ಸುದೀಪ್ ಹೊಸ ಲುಕ್. 
ಸಿನಿಮಾ ಸುದ್ದಿ

'ಮತ್ತೆ ಶುರು ಮಾಡೋಣವಾ...': BBK13 ಮೊದಲ ಪ್ರೋಮೊ ರಿಲೀಸ್‌; ಕಿಚ್ಚ ಸುದೀಪ್‌ ಡೈಲಾಗ್‌ಗೆ ಅಭಿಮಾನಿಗಳು ಫಿದಾ..!

ಅದ್ದೂರಿಯಾಗಿ ಮೂಡಿಬಂದಿರುವ ಈ ಪ್ರೋಮೊದಲ್ಲಿ, ಕಪ್ಪು ಬಣ್ಣದ ಔಟ್‌ಫಿಟ್‌ ಹಾಗೂ ಕೂಲಿಂಗ್‌ ಗ್ಲಾಸ್‌ನಲ್ಲಿ ಕಂಗೊಳಿಸಿರುವ ಕಿಚ್ಚ ಸುದೀಪ್‌ ನೂರಾರು ಅಭಿಮಾನಿಗಳ ನಡುವೆ ಗ್ರ್ಯಾಂಡ್‌ ಎಂಟ್ರಿ ನೀಡುತ್ತಾರೆ.

ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್‌ಬಾಸ್‌ ಕನ್ನಡ ಸೀಸನ್‌ 13' ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಸಾರ ಆರಂಭವಾಗಲಿರುವ ಈ ಬಹುನಿರೀಕ್ಷಿತ ಕಾರ್ಯಕ್ರಮದ ಮೊದಲ ಪ್ರೋಮೊ ಬಿಡುಗಡೆಯಾಗಿದ್ದು, ಕಿಚ್ಚ ಸುದೀಪ್‌ ಅವರ ಸ್ಟೈಲಿಶ್ ಎಂಟ್ರಿ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಕಲರ್ಸ್‌ ಕನ್ನಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ (ಆಗಸ್ಟ್‌ 2) ಮೊದಲ ಪ್ರೋಮೊ ಬಿಡುಗಡೆ ಮಾಡಿದೆ.

ಅದ್ದೂರಿಯಾಗಿ ಮೂಡಿಬಂದಿರುವ ಈ ಪ್ರೋಮೊದಲ್ಲಿ, ಕಪ್ಪು ಬಣ್ಣದ ಔಟ್‌ಫಿಟ್‌ ಹಾಗೂ ಕೂಲಿಂಗ್‌ ಗ್ಲಾಸ್‌ನಲ್ಲಿ ಕಂಗೊಳಿಸಿರುವ ಕಿಚ್ಚ ಸುದೀಪ್‌ ನೂರಾರು ಅಭಿಮಾನಿಗಳ ನಡುವೆ ಗ್ರ್ಯಾಂಡ್‌ ಎಂಟ್ರಿ ನೀಡುತ್ತಾರೆ.

ಪ್ರೋಮೊದಲ್ಲಿ ಮಾತನಾಡಿರುವ ಸುದೀಪ್‌, "ಕರ್ನಾಟಕದ ಜನ ಯಾರಿಗೂ ಕಾಯುವುದು ಇತಿಹಾಸದಲ್ಲೇ ಇಲ್ಲ. ಆದರೆ, ವರ್ಷಕ್ಕೊಮ್ಮೆ ಮಾತ್ರ ಕಾಯುತ್ತಾರೆ..." ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸುತ್ತಾರೆ.

ಬಳಿಕ "ಒಂದು ಮನೆ... ಒಂದು ಅವಕಾಶ... ಕೋಟಿ ಕನಸುಗಳು... ಮತ್ತೆ ಶುರು ಮಾಡೋಣವಾ?" ಎಂಬ ಡೈಲಾಗ್‌ ಮೂಲಕ ಬಿಗ್‌ಬಾಸ್‌ ಹೊಸ ಸೀಸನ್‌ಗೆ ಅದ್ಧೂರಿ ಚಾಲನೆ ನೀಡುವ ಸುಳಿವು ನೀಡಿದ್ದಾರೆ.

ಪ್ರೋಮೊ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ಈ ಬಾರಿ ಬಿಗ್‌ಬಾಸ್‌ ಮನೆಗೆ ಯಾರು ಯಾರು ಸ್ಪರ್ಧಿಗಳಾಗಿ ಪ್ರವೇಶಿಸಲಿದ್ದಾರೆ ಎಂಬ ಚರ್ಚೆ ಜೋರಾಗಿದೆ.

ಸಿನಿಮಾ ನಟ-ನಟಿಯರು, ಕಿರುತೆರೆ ಕಲಾವಿದರು, ಕ್ರೀಡಾಪಟುಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಪಡೆದ ಹಲವರ ಹೆಸರುಗಳು ಈಗಾಗಲೇ ಹರಿದಾಡುತ್ತಿವೆ. ಆದರೆ, ಸ್ಪರ್ಧಿಗಳ ಅಧಿಕೃತ ಪಟ್ಟಿಯನ್ನು ವಾಹಿನಿ ಇನ್ನೂ ಬಹಿರಂಗಪಡಿಸಿಲ್ಲ.

ಈ ಬಾರಿಯ ಸೀಸನ್‌ನ ಪ್ರಮುಖ ವಿಶೇಷವೆಂದರೆ ಸಾಮಾನ್ಯ ಜನರಿಗೂ ಬಿಗ್‌ಬಾಸ್‌ ಮನೆ ಪ್ರವೇಶಿಸುವ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಈ ಸೀಸನ್‌ ಇನ್ನಷ್ಟು ಕುತೂಹಲ ಮೂಡಿಸಿದ್ದು, ಅಂತಿಮವಾಗಿ ಯಾರೆಲ್ಲಾ ಬಿಗ್‌ಬಾಸ್‌ ಮನೆಯೊಳಗೆ ಪ್ರವೇಶಿಸಲಿದ್ದಾರೆ ಎಂಬುದು ಕಾರ್ಯಕ್ರಮದ ಮೊದಲ ಸಂಚಿಕೆಯಲ್ಲಿ ಅಧಿಕೃತವಾಗಿ ತಿಳಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

ಆಂತರಿಕ ಅಸಮಾಧಾನ: ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ CM ಸಿಎಂ ಸಿದ್ದರಾಮಯ್ಯ ಗೈರಾಗಿದ್ದೇಕೆ?

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...