ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ 
ಸಿನಿಮಾ ಸುದ್ದಿ

ಪ್ರಿಯಾಂಕಾ-ಉಪೇಂದ್ರ ಮೊಬೈಲ್ ಹ್ಯಾಕ್: ದುಡ್ಡು ಕೇಳಿದ್ರೆ ಕೊಡಬೇಡಿ; ವಿಡಿಯೋ ಮೂಲಕ ರಿಯಲ್ ಸ್ಟಾರ್ ಮನವಿ

ಪ್ರಿಯಾಂಕಾ ಅವರಿಗೆ ಒಂದು ನಂಬರ್‌ನಿಂದ ಕರೆ ಬಂದಿದೆ. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧಿಸಿದ ಮೆಸೇಜ್ ಇದು ಎಂದು ಅವಳು ಭಾವಿಸಿದ್ದಳು.

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಆಗಿದ್ದು, ಈ ಬಗ್ಗೆ ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ತಮ್ಮ ಹೆಸರು ಹೇಳಿಕೊಂಡು ಯಾರಾದರೂ ದುಡ್ಡು ಕೇಳಿದ್ರೆ ಕೊಡಬೇಡಿ ಎಂದು ಉಪೇಂದ್ರ ಅವರು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಉಪೇಂದ್ರ ಅವರು, ‘ಎಲ್ಲರಿಗೂ ನಮಸ್ಕಾರ.. ದಯವಿಟ್ಟು ಎಲ್ಲರಿಗೂ ಎಚ್ಚರಿಕೆ ಸಂದೇಶ ನೀಡುತ್ತಿದ್ದೇವೆ. ಪ್ರಿಯಾಂಕಾ ಅವರಿಗೆ ಒಂದು ನಂಬರ್‌ನಿಂದ ಕರೆ ಬಂದಿದೆ. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧಿಸಿದ ಮೆಸೇಜ್ ಇದು ಎಂದು ಅವಳು ಭಾವಿಸಿದ್ದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್​ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ.

ಪ್ರಿಯಾಂಕಾ ಹಾಗೂ ನನ್ನ (ಉಪೇಂದ್ರ) ಮೊಬೈಲ್‌ನಿಂದ ಯಾರಾದರೂ ದುಡ್ಡು ಕಳುಹಿಸಿ ಎಂದು ಏನಾದರೂ ಸಂದೇಶ ಬಂದರೆ ದಯವಿಟ್ಟು ಕಳುಹಿಸೋದಕ್ಕೆ ಹೋಗಬೇಡಿ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್​ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ .ಇದರಿಂದ ಅನೇಕರಿಗೆ ಅನುಮಾನ ಬಂದಿದೆ. ಹೀಗಾಗಿ, ‘ಕರೆ ಮಾಡಿ, ನಾವು ಫೋನ್​ನಲ್ಲೇ ಮಾತನಾಡೋಣ’ ಎಂದು ಉತ್ತರಿಸಿದ್ದಾರೆ. ಆದರೆ, ‘ಈಗ ಮಾತನಾಡೋಕೆ ಆಗಲ್ಲ’ ಎಂದು ಹ್ಯಾಕರ್ ಹೇಳಿದ್ದಾನೆ. ಹೀಗಾಗಿ, ಯಾರೂ ಹಣ ಕಳುಹಿಸಿಲ್ಲ, ನಾವು ಈಗಲೇ ಪೊಲೀಸರಿಗೆ ದೂರು ಕೊಡಲು ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ನಡುವೆ ಪ್ರಿಯಾಂಕಾ ಉಪೇಂದ್ರ ಅವರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ‘ಎಲ್ಲರಿಗೂ ನಮಸ್ಕಾರ.. ನನ್ನ ಮೊಬೈಲ್‌ ಹ್ಯಾಕ್‌ ಆಗಿದೆ. ಯಾರೋ ನನ್ನ ಹೆಸರು ಹಾಕಿ ನಿಮಗೆ ಏನಾದರೂ ದುಡ್ಡು ಕಳುಹಿಸಿ ಎಂದರೆ ಯಾರು ಕಳುಹಿಸಬೇಡಿ. ನಾವು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ?, ಕೊಲಂಬೋದಲ್ಲಿ ಶೇ.94ರಷ್ಟು ವರ್ಷಧಾರೆ ಸಾಧ್ಯತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

2026ರ ಮೊದಲ ಸೂರ್ಯಗ್ರಹಣ: ಯಾವಾಗ ಮತ್ತು ಎಲ್ಲಿ ವೀಕ್ಷಿಸಬೇಕು? ಇಲ್ಲಿದೆ ವಿವರ

'37,000 ಕೋಟಿ ರೂ. ಬಾಕಿ ಪಾವತಿ ಮಾಡ್ತೀರೋ ಇಲ್ವೋ?': ರಾಜ್ಯ ಸರ್ಕಾರಕ್ಕೆ ಕರ್ನಾಟಕ ಗುತ್ತಿಗೆದಾರ ಪ್ರತಿಭಟನೆ ಎಚ್ಚರಿಕೆ!

ಬೆಂಗಳೂರಿನ ಡಬಲ್ ಡೆಕ್ಕರ್ ಯೋಜನೆ ಬಗ್ಗೆ ಕೇಂದ್ರ ಕಳವಳ!

SCROLL FOR NEXT