ರಜತ್ 
ಸಿನಿಮಾ ಸುದ್ದಿ

ಪೆಟ್ರೋಲ್ ಬಾಂಬ್ ರೀಲ್ಸ್: Biggboss ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು!

‘Biggboss’ ಖ್ಯಾತಿಯ ರಜತ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು ಸಾರ್ವಜನಿಕ ರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಮಾದರಿಯ ಭೀಕರ ಸ್ಫೋಟ ನಡೆಸಿ ರೀಲ್ಸ್ ಮಾಡಿದ್ದು ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

‘Biggboss’ ಖ್ಯಾತಿಯ ರಜತ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು ಸಾರ್ವಜನಿಕ ರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಮಾದರಿಯ ಭೀಕರ ಸ್ಫೋಟ ನಡೆಸಿ ರೀಲ್ಸ್ ಮಾಡಿದ್ದು ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಈ ಹಿಂದೆ ಬಾಯ್ಸ್ ವರ್ಸಸ್ ಗರ್ಲ್ಸ್ ಶೋ ಶೂಟಿಂಗ್ ಮಧ್ಯೆ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ರಜತ್ ಹಾಗೂ ವಿನಯ್ ವಿರುದ್ಧ ಕೇಸ್‌ ದಾಖಲಾಗಿದ್ದು ಇಬ್ಬರೂ ಪರಪ್ಪನ ಅಗ್ರಹಾರ ಜೈಲು ದರ್ಶನ ಮಾಡಿ ಬಂದಿದ್ದರು. ಇದಾದ ಬಳಿಕ ಮೈಸೂರಿನ ಪಾರಂಪರಿಕ ಕಟ್ಟಡದ ಮುಂದೆ ಫೋಟೋಶೂಟ್ ಮಾಡಿಸಿ ರಜತ್ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಮತ್ತೊಂದು ಅದೇ ರೀತಿಯ ಎಡವಟ್ಟು ಮಾಡಿಕೊಂಡಿದ್ದಾರೆ.

ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್‌ನ ರಜತ್ ಶೇರ್‌ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ ಎಂದು ರಜತ್ ಬರೆದುಕೊಂಡಿದ್ದರು.

ಜೊತೆಗೆ, ಈ ಕಂಟೆಂಟ್ ಕ್ರಿಯೇಟ್ ಮಾಡಿರೋದು ಚಿತ್ರೀಕರಣದ ಸಲುವಾಗಿ ಮಾತ್ರ. ಎಲ್ಲಾ ಅವಶ್ಯಕ ಸುರಕ್ಷತಾ ಕ್ರಮಗಳನ್ನ ಕೈಗೊಂಡು, ಪರಿಣತಿ ಹೊಂದಿರುವ ತಜ್ಞರಿಂದ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಈ ಚಿತ್ರೀಕರಣ ಮಾಡಿದ್ದೇವೆ. ಇದನ್ನ ಅನುಕರಿಸಬೇಡಿ. ಇದನ್ನ ಮರುಸೃಷ್ಟಿಸಬೇಡಿ. ಬೆಂಕಿ ಅಪಾಯಕಾರಿ. ಚಿತ್ರೀಕರಣದ ವೇಳೆ ಹೆಲ್ಮೆಟ್ ಧರಿಸಿಲ್ಲ. ಇದು ಅಸುರಕ್ಷಿತ. ರಸ್ತೆ ಸುರಕ್ಷತಾ ಕ್ರಮಗಳನ್ನ ಪಾಲಿಸಿ. ವಾಹನ ಚಲಾಯಿಸುವಾಗ ತಪ್ಪದೆ ಹೆಲ್ಮೆಟ್ ಧರಿಸಿ. ಧೂಮಪಾನ ಆರೋಗ್ಯಕ್ಕೆ ಹಾನಿಕರ. ಈ ವಿಡಿಯೋ ಧೂಮಪಾನವನ್ನ ಪ್ರಮೋಟ್ ಮಾಡುವುದಿಲ್ಲ ಎಂಬ ಡಿಸ್‌ಕ್ಲೈಮರ್‌ನ ತಮ್ಮ ರೀಲ್ಸ್‌ ಜೊತೆಗೆ ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಎಫ್‌ಡಿಐ ಸೆಳೆಯುವಲ್ಲಿ ಕೇರಳ ಹಿನ್ನಡೆ: ದಕ್ಷಿಣದ ಇತರೆ ರಾಜ್ಯಗಳು ದಾಪುಗಾಲು, ರಾಷ್ಟ್ರೀಯ ಪಾಲು ಶೇ. 1ಕ್ಕಿಂತ ಕಡಿಮೆ

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!