ರಿಷಬ್ ಶೆಟ್ಟಿ - NTRNeel ಲಾಂಚ್ ಕಾರ್ಯಕ್ರಮ 
ಸಿನಿಮಾ ಸುದ್ದಿ

ಜೂನಿಯರ್ ಎನ್‌ಟಿಆರ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರತಂಡಕ್ಕೆ ರಿಷಬ್ ಶೆಟ್ಟಿ ಸೇರ್ಪಡೆ: ವರದಿ

ಇದು ಸದ್ಯ ಚರ್ಚೆಯ ಹಂತದಲ್ಲಿದೆ ಎಂದು ಹೇಳಲಾಗಿದ್ದರೂ, ತೆಲುಗು ಮತ್ತು ಕನ್ನಡ ಚಿತ್ರರಂಗದ ಅಭಿಮಾನಿಗಳಲ್ಲಿ ಇದು ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಇತ್ತೀಚಿನ ವರದಿಗಳ ಪ್ರಕಾರ, ಜೂನಿಯರ್ ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಅವರ ಮುಂಬರುವ ಆ್ಯಕ್ಷನ್ ಡ್ರಾಮಾ NTRNeel ಗೆ ಹೆಚ್ಚಿನ ಸ್ಟಾರ್ ಪವರ್ ಸೇರ್ಪಡೆಯಾಗುತ್ತಿದೆ. ಚಿತ್ರಕ್ಕೆ ಡ್ರ್ಯಾಗನ್ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ಸಪ್ತ ಸಾಗರದಾಚೆ ಎಲ್ಲೋ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ನಾಯಕಿಯಾಗಿ ಚಿತ್ರತಂಡ ಸೇರಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಹೊಸ ವರದಿಗಳು ಹೊರಬಿದ್ದಿವೆ.

ಇದು ಸದ್ಯ ಚರ್ಚೆಯ ಹಂತದಲ್ಲಿದೆ ಎಂದು ಹೇಳಲಾಗಿದ್ದರೂ, ತೆಲುಗು ಮತ್ತು ಕನ್ನಡ ಚಿತ್ರರಂಗದ ಅಭಿಮಾನಿಗಳಲ್ಲಿ ಇದು ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕಳೆದ ವರ್ಷ ಕರ್ನಾಟಕದ ಪವಿತ್ರ ಸ್ಥಳಗಳಿಗೆ ಭೇಟಿ ನೀಡಿದ್ದಕ್ಕಾಗಿ ರಿಷಬ್ ಮತ್ತು ಜೂನಿಯರ್ ಎನ್‌ಟಿಆರ್ ಇಬ್ಬರೂ ಸ್ನೇಹಿತರಾಗಿದ್ದಾರೆಂದು ತಿಳಿದುಬಂದಿದೆ. ಈ ಸುದ್ದಿಯ ಬಗ್ಗೆ ಅಧಿಕೃತ ದೃಢೀಕರಣ ಬಾಕಿ ಇದೆ. ಅನಿಲ್ ಕಪೂರ್ ಕೂಡ ಈ ಚಿತ್ರದ ಭಾಗವಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿವೆ.

ಜೂನಿಯರ್ ಎನ್‌ಟಿಆರ್ ಮತ್ತು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರ ಸ್ಟಾರ್-ಪವರ್ ಸಂಯೋಜನೆಯಿಂದಾಗಿ ಎನ್‌ಟಿಆರ್‌ನೀಲ್ ಚಿತ್ರವು ಆರಂಭವಾದಾಗಿನಿಂದಲೂ ಚರ್ಚೆಯ ವಿಷಯವಾಗಿದೆ. ಈ ಆಕ್ಷನ್ ಡ್ರಾಮಾ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್, ಎನ್‌ಟಿಆರ್ ಆರ್ಟ್ಸ್ ಸಹಯೋಗದೊಂದಿಗೆ ಬೃಹತ್ ಕ್ಯಾನ್ವಾಸ್‌ನಲ್ಲಿ ನಿರ್ಮಿಸುತ್ತಿದೆ.

ನಿರ್ಮಾಪಕರ ಸಾಲಿನಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿಕೃಷ್ಣ ಕೊಸರಾಜು ಇದ್ದಾರೆ. ತಾಂತ್ರಿಕ ತಂಡದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರ್, ಭುವನ್ ಗೌಡ ಅವರು ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ ಮತ್ತು ನಿರ್ಮಾಣ ವಿನ್ಯಾಸದ ಜವಾಬ್ದಾರಿಯನ್ನು ಚಲಪತಿ ಹೊಂದಿದ್ದಾರೆ.

NTRNeel ಮುಂದಿನ ವರ್ಷ ಜೂನ್ 25 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಈಮಧ್ಯೆ, ರಿಷಬ್ ಶೆಟ್ಟಿ ಅವರ ಬಹುನಿರೀಕ್ಷಿತ ಕಾಂತಾರ: ಚಾಪ್ಟರ್ 1 ಅಕ್ಟೋಬರ್ 2 ರಂದು ಭಾರತದಾದ್ಯಂತ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT