ಉಪೇಂದ್ರ-ಪ್ರಿಯಾಂಕಾ 
ಸಿನಿಮಾ ಸುದ್ದಿ

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್: ವಂಚನೆಗೆ ಸಿಲುಕಿದ ಉಪೇಂದ್ರ ಪುತ್ರ ಕಳೆದುಕೊಂಡ ಹಣವೆಷ್ಟು?

ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ ಲಪಟಾಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ ಲಪಟಾಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ತುರ್ತು ಹಣ ಕಳುಹಿಸುವಂತೆ ಕೇಳಿದ್ದಾರೆ. ಇದನ್ನು ನಂಬಿ ಮೂರರಿಂದ ನಾಲ್ಕು ಮಂದಿ ಹಣ ಕಳುಹಿಸಿದ್ದಾರೆ. ನನ್ನ ಮಗ ಆಯೂಷ್ ಮತ್ತು ಪ್ರಿಯಾಂಕಾಳ ಇಬ್ಬರು ಸ್ನೇಹಿತರು ತಲಾ 55,000 ಸಾವಿರ ರೂಪಾಯಿ ಕಳುಹಿಸಿದ್ದಾರೆ. ನಮಗೆ ಬಂದಿರುವ ಮಾಹಿತಿಯ ಪ್ರಕಾರ ಸುಮಾರು 1.5 ರಿಂದ 2 ಲಕ್ಷ ರೂ. ಹೋಗಿದೆ. ಬೇರೆ ಯಾರಾದರೂ ಹಣ ಕಳುಹಿಸಿದ್ದಾರೆಯೇ ಎಂದು ನಾವು ಪರಿಶೀಲಿಸಬೇಕಾಗಿದೆ ಎಂದು ಉಪೇಂದ್ರ ಹೇಳಿದ್ದಾರೆ. ಹೀಗಾಗಿ ಅಂತಹ ಸಂದೇಶ ಬಂದ ಕೂಡಲೇ ಜನರು ಹಣ ಕಳುಹಿಸಬೇಡಿ. ಈ ಬಗ್ಗೆ ಪೊಲೀಸರಿಗೆ ತಿಳಿಸಬೇಕೆಂದು ಉಪೇಂದ್ರ ವಿನಂತಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದೇವೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ ಉಪೇಂದ್ರ, 'ಎಲ್ಲರಿಗೂ ನಮಸ್ಕಾರ.. ದಯವಿಟ್ಟು ಎಲ್ಲರಿಗೂ ಎಚ್ಚರಿಕೆ ಸಂದೇಶ ನೀಡುತ್ತಿದ್ದೇವೆ. ಪ್ರಿಯಾಂಕಾ ಅವರಿಗೆ ಒಂದು ನಂಬರ್‌ನಿಂದ ಕರೆ ಬಂದಿದೆ. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧಿಸಿದ ಮೆಸೇಜ್ ಇದು ಎಂದು ಅವಳು ಭಾವಿಸಿದ್ದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್​ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ.

ಪ್ರಿಯಾಂಕಾ ಹಾಗೂ ನನ್ನ (ಉಪೇಂದ್ರ) ಮೊಬೈಲ್‌ನಿಂದ ಯಾರಾದರೂ ದುಡ್ಡು ಕಳುಹಿಸಿ ಎಂದು ಏನಾದರೂ ಸಂದೇಶ ಬಂದರೆ ದಯವಿಟ್ಟು ಕಳುಹಿಸೋದಕ್ಕೆ ಹೋಗಬೇಡಿ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್​ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ .ಇದರಿಂದ ಅನೇಕರಿಗೆ ಅನುಮಾನ ಬಂದಿದೆ. ಹೀಗಾಗಿ, ‘ಕರೆ ಮಾಡಿ, ನಾವು ಫೋನ್​ನಲ್ಲೇ ಮಾತನಾಡೋಣ’ ಎಂದು ಉತ್ತರಿಸಿದ್ದಾರೆ. ಆದರೆ, ‘ಈಗ ಮಾತನಾಡೋಕೆ ಆಗಲ್ಲ’ ಎಂದು ಹ್ಯಾಕರ್ ಹೇಳಿದ್ದಾನೆ. ಹೀಗಾಗಿ, ಯಾರೂ ಹಣ ಕಳುಹಿಸಿಲ್ಲ, ನಾವು ಈಗಲೇ ಪೊಲೀಸರಿಗೆ ದೂರು ಕೊಡಲು ಹೋಗುತ್ತಿದ್ದೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿ

BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

'ಜಗತ್ತಿನಲ್ಲಿ ಅಧಿಕಾರದ ಅರ್ಥ ಈಗ ಬದಲಾಗಿದೆ...'; ಅಮೆರಿಕ-ಚೀನಾ ಜೊತೆ ಸಂಬಂಧ ವೃದ್ಧಿ ಮತ್ತಷ್ಟು ಜಟಿಲ: ಜೈಶಂಕರ್

SCROLL FOR NEXT