕರಣದ ಆರಂಭಕ್ಕೆ ಕ್ಲ್ಯಾಪ್ ಮಾಡಿದರು.

ಕಿರುತೆರೆ ಮತ್ತು ಬಿಗ್ ಬಾಕ್ ಕನ್ನಡದ ಮೂಲಕ ಮನೆಮಾತಾಗಿರುವ ನಟಿ ಗೌತಮಿ ಜಾದವ್ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ನಟ ರಿಷಿಗೆ ಜೋಡಿಯಾಗಿ ಇದೀಗ ಚಿತ್ರರಂಗದಲ್ಲಿ ತಮ್ಮ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಗೌತಮಿ ಅವರ ಪತಿ ಅಭಿಷೇಕ್ ಕಾಸರಗೋಡು ಈ ಚಿತ್ರದ ಛಾಯಾಗ್ರಾಹಕರಾಗಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT