ಕಾಂತಾರ: ಚಾಪ್ಟರ್ 1 ಚಿತ್ರದಲ್ಲಿ ರುಕ್ಮಿಣಿ ವಸಂತ್ - ರಿಷಭ್ ಶೆಟ್ಟಿ 
ಸಿನಿಮಾ ಸುದ್ದಿ

ರಿಷಭ್ ಶೆಟ್ಟಿ ನಟನೆಯ ಕಾಂತಾರ: ಚಾಪ್ಟರ್ 1 ಮುಂಗಡ ಬುಕಿಂಗ್‌ ಆರಂಭ; ಎಲ್ಲಿ? ಹೇಗೆ?

ಕರ್ನಾಟಕದಲ್ಲಿ, ಚಲನಚಿತ್ರ ಟಿಕೆಟ್‌ಗಳ ಬೆಲೆಯನ್ನು ₹200 ಕ್ಕೆ ಮಿತಿಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ನಂತರ, ಈ ಚಿತ್ರವು ಈಗಾಗಲೇ ವ್ಯಾಪಕ ಚರ್ಚೆಯ ಭಾಗವಾಗಿದೆ.

ಕಾಂತಾರ: ಚಾಪ್ಟರ್ 1 ಚಿತ್ರದ ಟ್ರೇಲರ್ ರಿಲೀಸ್ ಬಳಿಕ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗಿದ್ದು, ಇಂದಿನಿಂದ ಮುಂಗಡ ಬುಕಿಂಗ್ ಆರಂಭವಾಗಿದೆ. ಹೊಂಬಾಳೆ ಫಿಲ್ಮ್ಸ್ ಬೆಂಬಲದೊಂದಿಗೆ ಮತ್ತು ವಿಜಯ್ ಕಿರಗಂದೂರು ನಿರ್ಮಿಸಿರುವ ಈ ಚಿತ್ರಕ್ಕೆ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟಿಸಿದ್ದಾರೆ. ಈ ಯೋಜನೆ ಘೋಷಣೆಯಾದಾಗಿನಿಂದ, ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಹುಟ್ಟುಹಾಕಿದೆ.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಪ್ರದರ್ಶಿಸುವಲ್ಲಿ ನಿರ್ಮಾಣ ಸಂಸ್ಥೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಿದೆ. ಸೆಪ್ಟೆಂಬರ್ 22 ರಂದು ಬಿಡುಗಡೆಯಾದ ಟ್ರೇಲರ್, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್ 2 ರಂದು ಚಿತ್ರವು ಏಳು ಭಾಷೆಗಳಲ್ಲಿ 7,000ಕ್ಕೂ ಹೆಚ್ಚು ಪರದೆಗಳಲ್ಲಿ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅಕ್ಟೋಬರ್ 1 ರಂದು 2,500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪೇಯ್ಡ್ ಪ್ರೀಮಿಯರ್‌ಗಳನ್ನು ನಿಗದಿಪಡಿಸಲಾಗಿದೆ.

ನಮ್ಮ ಪರಂಪರೆಯ ದರ್ಶನಕ್ಕೆ ಟಿಕೆಟ್ ಬುಕ್ ಮಾಡಿ. ಕಾಯುವಿಕೆ ಕೊನೆಗೊಂಡಿದೆ. ಕರ್ನಾಟಕದಾದ್ಯಂತ ಕಾಂತಾರ: ಚಾಪ್ಟರ್ 1 ಚಿತ್ರಕ್ಕೆ ಅಡ್ವಾನ್ಸ್ ಬುಕಿಂಗ್ ಲಭ್ಯವಿದೆ ಎಂದು ಹೊಂಬಾಳೆ ಫಿಲ್ಮ್ಸ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಮುಂಗಡ ಬುಕಿಂಗ್ ಮಾಡುವವರು ಬುಕ್ ಮೈ ಶೋ ಆ್ಯಪ್ ಮೂಲಕ ಮಾಡಬಹುದು.

ದೇಶಾದ್ಯಂತ ಮತ್ತು ವಿದೇಶಗಳಲ್ಲಿ ವಿತರಕರು ಮುಂದೆ ಬಂದಿದ್ದು, ಎಎ ಫಿಲ್ಮ್ಸ್ ಹಿಂದಿ ಭಾಷೆಯಲ್ಲಿ, ಕೇರಳದಲ್ಲಿ ಪೃಥ್ವಿರಾಜ್ ಪ್ರೊಡಕ್ಷನ್ಸ್, ಆಂಧ್ರ ಮತ್ತು ತೆಲಂಗಾಣದಲ್ಲಿ ಮೈತ್ರಿ ಮೂವಿ ಮೇಕರ್ಸ್ ಮತ್ತು ಗೀತಾ ಆರ್ಟ್ಸ್ ಚಿತ್ರ ವಿತರಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿವೆ. ತಮಿಳುನಾಡು ಮತ್ತು ಅದರಾಚೆಗಿನ ಇತರ ಪ್ರಮುಖ ಬ್ಯಾನರ್‌ಗಳು ಕೈಜೋಡಿಸಿ, ಚಿತ್ರವು ಪ್ರತಿಯೊಂದು ಪ್ರಮುಖ ಮಾರುಕಟ್ಟೆಯನ್ನು ತಲುಪುವಂತೆ ನೋಡಿಕೊಳ್ಳುತ್ತವೆ.

ಕರ್ನಾಟಕದಲ್ಲಿ, ಚಲನಚಿತ್ರ ಟಿಕೆಟ್‌ಗಳ ಬೆಲೆಯನ್ನು ₹200 ಕ್ಕೆ ಮಿತಿಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ನಂತರ, ಈ ಚಿತ್ರವು ಈಗಾಗಲೇ ವ್ಯಾಪಕ ಚರ್ಚೆಯ ಭಾಗವಾಗಿದೆ. ಈಮಧ್ಯೆ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮುಂಗಡ ಬುಕಿಂಗ್‌ಗಳು ಈಗಾಗಲೇ ಬಲವಾದ ಸಂಖ್ಯೆಯನ್ನು ದಾಖಲಿಸಿವೆ.

ರಿಷಬ್ ಶೆಟ್ಟಿ ಬೆರ್ಮೆ ಎಂಬ ಕೇಂದ್ರ ಪಾತ್ರದಲ್ಲಿ ಮರಳಿದರೆ, ರುಕ್ಮಿಣಿ ವಸಂತ್ ಕನಕಾವತಿಯಾಗಿ ಕಾಣಿಸಿಕೊಂಡಿದ್ದಾರೆ. ಗುಲ್ಶನ್ ದೇವಯ್ಯ ಕುಲಶೇಖರ ಪಾತ್ರದಲ್ಲಿ ನಟಿಸಿದ್ದಾರೆ. ಜಯರಾಮ್ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರಮೋದ್ ಶೆಟ್ಟಿ, ರಾಕೇಶ್ ಪೂಜಾರಿ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಾಜೆ ಮತ್ತು ಹರಿಪ್ರಶಾಂತ್ ಎಂಜಿ ಇತರ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಮತ್ತು ಸುರೇಶ್ ಮಲ್ಲಯ್ಯ ಅವರ ಸಂಕಲನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort Blast: ಮೃತರ ಸಂಖ್ಯೆ 12ಕ್ಕೆ ಏರಿಕೆ; ಬಾಂಬ್ ಸ್ಪೋಟಿಸಿದ್ದು ಉಮರ್ ನಬಿ​, DNA ಪರೀಕ್ಷೆಯಲ್ಲಿ ಬಹಿರಂಗ..!

ಕೆಂಪು ಕೋಟೆ ಬಳಿ ಕಾರು ಸ್ಫೋಟ 'ಭಯೋತ್ಪಾದಕ ದಾಳಿ': ಕೇಂದ್ರ ಸರ್ಕಾರ

ಗೃಹ ಸಚಿವ ಪರಮೇಶ್ವರ್ ಬಗ್ಗೆ ನಿಂದನೆ: ಚಿಕ್ಕಮಗಳೂರಿನಲ್ಲಿ ಬಿಜೆಪಿ ಯುವ ಮುಖಂಡ ಬಂಧನ, ಅಷ್ಟಕ್ಕೂ ಸಂತೋಷ್ ಕೊಟ್ಯಾನ್ ಹೇಳಿದ್ದೇನು?

ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ತಂಡಕ್ಕೆ ಹೈಕೋರ್ಟ್ ಶಾಕ್; SIT ತನಿಖೆಗೆ ಅನುಮತಿ!

'BJP, ECಯಿಂದ ಬಹಿರಂಗವಾಗಿಯೇ ಮತಗಳ್ಳತನ': ಒಬ್ಬ ವ್ಯಕ್ತಿಯಿಂದ ಹಲವು ಕಡೆ ಮತದಾನ; ಪೋಸ್ಟ್ ಹಂಚಿಕೊಂಡ ರಾಹುಲ್

SCROLL FOR NEXT