'ಗತವೈಭವ' ಸಿನಿಮಾ ನಟ ದುಷ್ಯಂತ್ ಮಾಜಿ ಸಂಸದ ಮುದ್ದ ಹನುಮೇಗೌಡರ ಪುತ್ರಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇತ್ತೀಚೆಗೆ ಎಂಗೇಜ್ಮೆಂಟ್ ಕೂಡ ನಡೆದಿತ್ತು.
ಇಂದು( ಫೆಬ್ರುವರಿ 26) ಬೆಂಗಳೂರಿನ ಚಾಮರ ವಜ್ರದಲ್ಲಿ ನಡೆದ ಅದ್ಧೂರಿ ಕಲ್ಯಾಣೋತ್ಸವದಲ್ಲಿ ರಚನಾ- ದುಷ್ಯಂತ್ ಸಪ್ತಪದಿ ತುಳಿದಿದ್ದಾರೆ. ವಿವಾಹ ಸಮಾರಂಭಕ್ಕೆ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಆಯೋಜಿಸಿದ್ದಾರೆ.
ಸಿಂಪಲ್ ಸುನಿ ನಿರ್ದೇಶನದ ʻಗತವೈಭವʼ ಸಿನಿಮಾ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿದ ದುಷ್ಯಂತ್, ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್ಆರ್ ಶ್ರೀನಿವಾಸ್ ಅವರ ಪುತ್ರರಾಗಿದ್ದಾರೆ. ಇನ್ನೂ, ದುಷ್ಯಂತ್ ಭಾವಿ ಪತ್ನಿ ರಚನಾ ಅವರು ಮಾಜಿ ಸಂಸದ ಮುದ್ದಹನುಮೇಗೌಡ ಅವರ ಪುತ್ರಿಯಾಗಿದ್ದು, ಈ ಮದುವೆಯ ಮೂಲಕ ಎರಡು ಪ್ರಭಾವಿ ರಾಜಕೀಯ ಕುಟುಂಬಗಳು ಸಂಬಂಧ ಬೆಳೆಸುತ್ತಿವೆ.