ಪ್ರಕಾಶ್ ರಾಜ್ 
ಸಿನಿಮಾ ಸುದ್ದಿ

'ಧರ್ಮವನ್ನು ಮತೋನ್ಮಾಧದೊಂದಿಗೆ ಇರಿಸಿಕೊಂಡು ಅಸಹ್ಯಕರ ರಾಜಕೀಯ ಮಾಡುತ್ತಿರುವವರು ನನ್ನನ್ನು ಹಿಂದೂ ವಿರೋಧಿಯೆಂದು ಬಿಂಬಿಸುತ್ತಿದ್ದಾರೆ'

ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟ್ಟರ್​​ನಲ್ಲಿ ವಿಡಿಯೋ ಅಪ್​​ಲೋಡ್ ಮಾಡಿರುವ ಪ್ರಕಾಶ್ ರಾಜ್ ಉತ್ತರ ನೀಡಿದ್ದಾರೆ.

ಇತ್ತೀಚೆಗಷ್ಟೆ ನಟ ಪ್ರಕಾಶ್ ರಾಜ್ ಅವರು ರಾಮಾಯಣದ ಬಗ್ಗೆ ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ನಟ ಪ್ರಕಾಶ್ ರಾಜ್ ಅವರು ರಾಮನಿಗೆ, ರಾಮಾಯಣಕ್ಕೆ ಅವಮಾನ ಆಗುವಂತೆ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದರು.

ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟ್ಟರ್​​ನಲ್ಲಿ ವಿಡಿಯೋ ಅಪ್​​ಲೋಡ್ ಮಾಡಿರುವ ಪ್ರಕಾಶ್ ರಾಜ್ ಉತ್ತರ ನೀಡಿದ್ದಾರೆ.

ಒಂದು ಸಾಹಿತ್ಯೋತ್ಸವದಲ್ಲಿ ‘ಕಲೆ ಮತ್ತು ಅದರ ಸ್ಥಿರತೆ’ ಎಂಬ ಗೋಷ್ಠಿಯಲ್ಲಿ ನಾನು ಸಂವಾದದಲ್ಲಿ ಭಾಗವಹಿಸಿದ್ದೆ. ಅದರಿಂದ ಕೆಲವು ಮಾತುಗಳನ್ನಷ್ಟೆ ತೆಗೆದುಕೊಂಡು ಅದನ್ನು ತಿರುಚಿ ನಾನು ಅವತಾರ ಪುರುಷ ಶ್ರೀರಾಮನ ವ್ಯಂಗ್ಯ ಮಾಡಿದ್ದೇನೆ. ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತಂದಿದ್ದೇನೆ ಎನ್ನುತ್ತಿದ್ದಾರೆ. ಎಲ್ಲ ಧರ್ಮಗಳನ್ನೂ ಪ್ರೀತಿಸುವ ನನಗೆ ಯಾರನ್ನು ನೋವಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಆದರೆ, ಧರ್ಮವನ್ನು ಮತೋನ್ಮಾಧದೊಂದಿಗೆ ಇರಿಸಿಕೊಂಡು ಅಸಹ್ಯರೀತಿಯ ರಾಜಕೀಯ ಮಾಡುತ್ತಾ ಇರುವವರು ನಾನು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ, ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಈ ರೀತಿ ಎಲ್ಲ ಮಾಡುತ್ತಿದ್ದಾರೆ. ಪಾಪ ಅವರ ಕಷ್ಟ, ಅವರ ನೋವು ನನಗೆ ಅರ್ಥವಾಗುತ್ತದೆ.

ಜೊತೆಗೆ ಧರ್ಮವನ್ನು ಮಧ್ಯದಲ್ಲಿ ಇಟ್ಟುಕೊಂಡು ಕೆಟ್ಟ ರಾಜಕೀಯ ಮಾಡುತ್ತಾ ಇರುವವರು ನಾನು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ, ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಪ್ರಯತ್ನ ಪಡುತ್ತಿದ್ದಾರೆ. ಪಾಪ ಅವರ ಕಷ್ಟ, ಅವರ ನೋವು ನನಗೆ ಅರ್ಥವಾಗುತ್ತದೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ

ಹಾಗೆಯೇ ನಾನು ಸ್ವಲ್ಪ ತೋಟದ ಕೆಲಸದಲ್ಲಿದ್ದೇನೆ . ಬೇಸಿಗೆ ಕಳೆದುಹೋಗುತ್ತಿದೆ , ಮಳೆಗಾಲ ಬರುತ್ತಿದೆ. ಅಷ್ಟರಲ್ಲಿ ನಾನು ಕೆಲಸ ಮುಗಿಸಬೇಕು, ಅದೆಲ್ಲ ಮುಗಿಸಿ ಬರುವೆ, ಅಲ್ಲಿಯವರೆಗೂ ನಿಮ್ಮ ಕೆಲಸದಲ್ಲಿ ನೀವಿರುತ್ತೀರಾ? ಅಥವಾ ಇದೇ ಇದೇ ರೀತಿ ತಂಟೆ-ತರಲೆ ಮಾಡ್ತಾ ಇರ್ತೀರ ಅದು ನಿಮಗೆ ಬಿಟ್ಟಿದ್ದು ಎಂದು ಪ್ರಕಾಶ್ ರಾಜ್ ಉತ್ತರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ತೀರಿಸಿಕೊಳ್ಳುತ್ತೇವೆಂದ ಟೆಹ್ರಾನ್, ಸಂಘರ್ಷ ಮತ್ತೆ ಉಲ್ಬಣ

ಹೊರ್ಮುಸ್, ಹಣದುಬ್ಬರ, ಮತ್ತು ಚುನಾವಣೆಗಳು: ಸಮಸ್ಯೆಯ ಸುಳಿಯಲ್ಲಿ ಟ್ರಂಪ್ (ಜಾಗತಿಕ ಜಗಲಿ)

ಅಮೆರಿಕದ ಅತಿಯಾದ ಬೇಡಿಕೆ-ದ್ವಂದ್ವ ನೀತಿ ವಿರುದ್ಧ ಇರಾನ್ ಗರಂ: 2ನೇ ಹಂತದ ಶಾಂತಿ ಮಾತುಕತೆಗೆ ನಕಾರ, ಸಂಘರ್ಷ ಉಲ್ಬಣ ಸಾಧ್ಯತೆ

ಹಡಗು ವಶಕ್ಕೆ ಪ್ರತೀಕಾರ: ಅಮೆರಿಕಾ ನೌಕಾಪಡೆ ಮೇಲೆ ಇರಾನ್ ಡ್ರೋನ್ ದಾಳಿ, ಸಂಘರ್ಷ ಉಲ್ಬಣ

ಶಾಸಕ ಸತೀಶ್ ಸೈಲ್ ಪುತ್ರಿಗೆ 'ಮಿಸ್ ಇಂಡಿಯಾ' ಕಿರೀಟ!

SCROLL FOR NEXT