ದುನಿಯಾ ವಿಜಯ್ 
ಸಿನಿಮಾ ಸುದ್ದಿ

SIIMA 2025: ಕನ್ನಡ ಅಷ್ಟೊಂದು ಕೆಳಮಟ್ಟಕ್ಕೆ ಇಳಿದಿಲ್ಲ; ವೇದಿಕೆಯಲ್ಲೇ ಆಯೋಜಕರಿಗೆ ದುನಿಯಾ ವಿಜಯ್ ಎಚ್ಚರಿಕೆ, Video!

2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ.

2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ. ದುಬೈನಲ್ಲಿ ನಡೆದ ಸಮಾರಂಭದಲ್ಲಿ ಬೇಕು ಅಂತಲೇ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿಜಿ ಸಿಟ್ಟು ಕೋಪಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಭೀಮಾ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!