ಮಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂಬರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಇಂದು ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟ ಯಶ್ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು.
ನಂತರ ಯಶ್ ಮತ್ತು ಚಿತ್ರದ ನಿರ್ಮಾಪಕ ವೆಂಕಟ್ ಕೆ ನಾರಾಯಣ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನಿಗೆ ನಾಳೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸುತ್ತಿದ್ದಾರೆ.
ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗುವ ಮುನ್ನ ಯಶ್ ಅವರ ಧರ್ಮಸ್ಥಳ ಭೇಟಿ ನಡೆಯುತ್ತಿದೆ. ಸಾಮಾನ್ಯವಾಗಿ ಈ ಹಿಂದೆಯೂ ಅವರು ತಮ್ಮ ಚಿತ್ರಗಳ ಬಿಡುಗಡೆ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಅದೇ ಸಂಪ್ರದಾಯವನ್ನು ಈ ಬಾರಿ ಮುಂದುವರಿಸಿದ್ದಾರೆ.