ಕೊಲ್ಲೂರು ಮೂಕಾಂಬಿಕೆಗೆ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ 
ಸಿನಿಮಾ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ

ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ.

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದರು.

ನನ್ನ ಜೀವನದಲ್ಲಿ ಏನೂ ಇರಲಿಲ್ಲ ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಎಲ್ಲವೂ ದೈವಿಕ ತಾಯಿ ಮೂಕಾಂಬಿಕೆಯ ಕೃಪೆ ಮತ್ತು ಆಶೀರ್ವಾದದಿಂದ ನಡೆದಿದೆ ಎಂದರು. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು. ಇಳಯರಾಜ ಅವರ ಮಗ ಕಾರ್ತಿಕ್ ಇಳಯರಾಜ, ಮೊಮ್ಮಗ ಯತೀಶ್ ಇಳಯರಾಜ ಮತ್ತು ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸೇನೆಗೆ ಭಾರತೀಯ ಪ್ರಜೆಗಳ ಸೇರ್ಪಡೆ: ನೇಮಕಾತಿ ಕೈಬಿಟ್ಟು, ನಮ್ಮ ನಾಗರೀಕರ ಬಿಡುಗಡೆಗೊಳಿಸಿ; ರಷ್ಯಾಗೆ ಭಾರತ ಆಗ್ರಹ

Donald Trump ಆಪ್ತ ಬೆಂಬಲಿಗ ಚಾರ್ಲಿ ಕಿರ್ಕ್ ನ ಗುಂಡಿಕ್ಕಿ ಹತ್ಯೆ: ಅಮೆರಿಕಾ ಅಧ್ಯಕ್ಷ ತೀವ್ರ ಸಂತಾಪ

BJP ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ; ಸಿ.ಟಿ ರವಿ ಭಾಷೆ, ಅವರ ಸಂಸ್ಕೃತಿ ತೋರುತ್ತದೆ: ಡಿ.ಕೆ ಶಿವಕುಮಾರ್; Video

ಹೈದರಾಬಾದ್: ಕುಕ್ಕರ್​​ನಿಂದ ಹೊಡೆದು, ಗಂಟಲು ಸೀಳಿ ಗೃಹಿಣಿ ಹತ್ಯೆ: ಚಿನ್ನಾಭರಣ ದೋಚಿ, ಸ್ನಾನ ಮಾಡಿ ಕಳ್ಳರು ಪರಾರಿ!

ನೇಪಾಳ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ?

SCROLL FOR NEXT