ಚೇತನ್ ಅಹಿಂಸಾ 
ಸಿನಿಮಾ ಸುದ್ದಿ

ರಾಜ್‌ಕುಮಾರ್ ಸ್ಮಾರಕಕ್ಕೆ 2.5 ಎಕರೆ ಸರ್ಕಾರಿ ಜಾಗ ಯಾಕೆ?: ನಟ ಚೇತನ್ ಅಹಿಂಸಾ

ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವರನಟ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ಜಾಗದ ಪ್ರಶ್ನೆ ಎತ್ತಿದ್ದು ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಹೃದಯಭಾಗದಲ್ಲಿ ಸ್ಮಾರಕಕ್ಕೆ ನೀಡಿರುವ ಜಾಗದ ಬಗ್ಗೆ ಚೇತನ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವರನಟ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ಜಾಗದ ಪ್ರಶ್ನೆ ಎತ್ತಿದ್ದು ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಹೃದಯಭಾಗದಲ್ಲಿ ಸ್ಮಾರಕಕ್ಕೆ ನೀಡಿರುವ ಜಾಗದ ಬಗ್ಗೆ ಚೇತನ್ ಟ್ವೀಟ್ ಮಾಡಿದ್ದಾರೆ.

ನಾವು ರಾಜ್‌ಕುಮಾರ್ ಅವರನ್ನು ಒಬ್ಬ ಶ್ರೇಷ್ಠ ಕಲಾವಿದ ಎಂದು ಗೌರವಿಸುತ್ತೇವೆ. ಆದರೆ, 2006ರಲ್ಲಿ ಬೆಂಗಳೂರಿನ ಕೇಂದ್ರ ಭಾಗದಲ್ಲಿ ಈ ನಟನ ಸ್ಮಾರಕ ಸಂಕೀರ್ಣಕ್ಕಾಗಿ 2.5 ಎಕರೆ ಭೂಮಿಯನ್ನು ನೀಡಿದ್ದು ಎಷ್ಟು ಸಮಂಜಸ? ಸರ್ಕಾರವು ಭೂಮಿಯನ್ನು ಮಂಜೂರು ಮಾಡುವಾಗ ಮತಗಳ ಮೇಲೆ ಕಣ್ಣಿಡುವ ಬದಲು, ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆಯನ್ನು ಗಮನಿಸಬೇಕು. 21ನೇ ಶತಮಾನದ ಭಾರತದಲ್ಲಿ ಭೂಮಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ ಎಂದು ಟ್ವೀಟ್ ಮಾಡಿದ್ದರು.

ಕೇವಲ ಮತ ಬ್ಯಾಂಕ್‌ಗಾಗಿ ಸರ್ಕಾರಗಳು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ ಎಂಬ ಚೇತನ್ ಅವರ ಪರೋಕ್ಷ ಟೀಕೆ ಈಗ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಇನ್ನು ಕೆಲವರು ರಾಜ್​ಕುಮಾರ್ ಅವರು ಕನ್ನಡ ಭಾಷೆಗೆ, ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಚೇತನ್ ಅಹಿಂಸಗೆ ನೆನಪು ಮಾಡುವ ಪ್ರಯತ್ನ ಮಾಡಿದ್ದಾರೆ. ಇನ್ನು ಕೆಲವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇನ್ನಿತರರ ಸಮಾಧಿ ಸ್ಥಳಗಳ ಉಲ್ಲೇಖವನ್ನು ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ವಿಜಯಪುರದಲ್ಲಿ ಥಾರ್​​ಗೆ ಟ್ರಕ್ ಡಿಕ್ಕಿ ಹೊಡೆಸಿ ಹತ್ಯೆ: ಸಿನಿಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಪೊಲೀಸರು; ಆರು ಜನರ ಬಂಧನ

ರಾಘವ್ ಚಡ್ಡಾ ಬಿಜೆಪಿಯ 'ಟೂಲ್'; ಪಕ್ಷ ಒಡೆಯಲು ಯತ್ನ: ಎಎಪಿ

ಸಂಸತ್ ನಲ್ಲಿ ನಿರ್ಬಂಧಿಸಿದ್ದ AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ; ಸರ್ಕಾರಕ್ಕೆ ಮತ್ತಷ್ಟು ಬಲ! Video

CET ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಮೂವರು ಸಿಬ್ಬಂದಿ ಅಮಾನತು; ತನಿಖೆಗೆ ಆದೇಶ

SCROLL FOR NEXT