ಪವನ್ ಕಲ್ಯಾಣ್ 
ಸಿನಿಮಾ ಸುದ್ದಿ

ತೆಲುಗು ಪ್ರೇಕ್ಷಕರಿಂದ ಬಹಿಷ್ಕಾರ ಬೆದರಿಕೆ; ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ: ಚಾಪ್ಟರ್ 1'ಗೆ ಪವನ್ ಕಲ್ಯಾಣ್ ಬೆಂಬಲ

ಸಿನಿಮಾ, ಸಂಗೀತ, ಕ್ರೀಡೆ ಮತ್ತು ಸಾಂಸ್ಕೃತಿಕ ಕಲೆಗಳಿಗೆ ಭಾಷೆ, ಪ್ರದೇಶ, ಜಾತಿ ಅಥವಾ ಧರ್ಮದ ಮಿತಿಗಳಿಲ್ಲ. ಎಲ್ಲ ವರ್ಗದ ಜನರನ್ನು ರಂಜಿಸುವುದು ಮತ್ತು ಕನೆಕ್ಟ್ ಆಗುವುದು ಅವುಗಳ ಮೂಲ ಉದ್ದೇಶವಾಗಿದೆ.

ನವದೆಹಲಿ: ಸೆಪ್ಟೆಂಬರ್ 25 ರಂದು ಬಿಡುಗಡೆಯಾದ ಪವನ್ ಕಲ್ಯಾಣ್ ಅವರ 'ದೆ ಕಾಲ್ ಹಿಮ್ ಒಜಿ' ಚಿತ್ರವು ಕರ್ನಾಟಕದಲ್ಲಿ ಟಿಕೆಟ್ ಬೆಲೆ ಏರಿಕೆ ಮತ್ತು ಒಂದು ನಿರ್ದಿಷ್ಟ ಗುಂಪಿನ ಜನರಿಂದ ವಿರೋಧ ಎದುರಿಸಿತು. ಇದಕ್ಕೆ ಪ್ರತಿಯಾಗಿ, ತೆಲುಗು ಪ್ರೇಕ್ಷಕರು ಆಂಧ್ರ ಪ್ರದೇಶದಲ್ಲಿ ಕನ್ನಡ ಚಿತ್ರ ರಿಷಬ್ ಶೆಟ್ಟಿ ಅವರ 'ಕಾಂತಾರ: ಚಾಪ್ಟರ್ 1' ಅನ್ನು ವಿರೋಧಿಸುತ್ತಿದ್ದಾರೆ. ಆದಾಗ್ಯೂ, ತೆಲುಗು ಸೂಪರ್‌ಸ್ಟಾರ್ ಪವನ್ ಕಲ್ಯಾಣ್, ಸೇಡಿನ ಹಾದಿಯಲ್ಲಿ ನಡೆಯಲು ಬಯಸುವುದಿಲ್ಲ ಎಂದಿದ್ದಾರೆ.

'ಸಿನಿಮಾ, ಸಂಗೀತ, ಕ್ರೀಡೆ ಮತ್ತು ಸಾಂಸ್ಕೃತಿಕ ಕಲೆಗಳಿಗೆ ಭಾಷೆ, ಪ್ರದೇಶ, ಜಾತಿ ಅಥವಾ ಧರ್ಮದ ಮಿತಿಗಳಿಲ್ಲ. ಎಲ್ಲ ವರ್ಗದ ಜನರನ್ನು ರಂಜಿಸುವುದು ಮತ್ತು ಕನೆಕ್ಟ್ ಆಗುವುದು ಅವುಗಳ ಮೂಲ ಉದ್ದೇಶವಾಗಿದೆ. ವೈಯಕ್ತಿಕ ಹಿತಾಸಕ್ತಿಗಳಿಂದ ಕೆಲವು ವ್ಯಕ್ತಿಗಳು ಕರ್ನಾಟಕದಾದ್ಯಂತ ಚಿತ್ರಮಂದಿರಗಳಲ್ಲಿ OG ಪ್ರದರ್ಶನ ತಡೆಯಲು ಪ್ರಯತ್ನಿಸಿರುವುದು ದುರದೃಷ್ಟಕರ. ಈ ಹಿಂದೆಯೂ ಕೆಲವು ತೆಲುಗು ಚಿತ್ರಗಳು ಇದೇ ರೀತಿಯ ಅಡೆತಡೆಗಳನ್ನು ಎದುರಿಸಿದ್ದವು. ಇದಕ್ಕೆ ಪ್ರತಿಕ್ರಿಯೆಯಾಗಿ, ಕಾಂತಾರ ಚಿತ್ರವನ್ನು ನಮ್ಮ ತೆಲುಗು ರಾಜ್ಯಗಳಲ್ಲಿ ನಿರ್ಬಂಧಿಸಬೇಕು ಎಂದು ಕೆಲವರು ಹೇಳುತ್ತಿದ್ದಾರೆ. ನಾನು ಈ ಚಿಂತನೆಯನ್ನು ಬೆಂಬಲಿಸುವುದಿಲ್ಲ' ಎಂದು ಹೇಳಿದರು.

'ಕಲೆ ಮತ್ತು ಸಿನಿಮಾ ಸಂತೋಷವನ್ನು ಹರಡಬೇಕು, ಸಂಸ್ಕೃತಿಗಳನ್ನು ಸೇತುವೆ ಮಾಡಬೇಕು ಮತ್ತು ಜನರನ್ನು ಬೇರ್ಪಡಿಸಬಾರದು, ಒಟ್ಟಿಗೆ ತರಬೇಕು. ಪ್ರತಿಯೊಬ್ಬ ವ್ಯಕ್ತಿಗೂ ತಾವು ಇಷ್ಟಪಡುವ ಸಿನಿಮಾ ನೋಡುವ ಹಕ್ಕಿದೆ. ನಿಮಗೆ ಒಂದು ಸಿನಿಮಾ ಇಷ್ಟವಾಗದಿದ್ದರೆ, ನೀವು ಅದನ್ನು ನೋಡದಿರಲು ಆಯ್ಕೆ ಮಾಡಬಹುದು. ಆದರೆ, ವೈಯಕ್ತಿಕ ದ್ವೇಷ ಅಥವಾ ಅಜೆಂಡಾಗಳನ್ನು ಬಳಸಿಕೊಂಡು ಸಿನಿಮಾಗಳನ್ನು ಗುರಿಯಾಗಿಸಿಕೊಳ್ಳುವುದು ಸ್ವೀಕಾರಾರ್ಹವಲ್ಲ. ಇಂದು, ಭಾರತೀಯ ಸಿನಿಮಾವನ್ನು ಪ್ರಪಂಚದಾದ್ಯಂತ ಎಲ್ಲ ಭಾಷೆಗಳಲ್ಲಿ ಆಚರಿಸಲಾಗುತ್ತಿದೆ. ಇಂತಹ ಸಮಯದಲ್ಲಿ, ಕಲೆಯನ್ನು ಪ್ರಾದೇಶಿಕ ಮಿತಿಯೊಳಗೆ ಸೀಮಿತಗೊಳಿಸುವ ಯಾವುದೇ ಪ್ರಯತ್ನವನ್ನು ಬಲವಾಗಿ ತಿರಸ್ಕರಿಸಬೇಕು. ಒಳ್ಳೆಯ ಸಿನಿಮಾಗಳು ಎಲ್ಲಿಂದ ಬಂದರೂ, ಅವುಗಳನ್ನು ಬೆಂಬಲಿಸೋಣ' ಎಂದು ಪವನ್ ಕಲ್ಯಾಣ್ ಹೇಳಿದರು.

ಬೆಂಗಳೂರಿನಲ್ಲಿ OG ಚಿತ್ರಕ್ಕೆ ಅಡೆತಡೆ

ಬೆಂಗಳೂರು ಪವನ್ ಕಲ್ಯಾಣ್ ಅಭಿಮಾನಿಗಳ ಸಂಘವು ಬಹುನಿರೀಕ್ಷಿತ ಒಜಿ ಚಿತ್ರದ ಆರಂಭಿಕ ಬಿಡುಗಡೆಯನ್ನು ಆಚರಿಸಲು ಮಡಿವಾಳದ ಸಂಧ್ಯಾ ಥಿಯೇಟರ್ ಹೊರಗೆ ವೇದಿಕೆ ಮತ್ತು ಡಿಜೆ ವ್ಯವಸ್ಥೆಯನ್ನು ಏರ್ಪಡಿಸಿತ್ತು.

ಮೂಲಗಳ ಪ್ರಕಾರ, ಸಾರ್ವಜನಿಕ ಕಾರ್ಯಕ್ರಮಕ್ಕೆ ಅನುಮತಿ ಪಡೆದಿಲ್ಲ ಎಂದು ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಿದರು. ವೇದಿಕೆಯನ್ನು ತೆರವುಗೊಳಿಸಿದರು ಮತ್ತು ಯಾವುದೇ ಅಡಚಣೆಯಾಗದಂತೆ ಧ್ವನಿವರ್ಧಕಗಳನ್ನು ಸಹ ವಶಪಡಿಸಿಕೊಂಡರು.

ಘಟನೆ ನಂತರ ಮಡಿವಾಳ ಪೊಲೀಸರು ಕಾರ್ಯಕ್ರಮದ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಪವನ್ ಕಲ್ಯಾಣ್ ಅಭಿಮಾನಿಗಳು ಕರ್ನಾಟಕದ ಹಲವು ಭಾಗಗಳಲ್ಲಿ ಬೀದಿಗಳಲ್ಲಿ ಜಮಾಯಿಸಿ ಡಿಜೆಗಳು, ನೃತ್ಯಗಳು ಮತ್ತು ಪಟಾಕಿಗಳೊಂದಿಗೆ ಆಚರಿಸಿದರು. ಪ್ರತಿಭಟನಾಕಾರರು ಸ್ಥಳಕ್ಕೆ ಪ್ರವೇಶಿಸಿ, ಧ್ವನಿ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಿ, ಡಿಜೆ ಉಪಕರಣಗಳು ಮತ್ತು ಕ್ಯಾಮೆರಾ ಟ್ರೈಪಾಡ್‌ಗಳನ್ನು ಮುರಿದು ಹಾಕಿದ್ದು ಕಂಡುಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!