ದುನಿಯಾ ವಿಜಯ್ 
ಸಿನಿಮಾ ಸುದ್ದಿ

SIIMA 2025: ಕನ್ನಡ ಅಷ್ಟೊಂದು ಕೆಳಮಟ್ಟಕ್ಕೆ ಇಳಿದಿಲ್ಲ; ವೇದಿಕೆಯಲ್ಲೇ ಆಯೋಜಕರಿಗೆ ದುನಿಯಾ ವಿಜಯ್ ಎಚ್ಚರಿಕೆ, Video!

2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ.

2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ. ದುಬೈನಲ್ಲಿ ನಡೆದ ಸಮಾರಂಭದಲ್ಲಿ ಬೇಕು ಅಂತಲೇ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿಜಿ ಸಿಟ್ಟು ಕೋಪಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಭೀಮಾ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಪ್ರಧಾನಿ ಮೋದಿ ಹೆದರಿದ್ದು, ದೇಶವನ್ನೇ ಮಾರಿದ್ದಾರೆ: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಗಾಂಧಿ ಟೀಕೆ

ಸಿನಿ ಪ್ರಿಯರಿಗೆ ಈ ವಾರ ಭರ್ಜರಿ ಸುದ್ದಿ: 5 ಬಹು ನಿರೀಕ್ಷಿತ ಚಿತ್ರಗಳು OTTಗೆ ಲಗ್ಗೆ, 4 ಸೂಪರ್ ಹಿಟ್!

ಆರು ಕ್ಷೇತ್ರಗಳ ಚುನಾವಣಾ ಉಸ್ತುವಾರಿಗೆ ಅಣ್ಣಾಮಲೈ ರಾಜೀನಾಮೆ; ಕಾರಣವೇನು?

SCROLL FOR NEXT