ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ 
ಸಿನಿಮಾ ಸುದ್ದಿ

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

ಟ್ರೈಲರ್ ವೀಕ್ಷಿಸಿದ ನಂತರ ಸಿದ್ಧಾರ್ಥ್, ಕಿಯಾರಾ ಅವರಿಗೆ ವಿಶೇಷ ಸಂದೇಶವನ್ನು ಬರೆದಿದ್ದು, ಅವರ ಅಭಿನಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾಗಾಗಿ ಕಿಯಾರಾ ಹಾಕಿರುವ ಶ್ರಮ ಮತ್ತು ಅವರಲ್ಲಿರುವ ಉತ್ಸಾಹವನ್ನು ಪ್ರೇಕ್ಷಕರು ಕಾಣಲಿದ್ದಾರೆ ಎಂದೂ ಅವರು ಸುಳಿವು ನೀಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿರುವ ತಬಾಹಿ ಹಾಡು ಸಿನಿ ಜಗತ್ತಿನಾದ್ಯಂತ ಸುದ್ದಿಯಾಗಿದೆ. ಇವರಿಬ್ಬರ ಬೋಲ್ಡ್ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

ಈ ನಡುವೆ ಟಾಕ್ಸಿಕ್ ಟ್ರೈಲರ್ ಗೆ ಕಿಯಾರಾ ಅಡ್ವಾಣಿ ಅವರ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಫಿದಾ ಆಗಿದ್ದು, ಯಶ್ ಹಾಗೂ ಕಿಯಾರಾ ಅಡ್ವಾಣಿ ಅವರ ಬೋಲ್ಡ್ ಅವತಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಚಿತ್ರಕ್ಕಾಗಿ ಕಿಯಾರಾ ಪಟ್ಟ ಶ್ರಮ ಮತ್ತು ಅವರ ಬದ್ಧತೆಯನ್ನು ಶ್ಲಾಘಿಸುತ್ತಾ, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ಟ್ರೈಲರ್ ವೀಕ್ಷಿಸಿದ ನಂತರ ಸಿದ್ಧಾರ್ಥ್, ಕಿಯಾರಾ ಅವರಿಗೆ ವಿಶೇಷ ಸಂದೇಶವನ್ನು ಬರೆದಿದ್ದು, ಅವರ ಅಭಿನಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾಗಾಗಿ ಕಿಯಾರಾ ಹಾಕಿರುವ ಶ್ರಮ ಮತ್ತು ಅವರಲ್ಲಿರುವ ಉತ್ಸಾಹವನ್ನು ಪ್ರೇಕ್ಷಕರು ಕಾಣಲಿದ್ದಾರೆ ಎಂದೂ ಅವರು ಸುಳಿವು ನೀಡಿದ್ದಾರೆ.

ಟ್ರೈಲರ್ ಕುರಿತ ತಮ್ಮ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದು, ಕಿಯಾರಾ ಅವರ ಕಠಿಣ ಪರಿಶ್ರಮ ಮತ್ತು ಉತ್ಸಾಹ - ಇವೆಲ್ಲವೂ ದೊಡ್ಡ ಪರದೆಯ ಮೇಲೆ ಕಾಣಿಸಲಿದೆ. ಇದು ನಿಮ್ಮ ಅತ್ಯುತ್ತಮ ಚಿತ್ರಗಳಲ್ಲಿ ಒಂದಾಗಲಿದೆ ಕೀ (Ki)!! ಗೀತು ಮೋಹನ್ ದಾಸ್, ಯಶ್ ಹಾಗೂ ಇಡೀ ತಂಡ ಸೃಷ್ಟಿಸಿರುವ ಮ್ಯಾಜಿಕ್ ಅನ್ನು ನೋಡಲು ನಾನು ಕಾತರನಾಗಿದ್ದೇನೆ. #Toxic ತಂಡಕ್ಕೆ ಶುಭಾಶಯಗಳು. ಆಗಸ್ಟ್ 26ಕ್ಕಾಗಿ ಕಾಯುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಕಿಯಾರಾ ಪಾತ್ರದ ಬಗ್ಗೆ ಆನ್‌ಲೈನ್‌ನಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವಂತೆಯೇ ಸಿದ್ಧಾರ್ಥ್ ಅವರ ಈ ಪ್ರತಿಕ್ರಿಯೆ ಸಹಜವಾಗಿಯೇ ಅಭಿಮಾನಿಗಳ ಗಮನ ಸೆಳೆದಿದೆ. ವಿವಾದದತ್ತ ಗಮನಹರಿಸುವ ಬದಲು, ಸಿದ್ಧಾರ್ಥ್ ಅವರು ಕಿಯಾರಾ ಅವರ ಕೆಲಸ ಮತ್ತು ಬದ್ಧತೆಯನ್ನು ಎತ್ತಿ ತೋರಿಸಲು ಆಯ್ಕೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ