ಮಾರ್ಕ್ ಚಿತ್ರದ ಪೋಸ್ಟರ್ - ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ನಟ ಕಿಚ್ಚ ಸುದೀಪ್; 'ಮಾರ್ಕ್' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ

2024ರಲ್ಲಿ ಸುದೀಪ್ ಜೊತೆ 'ಮ್ಯಾಕ್ಸ್' ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳಿರುವ ಮಾರ್ಕ್ ಚಿತ್ರಕ್ಕಾಗಿ ಮ್ಯಾಕ್ಸ್ ಚಿತ್ರದ ತಾಂತ್ರಿಕ ತಂಡವೇ ಒಂದಾಗಿದೆ.

ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಡ್ರಾಮಾ 'ಮಾರ್ಕ್' ಬಿಡುಗಡೆಗೆ ಈಗಾಗಲೇ ಅಭಿಮಾನಿಗಳು ಕಾಯುತ್ತಿದ್ದು, ಚಿತ್ರ ಬಿಡುಗಡೆ ಕುರಿತು ಹೊಸ ಅಪ್ಡೇಟ್ ಲಭ್ಯವಾಗಿದೆ. ಡಿಸೆಂಬರ್‌ 25ರಂದು ಮಾರ್ಕ್ ಚಿತ್ರವು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಸಿಕ್ಕಿದೆ.

ಸುದೀಪ್ ಅವರ ಇತ್ತೀಚಿನ ಅಪ್‌ಡೇಟ್‌ನ ಬೆನ್ನಲ್ಲೇ ಈ ಘೋಷಣೆ ಬಂದಿದ್ದು, ಚಿತ್ರದ ಒಂದು ಲಿರಿಕಲ್ ಟ್ರ್ಯಾಕ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. 'ಅಜನೀಶ್ ಲೋಕನಾಥ್ ಅದ್ಭುತವಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ ಮತ್ತು ಶೋಬಿ ಮಾಸ್ಟರ್ ನೃತ್ಯ ಸಂಯೋಜನೆ ಸುಂದರವಾಗಿ ಮಾಡಿದ್ದಾರೆ. ಚಿತ್ರೀಕರಣ ಮಾಡುವಾಗ ನನಗೆ ತುಂಬಾ ಸಂತೋಷವಾಯಿತು. ಹಾಡು ಶೀಘ್ರದಲ್ಲೇ ಬಿಡುಗಡೆಯಾಗಲಿದೆ' ಎಂದು ಸುದೀಪ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳಲ್ಲಿ ಉತ್ಸಾಹ ಕೆರಳಿಸಿದೆ.

2024ರಲ್ಲಿ ಸುದೀಪ್ ಜೊತೆ 'ಮ್ಯಾಕ್ಸ್' ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳಿರುವ ಮಾರ್ಕ್ ಚಿತ್ರಕ್ಕಾಗಿ ಮ್ಯಾಕ್ಸ್ ಚಿತ್ರದ ತಾಂತ್ರಿಕ ತಂಡವೇ ಒಂದಾಗಿದೆ. ಸತ್ಯ ಜ್ಯೋತಿ ಫಿಲ್ಮ್ಸ್ ಬೆಂಬಲಿತ ಈ ಚಿತ್ರವು ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ನಿಶ್ವಿಕಾ ನಾಯ್ಡು ಮತ್ತು ರೋಶನಿ ಪ್ರಕಾಶ್ ಕೂಡ ತಂಡದ ಭಾಗವಾಗಿದ್ದಾರೆ. ಸುದೀಪ್ ಅವರ ಹುಟ್ಟುಹಬ್ಬದಂದು ಬಿಡುಗಡೆಯಾದ ಮೊದಲ ಪೋಸ್ಟರ್ ಭಾರಿ ಕುತೂಹಲ ಮೂಡಿಸಿದ್ದು, ಕ್ರಿಸ್‌ಮಸ್ ಬಿಡುಗಡೆಗಾಗಿ ನಿರೀಕ್ಷೆಗಳು ಹೆಚ್ಚಿವೆ.

ಮಾರ್ಕ್ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ಕಿಚ್ಚ ಸುದೀಪ್ ಸದ್ಯ ಅನೂಪ್ ಭಂಡಾರಿ ಜೊತೆ ಬೃಹತ್ ಪ್ಯಾನ್-ಇಂಡಿಯಾ ಚಿತ್ರ 'ಬಿಲ್ಲಾ ರಂಗ ಭಾಷಾ'ದಲ್ಲಿ ಬ್ಯುಸಿಯಾಗಿದ್ದಾರೆ. ಇದರೊಂದಿಗೆ ತಮ್ಮ ನಿರ್ದೇಶನದ ಯೋಜನೆಯೊಂದಿಗೆ ಮತ್ತೆ ತೆರೆ ಮೇಲೆ ಬರಲು ಎದುರು ನೋಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ತಾಯಿ ಬಗ್ಗೆ ಬಿಹಾರ ಕಾಂಗ್ರೆಸ್​​ ಪೋಸ್ಟ್​​; ವಿಡಿಯೋ ಡಿಲೀಟ್​​ ಮಾಡುವಂತೆ ಪಾಟ್ನಾ ಹೈಕೋರ್ಟ್ ಸೂಚನೆ

ಕಲ್ಯಾಣ ಕರ್ನಾಟಕ ನೀರಾವರಿಗೆ 70,000 ಕೋಟಿ ರೂ.ಗಳ ಅನುದಾನ: ಪ್ರತ್ಯೇಕ ಸಚಿವಾಲಯಕ್ಕೆ ಶೀಘ್ರವೇ ಅಧಿಸೂಚನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಿಂದ ಹೊರಹೋಗಲು BlackBuck ನಿರ್ಧಾರ: ರಾಜ್ಯ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಪೈ, ಶಾ ಆಗ್ರಹ

ಹಣ ವರ್ಗಾವಣೆ, ಅಕ್ರಮ ನಿವೇಶನ ಹಂಚಿಕೆ ಆರೋಪ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ

ಚಳಿಗಾಲ ಆರಂಭಕ್ಕೂ ಮುನ್ನ ವಾಯು ಮಾಲಿನ್ಯ ಯೋಜನೆ ರೂಪಿಸಿ: CAQM, CPCBಗೆ ಸುಪ್ರೀಂ ಗಡುವು

SCROLL FOR NEXT