ನಟಿ ಶ್ವೇತಾ ಲಕ್ಷ್ಮಣ್ ಮತ್ತು ಶಿವಕುಮಾರ್ ಕಾಸರಂ 
ಸಿನಿಮಾ ಸುದ್ದಿ

ಸಿನಿಮಾ ಇಷ್ಟವಾಗಲಿಲ್ಲ ಅಂದ್ರೆ ನಾನು ನಡು ರಸ್ತೆಯಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಪ್ರೇಕ್ಷಕರಿಗೆ ನಟಿ ಶ್ವೇತಾ ಚಾಲೆಂಜ್; ವಿಡಿಯೋ ವೈರಲ್!

‘ತಮ್ಮ ಸಿನಿಮಾ ಇಷ್ಟವಾಗಲಿಲ್ಲವೆಂದರೆ ನಡು ರಸ್ತೆಯಲ್ಲೇ ನಿಂತುಕೊಂಡು ತಲೆ ಬೋಳಿಸಿಕೊಳ್ಳುತ್ತೇನೆ’ ಎಂದು ಸಿನಿಮಾದ ನಾಯಕಿಯೊಬ್ಬರು ಬಹಿರಂಗವಾಗಿಯೇ ಪ್ರೇಕ್ಷಕರಿಗೆ ಸವಾಲು ಹಾಕಿದ್ದಾರೆ.

ಇತ್ತೀಚಿನ ದಿನಗಳಲ್ಲಿ, ನಟರು ಮತ್ತು ನಿರ್ದೇಶಕರು ತಮ್ಮ ಚಿತ್ರಗಳ ಬಗ್ಗೆ ದಿಟ್ಟ ಹೇಳಿಕೆ ನೀಡುವುದು ಸಾಮಾನ್ಯ. ಆದರೆ ಸಿನಿಮಾದ ನಾಯಕಿಯೊಬ್ಬರು ತಮ್ಮ ಸಿನಿಮಾ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

‘ತಮ್ಮ ಸಿನಿಮಾ ಇಷ್ಟವಾಗಲಿಲ್ಲವೆಂದರೆ ನಡು ರಸ್ತೆಯಲ್ಲೇ ನಿಂತುಕೊಂಡು ತಲೆ ಬೋಳಿಸಿಕೊಳ್ಳುತ್ತೇನೆ’ ಎಂದು ಸಿನಿಮಾದ ನಾಯಕಿಯೊಬ್ಬರು ಬಹಿರಂಗವಾಗಿಯೇ ಪ್ರೇಕ್ಷಕರಿಗೆ ಸವಾಲು ಹಾಕಿದ್ದಾರೆ.

ತೆಲುಗಿನ ‘ಸಹಾ’ ಎಂಬ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಈ ಸಿನಿಮಾನಲ್ಲಿ ನಟಿ ಶ್ವೇತಾ ಲಕ್ಷ್ಮಣನ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಬಹುತೇಕ ಹೊಸಬರೇ ಸೇರಿ ಮಾಡಿರುವ ಸಿನಿಮಾ ಇದಾಗಿದ್ದು, ಇತ್ತೀಚೆಗಷ್ಟೆ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡಿದ ನಟಿ ಶ್ವೇತಾ ಲಕ್ಷ್ಮಣನ್, ‘ನಮ್ಮ ಬಳಿ ಹಣ ಇರಲಿಲ್ಲ, ಆದರೆ ಸಿನಿಮಾದ ಮೇಲೆ ನಂಬಿಕೆ ಇತ್ತು. ಎಲ್ಲರೂ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ದಯವಿಟ್ಟು ಸಿನಮಾ ನೋಡಿ’ ಎಂದರು.

‘ಈ ಸಿನಿಮಾ ನಿಮಗೆ ಖಂಡಿತ ನಿರಾಸೆ ಮಾಡುವುದಿಲ್ಲ. ಚಿತ್ರಮಂದಿರಕ್ಕೆ ಹೋಗಿ ನೀವು ಎಂಜಾಯ್ ಮಾಡಲಿಲ್ಲವೆಂದರೆ ನಾನು ಚಾಲೆಂಜ್ ಮಾಡುತ್ತೇನೆ, ಅಮೀರ್ ಪೇಟ್ ಸರ್ಕಲ್​​ನಲ್ಲಿ ನಿಂತು ತಲೆ ಬೋಳಿಸಿಕೊಳ್ಳುತ್ತೇನೆ’ ಎಂದಿದ್ದಾರೆ.

‘ತೆಲುಗು ಪ್ರೇಕ್ಷಕರು ಒಳ್ಳೆಯ ಸಿನಿಮಾ ಕೈಬಿಡುವುದಿಲ್ಲ ಎಂಬ ನಂಬಿಕೆ ಇದೆ. ನಾವು ಒಂದೊಳ್ಳೆ ಕಂಟೆಂಟ್ ತೆಗೆದುಕೊಂಡು ಬಂದಿದ್ದೇವೆ. ಒಳ್ಳೆಯ ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುತ್ತಿದ್ದೇವೆ ಮತ್ತು ಕಡಿಮೆ ದರಕ್ಕೆ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ಸಿನಿಮಾ ಹಿಟ್ ಮಾಡುವುದು ನಿಮ್ಮ ಜವಾಬ್ದಾರಿ’ ಎಂದು ನಟಿ ಶ್ವೇತಾ ಹೇಳಿದ್ದು, ಅವರ ವಿಡಿಯೋ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ; ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ!

'ಹನೂರು ಎನ್‌ಕೌಂಟರ್'ಗೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಪ್ಯಾಂಗೋಲಿನ್ ಕಳ್ಳಸಾಗಣೆ ಜಾಲ ಪತ್ತೆ!

ನೂರಾರು ಪುರುಷರ ಮುಂದೆ ಒಳ ಉಡುಪಿನಲ್ಲಿ ಡ್ಯಾನ್ಸ್: ಶೂಟಿಂಗ್ ವೇಳೆ ಅನುಭವಿಸಿದ ಮುಜುಗರವನ್ನು ಹಂಚಿಕೊಂಡ ಬಾಲಿವುಡ್ ನಟಿ ದಿಯಾ ಮಿರ್ಜಾ!

ರಕ್ಷಾ ಬಂಧನ ಸಂದರ್ಭದಲ್ಲಿ ಶಾಂತಿಯ ಜಪ: ಬಾಬಾ ರಾಮದೇವ್, ಬಾಲಿವುಡ್ ನಟಿ ಕಂಗನಾ ರಣಾವತ್ ಒಂದಾದ್ರಾ?