ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ತುಳುನಾಡ ಕಥೆ ಹೊಂದಿರುವ 'ರಾಜನಿವಾಸ' ಏಪ್ರಿಲ್‌ನಲ್ಲಿ ತೆರೆಗೆ?

ರಾಜ‌‌ನಿವಾಸ ಟ್ರೇಲರ್ ನೋಡಿದರೆ ತಕ್ಷಣ ಕಾಂತಾರದ ಝಲಕ್ ಕಾಣಿಸೀತು. ಆದರೆ ಇದು ಕಾಂತಾರಕ್ಕಿಂತಲೂ‌ ಮೊದಲೇ ತಯಾರಾದಂಥ ಕಥೆ. ಆದರೆ ಕೃತಿ ರೂಪಕ್ಕೆ ಇಳಿದು ಪರದೆಗೆ ಸಿದ್ಧಗೊಳ್ಳಲು ಇಷ್ಟು ಸಮಯ ತೆಗೆದುಕೊಂಡಿದೆ. ನಿಜ ಹೇಳಬೇಕೆಂದರೆ ಕಾಂತಾರ ಬಂದ ಬಳಿಕ‌ ಹೋಲಿಕೆಯ ಆರೋಪ ಎದುರಾದೀತು...

ರಾಜ‌‌ನಿವಾಸ ಟ್ರೇಲರ್ ನೋಡಿದರೆ ತಕ್ಷಣ ಕಾಂತಾರದ ಝಲಕ್ ಕಾಣಿಸೀತು. ಆದರೆ ಇದು ಕಾಂತಾರಕ್ಕಿಂತಲೂ‌ ಮೊದಲೇ ತಯಾರಾದಂಥ ಕಥೆ. ಆದರೆ ಕೃತಿ ರೂಪಕ್ಕೆ ಇಳಿದು ಪರದೆಗೆ ಸಿದ್ಧಗೊಳ್ಳಲು ಇಷ್ಟು ಸಮಯ ತೆಗೆದುಕೊಂಡಿದೆ. ನಿಜ ಹೇಳಬೇಕೆಂದರೆ ಕಾಂತಾರ ಬಂದ ಬಳಿಕ‌ ಹೋಲಿಕೆಯ ಆರೋಪ ಎದುರಾದೀತು ಎಂದು ಸಾಕಷ್ಟು ಬದಲಾವಣೆಯನ್ನು ಕೂಡ ಮಾಡಲಾಗಿದೆ. ಆದರೆ ಇದು ತುಳುನಾಡು ಭಾಗದ ಕಥೆಯಾದ ಕಾರಣ ಸಹಜವಾಗಿ ಒಂದಷ್ಟು ಹೋಲಿಕೆಗಳು ಕಾಣುತ್ತವೆ. ಆದರೆ ಚಿತ್ರದಲ್ಲಿ ಬೇರೆಯೇ ಕಥೆ ಇದೆ ಎನ್ನುತ್ತಾರೆ ನಿರ್ದೇಶಕ ಮಿಥುನ್ ಸುವರ್ಣ.

ರಾಜ‌ನಿವಾಸದಲ್ಲಿ ನಾಯಕ ಪಾತ್ರ ನಿರ್ವಹಿಸಿ ರಾಜನಂತೆ ಮೆರೆದಾಡಿರುವವರು ರಾಘವ್. ಹಾಡು ಮತ್ತು ಹೊಡೆದಾಟದ ಗ್ಲಿಂಪ್ಸ್ ಕಂಡವರಿಗೆ ಇದೊಂದು ಮಾಸ್ ಮೂವಿಯಾಗುವ ಎಲ್ಲ ಲಕ್ಷಣಗಳು ಗೋಚರಿಸಿದೆ.‌ ನಾಯಕಿಯಾಗಿ ಕೃತ್ತಿಕಾ ಕಂಗೊಳಿಸಿದ್ದಾರೆ. ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿರುವುದು ಮೇಲ್ನೋಟಕ್ಕೆ ಎದ್ದು ಕಾಣಿಸಿದೆ. ಈ ಎಲ್ಲ ಕಾರಣಗಳಿಂದಲೇ ರಾಜ‌ನಿವಾಸ ಕುತೂಹಲ ಮೂಡಿಸಿದೆ.

ಟ್ರೇಲರ್ ಮತ್ತು ಮೂರು ಹಾಡುಗಳು ಈಗಾಗಲೇ ಸಿನಿಮಾ ಪ್ರಿಯರ ಮನಗೆದ್ದಿದೆ. ಟ್ರೇಲರ್ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು ಪ್ಯಾನ್ ಇಂಡಿಯಾದಲ್ಲಿ ನಿರೀಕ್ಷೆ ಸೃಷ್ಟಿಸಿದೆ. ಸಿನಿಮಾರಂಗದ ಅನೇಕರು ರಾಜನಿವಾಸ ಈ ವರ್ಷದ ಅತ್ಯುತ್ತಮ ಚಿತ್ರವಾಗಲಿದೆ ಎಂದಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಕ್ತಾಯ ಹಂತದಲ್ಲಿದೆ. ಇದೇ ತಿಂಗಳಾಂತ್ಯಕ್ಕೆ‌ ಬಿಡುಗಡೆ ದಿನಾಂಕವನ್ನು ಘೋಷಿಸಲಾಗುತ್ತದೆ.

ಕನ್ನಡದ‌ ದೊಡ್ಡ ವಿತರಕ ಸಂಸ್ಥೆಗಳು ಸಿನಿಮಾ ಬಿಡುಗಡೆಗೆ ಕೇಳುತ್ತಿದ್ದಾರೆ ಮತ್ತು ತಮಿಳು, ತೆಲುಗು ಭಾಷೆಯಲ್ಲೂ ಬೇಡಿಕೆ ಇದೆ ಎನ್ನುತ್ತಿದ್ದಾರೆ ನಿರ್ಮಾಪಕರು. ರಾಜ‌ನಿವಾಸ ಚಿತ್ರವನ್ನು ಡಿಎಎಂ36ಸ್ಟುಡೀಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ‌ ಮಾಡಲಾಗಿದೆ. ದಾ. ಪಿ ಆಂಜನಪ್ಪ ನಿರ್ಮಾಪಕರು. ಸಹ ನಿರ್ಮಾಪಕರಾಗಿ ಲೋಕೇಶ್ ಗೌಡ ಬಂಡವಾಳ ಹೂಡಿದ್ದಾರೆ.‌ ಬಲ ರಾಜ್ವಾಡಿ, ಯಮುನಾ ಶ್ರೀನಿಧಿ, ನೀನಾಸಂ ಅಶ್ವಥ್, ಸಹನ, ಪ್ರಶಾಂತ್‌ ಮೊದಲಾದ ಕಲಾವಿದರು ಪ್ರಮುಖ‌ ಪಾತ್ರಗಳನ್ನು ನಿಭಾಯಿಸಿದ್ದಾರೆ. ವಿಜಯ್ ಯಾರ್ಡ್ಲಿ ಸಂಗೀತ ನಿರ್ದೇಶನ ಇರುವ ರಾಜ‌ನಿವಾಸದ ಛಾಯಾಗ್ರಹಣ ರಮೇಶ್ ರಾಜ್ ಅವರದ್ದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

SCROLL FOR NEXT