ನಟ ದರ್ಶನ್ 
ರಾಜ್ಯ

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ; ಸೆಪ್ಟೆಂಬರ್ 9ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್!

ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ, ಬಳ್ಳಾರಿ ಬೆಂಗಳೂರಿನಿಂದ ಸುಮಾರು 310 ಕಿ.ಮೀ ದೂರದಲ್ಲಿದೆ. ಇದರಿಂದಾಗಿ ನಟ ಪ್ರತಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವುದು ಕಷ್ಟವಾಗುತ್ತದೆ ಎಂದು ವಾದಿಸಿದರು.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದು ಮತ್ತು ಜೈಲಿನೊಳಗೆ ಮೂಲಭೂತ ಸೌಲಭ್ಯಗಳನ್ನು ಕೋರಿ ದರ್ಶನ್ ಸ್ವತಃ ಸಲ್ಲಿಸಿದ್ದ ಅರ್ಜಿಗಳ ಕುರಿತ ತೀರ್ಪನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ.

ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ, ಬಳ್ಳಾರಿ ಬೆಂಗಳೂರಿನಿಂದ ಸುಮಾರು 310 ಕಿ.ಮೀ ದೂರದಲ್ಲಿದೆ. ಇದರಿಂದಾಗಿ ನಟ ಪ್ರತಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವುದು ಕಷ್ಟವಾಗುತ್ತದೆ ಎಂದು ವಾದಿಸಿದರು. ಇದಕ್ಕೆ ಪ್ರತಿಯಾಗಿ, ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ಸುಪ್ರೀಂ ಕೋರ್ಟ್ ಈಗಾಗಲೇ ದರ್ಶನ್ ಅವರ ಜಾಮೀನು ರದ್ದುಗೊಳಿಸುವಾಗ ಜೈಲಿನಲ್ಲಿ ಅವರ ನಡವಳಿಕೆಯನ್ನು ಗಮನಿಸಿದೆ. ಆದ್ದರಿಂದ ಅವರ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಸಮರ್ಥನೆಯ ಅಗತ್ಯವಿಲ್ಲ ಎಂದು ವಾದಿಸಿದರು. ಆರೋಪಿಯನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಆಡಳಿತಾತ್ಮಕ ಕಾರಣಗಳು ಮಾತ್ರ ಸಾಕು ಎಂದರು.

ದರ್ಶನ್ ಪರ ವಕೀಲರು ಹಾಸಿಗೆ, ದಿಂಬು ಮತ್ತು ಕಂಬಳಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ನಿರ್ದೇಶನ ನೀಡುವಂತೆ ಕೋರಿದ್ದು ವಿಚಾರಣಾಧೀನ ಕೈದಿಗಳು ಕನಿಷ್ಠ ಸೌಲಭ್ಯಗಳಿಗೆ ಅರ್ಹರು ಎಂದು ವಾದಿಸಿದರು. ಅಂತಹ ಅಗತ್ಯ ವಸ್ತುಗಳನ್ನು ಯಾವ ಕಾನೂನು ಆಧಾರದ ಮೇಲೆ ನಿರಾಕರಿಸಬಹುದು ಎಂದು ವಕೀಲರು ಅಧಿಕಾರಿಗಳನ್ನು ಪ್ರಶ್ನಿಸಿದರು.

ಆದರೆ, ದರ್ಶನ್ ಅವರ ಮನವಿಯು ಅಕಾಲಿಕವಾಗಿದ್ದು, ಅವರನ್ನು ಜೈಲಿನಲ್ಲಿಟ್ಟ ಎರಡು ದಿನಗಳ ನಂತರ ಅರ್ಜಿ ಸಲ್ಲಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಾದಿಸಿತು. ಕರ್ನಾಟಕ ಕೈದಿಗಳ ಕಾಯ್ದೆಯಡಿಯಲ್ಲಿನ ನಿಬಂಧನೆಗಳು ಶಿಕ್ಷೆಗೊಳಗಾದ ಕೈದಿಗಳಿಗೆ ಅನ್ವಯಿಸುತ್ತವೆ. ವಿಚಾರಣಾಧೀನ ಕೈದಿಗಳಿಗೆ ಅಲ್ಲ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ಮತ್ತಷ್ಟು ವಿವರಿಸಿದರು. ಪತ್ರಿಕೆಗಳು ಮತ್ತು ಪುಸ್ತಕಗಳನ್ನು ಅನುಮತಿಸಬಹುದಾದರೂ, ಕೊಲೆಯಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವವರಿಗೆ ಹಾಸಿಗೆ ಮತ್ತು ದಿಂಬಿನಂತಹ ಸೌಲಭ್ಯಗಳನ್ನು ಅನುಮತಿಸಲಾಗುವುದಿಲ್ಲ ಎಂದು ವಾದಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ಈ ವಿಷಯದ ಕುರಿತು ತನ್ನ ನಿರ್ಧಾರವನ್ನು ಸೆಪ್ಟೆಂಬರ್ 9 ರವರೆಗೆ ಕಾಯ್ದಿರಿಸಿದೆ. ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಅವರ ಸ್ನೇಹಿತ ಪವಿತ್ರಾ ಗೌಡ ಮತ್ತು ಇತರರು ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ

ನಾನು ಹೇಳಿದ್ರೂ ಕೇಳೋಲ್ವಾ, ಎಷ್ಟು ಧೈರ್ಯ ನಿನಗೆ? ಮಹಿಳಾ IPS ಅಧಿಕಾರಿ ಜೊತೆ ಅಜಿತ್ ಪವಾರ್ ವಾಗ್ವಾದ; ವಿಡಿಯೋ ವೈರಲ್

MUDA ಕೇಸ್: ಸಿಎಂಗೆ ಕ್ಲೀನ್ ಚಿಟ್ ನೀಡಿದ್ದ ದೇಸಾಯಿ ಆಯೋಗ ವರದಿಗೆ ಸಂಪುಟ ಅನುಮೋದನೆ, ಅಧಿಕಾರಿಗಳು-ಅಕ್ರಮ ಫಲಾನುಭವಿಗಳಿಂದ ನಷ್ಟ ವಸೂಲಿಗೆ ನಿರ್ಧಾರ

ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ನಿರ್ಧಾರ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!

ಬೆಂಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮ; ನಗರದ ಹಲವಡೆ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ...

SCROLL FOR NEXT