ಸುಹಾನಾ ಸೈಯದ್, ನಿತಿನ್  
ಸಿನಿಮಾ ಸುದ್ದಿ

'ಶ್ರೀಕರನೇ' ಹಾಡು ಹಾಡಿ ಮುಸ್ಲಿಂರ ಕೆಂಗಣ್ಣಿಗೆ ಗುರಿಯಾಗಿದ್ದ ಸುಹಾನಾ ಸೈಯದ್, Hindu ಯುವಕನ ಜೊತೆ ಮದುವೆ!

ಝೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಶ್ರೀಕರನೇ ಶ್ರೀನಿವಾಸನೇ ಎಂದು ಹಾಡಿ ಕಲಾಭಿಮಾನಿಗಳ ಮನಸ್ಸು ಕದ್ದಿದ್ದ ಮುಸ್ಲಿಂ ಯುವತಿ ಸುಹಾನಾ ಸೈಯದ್ ನಂತರ ಮುಸ್ಲಿಂ ಮೌಲ್ವಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

ಝೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಶ್ರೀಕರನೇ ಶ್ರೀನಿವಾಸನೇ ಎಂದು ಹಾಡಿ ಕಲಾಭಿಮಾನಿಗಳ ಮನಸ್ಸು ಕದ್ದಿದ್ದ ಮುಸ್ಲಿಂ ಯುವತಿ ಸುಹಾನಾ ಸೈಯದ್ ನಂತರ ಮುಸ್ಲಿಂ ಮೌಲ್ವಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸುಹಾನಾ ಗಾಯಕಿಯಾಗಿ ವೃತ್ತಿಜೀವನ ಆರಂಭಿಸಿದ್ದರು. ತಮ್ಮ ಬೋಲ್ಡ್ ಲುಕ್ಸ್ ಹಾಗೂ ಡೊಂಟ್ ಕೇರ್ ಸ್ವಭಾವದ ಮೂಲಕ ಅವರು ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಈ ಮಧ್ಯೆ ತಾವು ಮದುವೆಯಾಗುತ್ತಿರುವುದಾಗಿ ಸುಹಾನಾ ಹೇಳಿದ್ದಾರೆ.

ಹೌದು... ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದ ಸುಹಾನಾಗೆ ಹಾಡುಗಾರಿಕೆ ಎಂದರೆ ಎಲ್ಲಿಲ್ಲದ ಪ್ರೀತಿ. ಸಿನಿಮಾರಂಗದಲ್ಲಿ ತೊಡಗಿಸಿಕೊಂಡಿರುವ ಸುಹಾನಾ ಇದೀಗ ಬಹುಕಾಲದ ಗೆಳೆಯನನ್ನು ವರಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಸುಹಾನಾ ಕೈಹಿಡಿಯಲಿರುವವನು ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್. ಪ್ರಸಿದ್ಧ ರಂಗ ತರಬೇತಿ ಕೇಂದ್ರ ನೀನಾಸಂನಲ್ಲಿ ತರಬೇತಿ ಪಡೆದಿರುವ ನಿತಿನ್ ಹಾಗೂ ಸುಹಾನಾ ಕಳೆದ 16 ವರ್ಷಗಳಿಂದ ಪರಸ್ಪರ ಒಡನಾಟ ಇದೀಗ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲು ಪ್ರೇರಕವಾಗಿದೆ. ತಮ್ಮ ಮದುವೆಯ ವಿಚಾರವನ್ನು ಸುಹಾನಾ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ, ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ........ ಪ್ರೇಮಕ್ಕೆ ಯಾವ ಮಿತಿ ಇಲ್ಲ, ಎಂಬುದಕ್ಕೆ ನಾವೇ ಸಾಕ್ಷಿ. ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು.. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ.. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.. ನಿಮ್ಮ ಆಶೀರ್ವಾದವಿರಲಿ ಎಂದು ಸುಹಾನಾ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಸಾಯೋವರೆಗೂ ಜೈಲು!

ಬಿಹಾರ ಚುನಾವಣೆ ಸೋಲಿನ ಬೆನ್ನಲ್ಲೇ 'ಮಹಾಘಟಬಂಧನ್' ಗೆ ತಿಲಾಂಜಲಿ; ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ 'ಮಹಾ' ನಿರ್ಧಾರ!

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ಬಿಹಾರ ಚುನಾವಣೆ: 3 ಲಕ್ಷ ಮತಗಳ ಏರಿಕೆ ಬಗ್ಗೆ ಕಾಂಗ್ರೆಸ್ ನಿಂದ ಮತ್ತೆ ಕಿರಿಕ್; ಚುನಾವಣಾ ಆಯೋಗ ಹೇಳಿದ್ದೇನು?

SCROLL FOR NEXT