ರಚನಾ ಮತ್ತು ದುಷ್ಯಂತ್ 
ಸಿನಿಮಾ ಸುದ್ದಿ

ಮಾಜಿ ಸಂಸದ ಮುದ್ದಹನುಮೇಗೌಡ ಪುತ್ರಿ ರಚನಾ ಜೊತೆ ನಟ ದುಷ್ಯಂತ್ ಶ್ರೀನಿವಾಸ್ ಅದ್ಧೂರಿ ವಿವಾಹ

ಇಂದು( ಫೆಬ್ರುವರಿ 26) ಬೆಂಗಳೂರಿನ ಚಾಮರ ವಜ್ರದಲ್ಲಿ ನಡೆದ ಅದ್ಧೂರಿ ಕಲ್ಯಾಣೋತ್ಸವದಲ್ಲಿ ರಚನಾ- ದುಷ್ಯಂತ್ ಸಪ್ತಪದಿ ತುಳಿದಿದ್ದಾರೆ.

'ಗತವೈಭವ' ಸಿನಿಮಾ ನಟ ದುಷ್ಯಂತ್‌ ಮಾಜಿ ಸಂಸದ ಮುದ್ದ ಹನುಮೇಗೌಡರ ಪುತ್ರಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇತ್ತೀಚೆಗೆ ಎಂಗೇಜ್‌ಮೆಂಟ್‌ ಕೂಡ ನಡೆದಿತ್ತು.

ಇಂದು( ಫೆಬ್ರುವರಿ 26) ಬೆಂಗಳೂರಿನ ಚಾಮರ ವಜ್ರದಲ್ಲಿ ನಡೆದ ಅದ್ಧೂರಿ ಕಲ್ಯಾಣೋತ್ಸವದಲ್ಲಿ ರಚನಾ- ದುಷ್ಯಂತ್ ಸಪ್ತಪದಿ ತುಳಿದಿದ್ದಾರೆ. ವಿವಾಹ ಸಮಾರಂಭಕ್ಕೆ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಆಯೋಜಿಸಿದ್ದಾರೆ.

ಸಿಂಪಲ್‌ ಸುನಿ ನಿರ್ದೇಶನದ ʻಗತವೈಭವʼ ಸಿನಿಮಾ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿದ ದುಷ್ಯಂತ್‌, ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್‌ಆರ್‌ ಶ್ರೀನಿವಾಸ್‌ ಅವರ ಪುತ್ರರಾಗಿದ್ದಾರೆ. ಇನ್ನೂ, ದುಷ್ಯಂತ್‌ ಭಾವಿ ಪತ್ನಿ ರಚನಾ ಅವರು ಮಾಜಿ ಸಂಸದ ಮುದ್ದಹನುಮೇಗೌಡ ಅವರ ಪುತ್ರಿಯಾಗಿದ್ದು, ಈ ಮದುವೆಯ ಮೂಲಕ ಎರಡು ಪ್ರಭಾವಿ ರಾಜಕೀಯ ಕುಟುಂಬಗಳು ಸಂಬಂಧ ಬೆಳೆಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT